ವಿಜಯಪುರ | ಟಿಪ್ಪು ಕ್ರಾಂತಿ ಸೇನೆಯಿಂದ ಟಿಪ್ಪು ಜಯಂತಿ ಕಾರ್ಯಕ್ರಮ

Date:

Advertisements

ದೇಶಕ್ಕಾಗಿ ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿದ ಮಹಾನ್ ದೇಶಭಕ್ತ ಟಿಪ್ಪು ಸುಲ್ತಾನ್ ಅವರ ದೇಶಭಕ್ತಿ ಹಾಗೂ ಆದರ್ಶಗಳು ನಮಗೆ ದಾರಿದೀಪ ಎಂದು ಟಿಪ್ಪು ಕ್ರಾಂತಿ ಸೇನೆಯ ಅಧ್ಯಕ್ಷ ಖಾಜಂಬರ್ ನದಾಫ್ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಟಿಪ್ಪು ಸುಲ್ತಾನ್ ತನ್ನ ಕೊನೆಯ ಉಸಿರು ಇರುವವರೆಗೂ ಅಪಾರ ದೇಶಪ್ರೇಮದೊಂದಿಗೆ ದೇಶಕ್ಕಾಗಿ ಹೋರಾಟಿದ್ದಾರೆ. ಅವರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾನ್ ಪರಾಕ್ರಮಿ” ಎಂದು ಹೇಳಿದ್ದಾರೆ.

“ದೇಶದ ಹಿತಕ್ಕಾಗಿ ತನ್ನ ಮಕ್ಕಳನ್ನು ಸಹ ಒತ್ತೆಯಿಟ್ಟು ಹೊರಾಡಿದವರು ಟಿಪ್ಪು ಸುಲ್ತಾನ್” ಎಂದು ತಿಳಿಸಿದ್ದಾರೆ.

Advertisements

ಕಾರ್ಯಕ್ರಮದಲ್ಲಿ ಟಿಪ್ಪು ಕ್ರಾಂತಿ ಸೇನೆ ಕಾರ್ಯದರ್ಶಿ ನಾಸಿರ್ ತಾಂಬೊಲಿ, ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ಆಬೀದ ತಾಂಬೊಳಿ, ಹೈದರ್ ಅಲಿ, ಗೋಪಿ ಭಜಂತ್ರಿ, ತೌಶಿಫ ಭೈರೊಡಗಿ, ಅಲ್ತಾಫ್ ತಾಂಬೋಲಿ, ಸಲೀಂ ಮಮದಾಪೂರ, ಅಜಾದ್ ಜಾಲವಾದ, ನಬಿಲಾಲ ವಾಲಿಕಾರ, ಸದ್ದಾಂ ಕೊರಬು, ಅನ್ಸಾರ್ ನದಾಫ್ ಹಾಗೂ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X