ವಿಜಯಪುರ | ಇಂಗಳೇಶ್ವರ ಮಠದ ಚನ್ನಬಸವ ಶ್ರೀಗೆ ಗೌರವ ಸಮರ್ಪಣೆ

Date:

Advertisements

ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಇಂಗಳೇಶ್ವರ ವಿರಕ್ತಮಠದ ಹಿರಿಯ ಪೂಜ್ಯರಾದ ಶ್ರೀ ಚನ್ನಬಸವ ಸ್ವಾಮೀಜಿ ಅವರನ್ನು ಜಿಲ್ಲಾ ಹಾಗೂ ಬಸವನ ಬಾಗೇವಾಡಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸನ್ಮಾನ ಮಾಡಿ ಗೌರವ ಸಮರ್ಪಿಸಿದರು.

ಜಿಲ್ಲಾ ಕಸಾಪ ಗೌರವ ಸಲಹೆಗಾರ ಡಾ. ವಿ ಡಿ ಐಹೊಳ್ಳಿ ಮಾತನಾಡಿ, “ಬಹುಕಾಲದವರೆಗೆ ವಚನ ಸಾಹಿತ್ಯದ ಸೇವೆ ಮಾಡುತ್ತ ಅಪರೂಪದ ವಚನ ಶಿಲಾ ಮಂಟಪವನ್ನು ಸ್ಥಾಪಿಸಿ ನಾಡಿನ ಘನತೆ, ಗೌರವವನ್ನು ಹೆಚ್ಚಿಸಿದ ಶ್ರೀಗಳು ಸಮ್ಮೇಳನದ ಸವಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಜಿಲ್ಲೆಯ ಎಲ್ಲ ಶ್ರೀಗಳಿಗೂ ಹಾಗೂ ಸಾಹಿತಿಗಳಿಗೂ ವಿಶೇಷವಾಗಿ ಅನೇಕ ಕನ್ನಡಪರ ಸಂಘಟನೆಗಳಿಗೂ ಅತೀವ ಸಂತೋಷವನ್ನುಂಟು ಮಾಡಿದೆ. ಮುಂದಿನ ದಿನಗಳಲ್ಲಿ ಶ್ರೀಗಳಿಂದ ಇನ್ನೂ ಹೆಚ್ಚಿನ ಮಾರ್ಗದರ್ಶನ ಸಿಗುವಂತಾಗಲಿ” ಎಂದರು.

ಬಸವನ ಬಾಗೇವಾಡಿ ತಾಲೂಕಿನ ಹಿರಿಯ ಸಾಹಿತಿ ವಿವೇಕಾನಂದ ಕಲ್ಯಾಣ ಶೆಟ್ಟಿ ಮಾತನಾಡಿ, “ಶ್ರೀಗಳು ಕನ್ನಡದ ಅಭಿಮಾನಿಗಳು. ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯದ ಕೊಡುಗೆ ಅಪಾರವಾಗಿದ್ದು, ಅದನ್ನು ಉಳಿಸಿ ಬೆಳೆಸಿದ ಕೀರ್ತಿ ಇಂಗಳೇಶ್ವರ ವಿರಕ್ತಮಠಕ್ಕೆ ಸಲ್ಲುತ್ತದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ?: ವಿಜಯಪುರ | ರೈತರಿಗೆ ಸಹಕರಿಸಲು ವಿದ್ಯಾರ್ಥಿಗಳು ಸಿದ್ಧರಾಗಿ: ಮಹಾಪ್ರಬಂಧಕ ಕಮ್ಮೂರ

ಈ ವೇಳೆ ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ಅಭಿಷೇಕ ಚಕ್ರವರ್ತಿ, ಡಾ. ಮಾಧವಗುಡಿ, ಸುರೇಶ ಜತ್ತಿ, ಜಯಶ್ರೀ ಹಿರೇಮಠ, ಶಿವಾನಂದ ಡೋಣೂರ, ಬಸವರಾಜ ಮೇಟಿ, ಶಿವಪುತ್ರ ಅಂಕದ, ಅರವಿಂದ ಕುಲಕರ್ಣಿ, ಕುಮಾರಗೌಡ ಪಾಟೀಲ, ರಾಹುಲ್ ಜಾಧವ ಮುಂತಾದವರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X