ವಿಜಯಪುರ | ಎರಡು ಪ್ರತ್ಯೇಕ ರಥೋತ್ಸವಗಳ ವೇಳೆ ಇಬ್ಬರು ಸಾವು

Date:

  • ವಿಜಯಪುರ ಜಿಲ್ಲೆಯಲ್ಲಿ ರಥೋತ್ಸವಕ್ಕೂ ಮುನ್ನ ದುರ್ಘಟನೆ
  • 18ನೇ ವಯಸ್ಸಿನಿಂದಲೂ ರಥದ ಕಲಶ ಕಟ್ಟುತ್ತಿದ್ದ ಖಾಜಾಪಾಟೇಲ್ ಸಾವು

ವಿಜಯಪುರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ರಥೋತ್ಸವದಲ್ಲಿ ಎರಡು ದುರ್ಘಟನೆಗಳು ನಡೆದಿವೆ. ಜಿಲ್ಲೆಯ ಸಿಂದಗಿ ತಾಲೂಕಿನ ಗೊಲಗೇರಿ ಗ್ರಾಮದಲ್ಲಿ ಗೊಲ್ಲಾಳೇಶ್ವರ ರಥೋತ್ಸವದ ವೇಳೆ ರಥದ ಕಲಶ ಕಟ್ಟುತ್ತಿದ್ದಾಗ ಜಾರಿ ಬಿದ್ದು ವ್ಯಕ್ತಿ ಮೃತಪಟ್ಟಿದ್ದರೆ, ಬಸರಕೋಡ ಗ್ರಾಮದಲ್ಲಿ ರಥದ ಚಕ್ರಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.

ಸಾಹೇಬಪಟೇಲ್ ಖಾಜಾಪಟೇಲ್ ಕಾಚಾಪುರ (55) ಎಂಬವರು ರಥದ ತುತ್ತತುದಿಯಲ್ಲಿ ಕಲಶ ಕಟ್ಟುತ್ತಿದ್ದರು. ಈ ವೇಳೆ ಅವರು ಕಾಲು ಜಾರಿ ರಥದಿಂದ ಬಿದ್ದಿದ್ದಾರೆ. ಕೂಡಲೇ ಗ್ರಾಮಸ್ಥರು ಗಾಯಾಳು ಖಾಜಾಪಟೇಲ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ, ಅವರು ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅವರು ತಮ್ಮ 18ನೇ ವಯಸ್ಸಿನಿಂದಲೂ ರಥದ ಕಲಶ ಕಟ್ಟುವ ಕಾರ್ಯ ಮಾಡುತ್ತಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ. ದುರ್ಘಟನೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಥೋತ್ಸವವನ್ನು ರದ್ದುಗೊಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ಐ, ಪೇದೆ

ಬಸರಕೋಡ ಗ್ರಾಮದಲ್ಲಿ ರಥೋತ್ಸವ ವೇಳೆ ದುರ್ಘಟನೆ

ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಬಸರಕೋಡ ಗ್ರಾಮದಲ್ಲಿ ಪವಾಡ ಬಸವೇಶ್ವರ ಜಾತ್ರೆಯ ಪ್ರಯುಕ್ತ ರಥೋತ್ಸವ ನಡೆಸಲಾಗುತ್ತಿತ್ತು. ರಥ ಎಳೆಯುತ್ತಿದ್ದ ವೇಳೆ ನಾಗರಾಜ್ ಯಲ್ಲಪ್ಪ ವಣಕ್ಯಾಳ ಎಂಬ ಯುವಕ ರಥದ ಚಕ್ರದಡಿ ಬಿದ್ದಿದ್ದಾನೆ. ಬಳಿಕ ಆತನ ಎರಡೂ ಕಾಲುಗಳ ಮೇಲೆ ಕಲ್ಲಿನ ಚಕ್ರ ಹರಿದು ಹೋಗಿದೆ. ಕೂಡಲೇ ಗಾಯಾಳು ನಾಗರಾಜ್ ಯಲ್ಲಪ್ಪನನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೂ ಚಿಕಿತ್ಸೆ ಫಲಿಸದೆ ಯುವಕ ಮೃತಪಟ್ಟಿದ್ದಾನೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಪರ್‌ಜಾಯ್‌ ಚಂಡಮಾರುತ; ಕೆಲವೆಡೆ ಸೃಷ್ಟಿಯಾದ ಅವಾಂತರ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಬಿಪರ್‌ಜಾಯ್ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದ...

ಚಿತ್ರದುರ್ಗ | ಬಿತ್ತನೆ ಬೀಜದ ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ವಿತರಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಬಿತ್ತನೆಗೆ ರೈತರು ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಬಿತ್ತನೆ...

ಯಾದಗಿರಿ | ಗೋಗಡಿಹಾಳ ಗ್ರಾಮದ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರ ನೇಮಕಕ್ಕೆ ಒತ್ತಾಯ

ಗೋಗಡಿಹಾಳ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಸರ್ಕಾರಿ...

ಸರ್ಕಾರಿ ಶಿಕ್ಷಕರ ಗೈರು ಹಾಜರಿ ತಡೆಗೆ ‘ಜಿಪಿಎಸ್‌’ ಕ್ರಮ

ಕಲಬುರಗಿ ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯ ವ್ಯಾಪ್ತಿಯಲ್ಲಿರುವ ಎಲ್ಲ ಸರ್ಕಾರಿ...