“ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ಮತ್ತು ಮಹಿಳಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಮಹಿಳಾ ವಿಶ್ವವಿದ್ಯಾಲಯ ಸ್ಥಾಪನೆಯಾಗಿದೆ. ಆದರೆ ಇಲ್ಲಿ ವಿದ್ಯಾರ್ಥಿನಿಯರಿಗೆ ಸುಳ್ಳು ಮಾಹಿತಿ ನೀಡುವ ಮೂಲಕ ವಸತಿ ಪ್ರವೇಶ ನೀಡಿ, ಇದೀಗ ಏಕಾಏಕಿ 3 ವರ್ಷದ ಶುಲ್ಕ ಕಟ್ಟಿಬೇಕು ಎನ್ನುತ್ತಿದ್ದಾರೆ. ಬಡ ದಲಿತ ವಿದ್ಯಾರ್ಥಿಗಳಿಂದ ದುಡ್ಡು ವಸೂಲಿಗೆ ಇಳಿದಿರುವುದೂ ದುರಂತ. ಡಿವಿಪಿ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ ಅಸಮಾಧಾನ ವ್ಯಕ್ತಪಡಿಸಿದರು.
ವಿಜಯಪುರ ಪಟ್ಟಣದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಂದ ಮೂರು ವರ್ಷದ ಹೆಚ್ಚಿನ ಶುಲ್ಕವನ್ನು ಕಟ್ಟಬೇಕು ಎಂಬುಬುದನ್ನು ಖಂಡಿಸಿ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಎದುರು ಪ್ರತಿಭಟಿಸಿ ಮಾತನಾಡಿದರು.
“ವಿದ್ಯಾರ್ಥಿಗಳು ಶುಲ್ಕ ಕಟ್ಟದ್ದಿದರೆ ಶೈಕ್ಷಣಿಕ “ಕೆರೆನ್ಸ್” ನೀಡುವುದಿಲ್ಲ ಎನ್ನುವ ಉದ್ಧಟತನದ ಮಾತುಗಳನ್ನಡುತ್ತಾರೆ. ಇದರಿಂದ ವಿದ್ಯಾರ್ಥಿಗಳಲ್ಲಿ ಆತಂಕ ನಿರ್ಮಾಣವಾಗಿದೆ. ಶುಲ್ಕ ಕಟ್ಟುವ ನೆಪದಲ್ಲಿ ನಿಲಯ ಪಾಲಕರುಗಳು ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸುವುದು ನೋಡಿದರೆ ವಿಶ್ವವಿದ್ಯಾಲಯ ಅಸಮಾನತೆ ನಿವಾರಣೆ ಮಾಡುವ ಉದ್ದೇಶ ಕೈಬಿಟ್ಟು ದುಡ್ಡು ಮಾಡುವ ಕೇಂದ್ರವಾಗಿ ಮಾರ್ಪಟ್ಟಂತೆ ಕಾಣುತ್ತದೆ” ಎಂದು ಸಂಶಯ ವ್ಯಕ್ತಪಡಿಸಿದರು.
ಜಿಲ್ಲಾ ಸಂಚಾಲಕ ಅಕ್ಷಯಕುಮಾರ ಅಜಮನಿ ಮಾತನಾಡಿ, “ವಿಶ್ವ ವಿದ್ಯಾಲಯದಲ್ಲಿನ ಭ್ರಷ್ಟ ವ್ಯವಸ್ಥೆಯ ನೇರ ಕಾರಣವಾಗಿದೆ. ವಿಶ್ವ ವಿದ್ಯಾಲಯ ತನ್ನ ಗುರಿ ಉದ್ದೇಶ ಮರೆತಿದ್ದೆ. ವಿದ್ಯಾರ್ಥಿನಿಯರಿಗೆ ಮೂಲಭೂತ ಸೌಕರ್ಯಗಳ ಕೊರತೆ, ವಸತಿ ನಿಲಯಗಳಲ್ಲಿ ಕಳಪೆ ಆದ
ಆಹಾರ ವಿತರಣೆ, ಮೌಲ್ಯಮಾಪನ ವಿಭಾಗದಲ್ಲಿ ನಡೆಯುತ್ತಿರುವ ಅಕ್ರಮಗಳು, ಖರೀದಿ ಹೆಸರಿನಲ್ಲಿ ಹಣಕಾಸಿನ ದುರುಪಯೋಗ ಮಾಡಿಕೊಲ್ಲುವುದು ಕಂಡು ಬಂದಿದೆ. ವಿಶ್ವವಿದ್ಯಾಲಯದ ಆವರಣದಲ್ಲಿ ಪದವಿ ಕೊರ್ಸಗಳನ್ನು ಆರಂಭವಾದರೂ ಸೂಕ್ತ ಭೋಧಕ ಸಿಬ್ಬಂದಿ ನೇಮಕ ಮಾಡಿಕೊಂಡಿಲ್ಲ. ಹೀಗಾದರೆ ಇಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಹೇಗೆ ಗುಣಮಟ್ಟದ ಶಿಕ್ಷಣ ಸಿಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಶ್ವ ವಿದ್ಯಾಲಯ ಶೈಕ್ಷಣಿಕ ಅಭಿವೃದ್ಧಿ ಕಡೆ ಗಮನ ಹರಿಸಬೇಕಾಗಿದೆ. ಭ್ರಷ್ಟ ವ್ಯವಸ್ಥೆಗೆ ಕಡಿವಾಣ ಹಾಕಿ ವಿದ್ಯಾರ್ಥಿನಿ ಸ್ನೇಹಿ ವಾತಾವರಣ ನಿರ್ಮಾಣ ಮಾಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ” ಎಂದರು.
ಈ ಸುದ್ದಿ ಓದಿದ್ದೀರಾ? ಹಾವೇರಿ | ಕರ್ತವ್ಯ ಲೋಪ ಎಸಗಿದ್ದಕ್ಕೆ ಪಿಡಿಒ ಅಮಾನತು
“ವಿಶ್ವ ವಿದ್ಯಾಲಯದಲ್ಲಿ ಪದವಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಸತಿ ಶುಲ್ಕವನ್ನು ಕೂಡಲೆ ರದ್ದುಗೊಳಿಸಬೇಕು. ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ, ಉದ್ದಟತನದ ಮಾತನಾಡುವ ನಿಲಂಯ ಪಾಲಕರನ್ನು ಕೊಡಲೇ ಅಮಾನತು ಮಾಡಬೇಕು” ಎಂದು ಆಗ್ರಹಿಸಿದರು.
“ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
