ವಿಜಯಪುರ | ಇಂದಿನ ಮಕ್ಕಳಿಗೆ ವಚನಗಳು ದಾರಿದೀಪ: ಶಾಲಿನಿ ಮಾಣಿಕ್

Date:

Advertisements

ವಚನಗಳನ್ನು ಓದುವುದರಿಂದ ಮನುಷ್ಯನಲ್ಲಿ ಬದಲಾವಣೆ ತರುತ್ತವೆ. ಇಂದಿನ ಮಕ್ಕಳಿಗೆ ವಚನಗಳು ದಾರಿ ದೀಪ. ಅಲ್ಲಮ ಪ್ರಭುಗಳು ಅಂದಿನ ಕಾಲದಲ್ಲಿ ದೀನ ದಲಿತ ಶೋಷಿತ ವರ್ಗದವರ ಜನರ ಧ್ವನಿಯಾಗಿದ್ದರು ಎಂದು ಶಾಲಿನಿ ಮಾಣಿಕ್ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ಘಟಕ, ತಾಲೂಕು ಮಹಿಳಾ ಕದಳಿ ವೇದಿಕೆ‌, ಮೆಟ್ರಿಕ್ ನಂತರದ ಡಿ ದೇವರಾಜ ಅರಸ್ ವಿದ್ಯಾರ್ಥಿನಿಯರ ವಸತಿ ನಿಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

12ನೇ ಶತಮಾನದ ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದ ಅಧ್ಯಕ್ಷರಾಗಿದ್ದ ಶರಣ ಅಲ್ಲಮಪ್ರಭುಗಳ ಕುರಿತು ಮಾತನಾಡಿ, “ಅಲ್ಲಮಪ್ರಭುಗಳ ವಚನಗಳು ಸರ್ವಕಾಲಿಕ ಸತ್ಯ. ಅನುಭವ ಮಂಟಪದಲ್ಲಿರುವ ಶರಣ ಶರಣೆಯರು ಜತೆಗೂಡಿ ತಮ್ಮ ಅನುಭವದ ಸಾರವನ್ನು ಜನರಿಗೆ ತಿಳಿಸುತ್ತಿದ್ದರು. ಬಸವಣ್ಣನವರು, ಅಕ್ಕಮಹಾದೇವಿಯವರು, ಚನ್ನಬಸವಣ್ಣ ಸಿದ್ದರಾಮಯ್ಯ, ಮಾದರ ಚೆನ್ನಯ್ಯ, ಸಮಗಾರ ಹರಳಯ್ಯ ಇವರ ಜೊತೆಗೂಡಿ ಸಮಾಜವನ್ನು ತಿದ್ದುವ ಕೆಲಸ ಮಾಡಿದರು. ಮನುಷ್ಯ ಕಾಯಕದಿಂದ ಶ್ರೇಷ್ಠನಾಗುತ್ತಾನೆ ಎನ್ನುವ ತತ್ವವನ್ನು ಪ್ರತಿಪಾದಿಸಿದರು” ಎಂದು ಹೇಳಿದರು.

Advertisements

ಪಾರ್ವತಿ ಸೋಮಶೇಖರ್ ಸುರಪುರ, ದತ್ತಿದಾನಿಗಳ ಫೋಟೋ ಪೂಜೆ ಹಾಗೂ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಕದಳಿ ವೇದಿಕೆ ಅಧ್ಯಕ್ಷೆಯಾದ ಗಂಗಾ ಗಲಗಲಿ ತಮ್ಮ ಆಶಯ ನುಡಿಯಲ್ಲಿ ಶರಣ ಸಾಹಿತ್ಯ ಬೆಳೆದು ಬಂದ ಕುರಿತು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಮಕ್ಕಳಿಗೆ ತಪ್ಪದೇ ದಡಾರ ಲಸಿಕೆ ಹಾಕಿಸಬೇಕು: ಡಾ.ಹನುಮಂತಪ್ಪ

ಕಾರ್ಯಕ್ರಮದ ದತ್ತಿದಾನಿ ದಿ. ಸಂಗಮ್ಮ ಸುರಪುರ ಹಾಗೂ ದಿ. ಸಂದೇಶ್ ಸುರಪುರ ಇವರ ಕುರಿತು ಶರಣ ಸಾಹಿತ್ಯ ಅಧ್ಯಕ್ಷ ಬಿ ಎಸ್ ಪಾಟೀಲ್ ದತ್ತಿಸ್ಮರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕುರಿತು ವಸತಿ ಮೇಲ್ವಿಚಾರಿಕಿ ಎಸ್ ಎಸ್ ಜಟಗೊಂಡ ಮಾತನಾಡುತ್ತ, ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾಳೆ” ಎಂದರು.

ಎಸ್ ಐ ಸೂಗೂರು ಸ್ವಾಗತಿಸಿದರು. ನಿರೂಪಣೆ ಕುಮಾರಿ ಐಶ್ವರ್ಯ ಮಾವಿನ ಮರ ಮಾಡಿದರು. ವಿದ್ಯಾರ್ಥಿನಿಯರು ಪ್ರಾರ್ಥನೆ ಗೀತೆ ಹಾಡಿದರು. ಈ ಸಂದರ್ಭದಲ್ಲಿ ಸಾವಿತ್ರಿ ವಾಲಿಕಾರ್ ಸೇರಿದಂತೆ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X