ವಿಜಯಪುರ | ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮೀಸಲಿಟ್ಟ ಆಸ್ತಿ, ಅನುದಾನ ದುರ್ಬಳಕೆ ವಿರುದ್ಧ ವಿಕಾಸ್ ಹೊಸಮನೆ ಧರಣಿ

Date:

Advertisements

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಮೀಸಲಿರುವ ಆಸ್ತಿ, ಅನುದಾನವನ್ನು ದುರ್ಬಳಕ ಮಾಡಿಕೊಂಡು, ಆ ಸಮುದಾಯಗಳ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಇಂತಹ ಅಕ್ರಮಗಳು ನಿಲ್ಲಬೇಕು. ದಲಿತರ ಮೇಲೆ ದೌರ್ಜನ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ದುರ್ಬಳಕೆಯಾದ ಆಸ್ತಿ, ಅನುದಾನವನ್ನು ಹಿಂಪಡೆದು, ಎಸ್‌ಸಿ/ಎಸ್‌ಟಿ ಆಡಳಿತ ಮಂಡಳಿಗೆ ನೀಡಬೇಕೆಂದು ವಿಕಾಸ್ ಹೊಸಮನಿ ಆಗ್ರಹಿಸಿದರು.

ಎಸ್‌ಸಿ/ಎಸ್‌ಟಿ ಅನುದಾನ ದುರ್ಬಳಕೆ ವಿರುದ್ಧ ವಿಜಯಪುರ ಸಮಾಜಕಲ್ಯಾಣ ಇಲಾಖೆ ಕಚೇರಿ ಎದುರು ಕಳೆದ 25 ದಿನಗಳಿಂದ ವಿಕಾಸ್ ಹೊಸಮನಿ ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ. ಇಂಡಿ ತಾಲೂಕಿನ ಎಸ್‌ಸಿ/ಎಸ್‌ಟಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ, ಶ್ರೀ ಶಂಕರಲಿಂಗ ಉಚಿತ ಪ್ರಸಾದ ನಿಲಯವನ್ನು ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಸೇರದವರು ನಕಲಿ ದಾಖಲೆ ಕೊಟ್ಟು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಕೆಲವು ದಲಿತ ಸಮುದಾಯಕ್ಕೆ ಸೇರದವರು ಸಮಾಜ ಕಲ್ಯಾಣ ಇಲಾಖೆಗೆ ನಕಲಿ ದಾಖಲೆಗಳನ್ನು ನೀಡಿ ಅನುದಾನ ಪಡೆದು, ದುರ್ಬಳಕೆ ಮಾಡುತ್ತಿದ್ದಾರೆ. ಹಣಕಾಸು ಮತ್ತು ಇನ್ನಿತರ ದಾಖಲೆಗಳಲ್ಲಿ ಆಕ್ರಮ, ಅವ್ಯವಹಾರ ನಿರಂತರವಾಗಿ ನಡೆಯುತ್ತಿದೆ. ಎಸ್‌ಟಿ/ಎಸ್‌ಟಿ ಸಮುದಾಯಗಳಿಗೆ ಸಿಗಬೇಕಾದ ಶಿಕ್ಷಣ ಸಂಸ್ಥೆಯ ಆಸ್ತಿ, ಅನುದಾನವನ್ನು ಪ್ರಬಲ ಜಾತಿಗರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

Advertisements

ವಿಕಾಸ್ ಹೊಸಮನಿ ಅವರ ಧರಣಿಗೆ ಕರ್ನಾಟಕ ಜೈ ಭೀಮ್ ಆರ್ಮಿ ಏಕತಾ ಮಿಷನ್‌ನ ರಾಜ್ಯ ಅಧ್ಯಕ್ಷ ಮತನ್, ಜಿಲ್ಲಾ ಅಧ್ಯಕ್ಷ ಮಲ್ಲು ಜಾಲಗೇರ ಹಾಗೂ ಸಂಘಟನೆಯ ಕಾರ್ಯಕರ್ತರು ಬೆಂಬಲ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X