ವಿಜಯಪುರ | ಔಪಚಾರಿಕ ಶಿಕ್ಷಣದೊಂದಿಗೆ ವೃತ್ತಿ ಶಿಕ್ಷಣ ವಿಲೀನಗೊಳಿಸಬೇಕು: ರಾಘವೇಂದ್ರ ಪುರೋಹಿತ್

Date:

Advertisements

ಔಪಚಾರಿಕ ಶಿಕ್ಷಣದೊಂದಿಗೆ ವೃತ್ತಿ ಶಿಕ್ಷಣವನ್ನು ವಿಲೀನಗೊಳಿಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಹಾಗೂ ವೃತ್ತಿ ಜೀವನದ ಯೋಜನೆಗಳನ್ನು ತಯಾರು ಮಾಡಲು ಅನುಕೂಲ ಮಾಡುವುದು ಅಗತ್ಯವಿದೆ ಎಂದು ಉಪ ಪ್ರಾಚಾರ್ಯ ರಾಘವೇಂದ್ರ ಎಚ್ ಪುರೋಹಿತ್ ಅಭಿಪ್ರಾಯಪಟ್ಟರು.

ಜಿಲ್ಲೆಯ ಬಬಲೇಶ್ವರ ತಾಲೂಕಿನ ಕರ್ನಾಟಕ ಪಬ್ಲಿಕ್‌ ಶಾಲೆ ಮಮದಾಪುರದಲ್ಲಿ “ರಂಗೋತ್ಸವ ಮತ್ತು ನನ್ನ ವೃತ್ತಿ ನನ್ನ ಆಯ್ಕೆ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ವಿದ್ಯಾರ್ಥಿಗಳಿಗೆ ವೃತ್ತಿ ಯೋಜನೆಯ ಆಶಾದಾಯಕ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಕರ್ನಾಟಕ ಪಬ್ಲಿಕ್ ಶಾಲೆ ಮಮದಾಪುರ ದಲ್ಲಿ ವೃತ್ತಿ ಯೋಜನ ಕೋಶವನ್ನು ಪ್ರಾರಂಭಿಸಿದೆ. ವಿದ್ಯಾರ್ಥಿಗಳು ಸಾಧ್ಯವಾದಷ್ಟು ಇದರ ಪ್ರಯೋಜನ ಪಡೆದುಕೊಳ್ಳಬೇಕು” ಎಂದರು.

ಕಾರ್ಯಕ್ರಮದಲ್ಲಿ ಮಕ್ಕಳಿಂದ ತಯಾರಿಸಲ್ಪಟ್ಟ ಚಿತ್ರಕಲೆ ಮತ್ತು ಕರಕುಶಲ ವಸ್ತುಗಳ ಪ್ರದರ್ಶನವನ್ನು ಉದ್ಘಾಟಿಸಿದ ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯೆ ರಾಜೇಶ್ವರಿ ಮೋಪಗಾರ, ತಮ್ಮ ನಿಜ ಜೀವನದ ಉದಾಹರಣೆಯೊಂದಿಗೆ ಮಗುವಿನ ಜೀವನದಲ್ಲಿ ವೃತ್ತಿ ಆಯ್ಕೆ ಸ್ವತಂತ್ರವಾಗಿ ಹಾಗೂ ಆಶಾದಾಯಕವಾಗಿ ಇರಬೇಕೆಂದರು.

Advertisements

ಇದನ್ನೂ ಓದಿ: ವಿಜಯಪುರ | ಕುಡಿಯುವ ನೀರು ಒದಗಿಸುವ ಡಿಬಿಒಟಿ ಯೋಜನೆ-1ಯಡಿ ಪೈಪಲೈನ್‌ ಆಳವಡಿಕೆಗೆ ಸೂಚನೆ

ಚಿತ್ರಕಲಾ ಶಿಕ್ಷಕಿ ಎಸ್ ಎಸ್ ಮೊಗಲಿ, ಹಿರಿಯ ಚಿತ್ರಕಲಾ ಶಿಕ್ಷಕ ರಶೀದ್ ಖಾನ್, ಶಿಕ್ಷಕ ಮಹದೇವಪ್ಪ ಮೊಪಗಾರ, ಭಾಗ್ಯಶ್ರೀ ಎಸ್ ಗಚ್ಚಿನಮಠ, ಮಹಾಂತೇಶ್ ಜಿ ಕುರಿ, ಅಶೋಕ್ ಎಸ್ ಇಂಡಿ ಹಾಗೂ ಸಮಸ್ತ ಕೆಪಿಎಸ್ ಪರಿವಾರದ ಶಿಕ್ಷಕರು ಹಾಗೂ 800ಕ್ಕೂ ಹೆಚ್ಚು ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X