ವಿಜಯಪುರ | ನಾರಾಯಣಪುರ ಜಲಾಶಯದಿಂದ ನೀರು ಬಿಡುಗಡೆ; ಸೂಕ್ತ ನಿರ್ವಹಣೆಗೆ ಡಿಸಿ ಭೂಬಾಲನ್‌ ಸೂಚನೆ

Date:

Advertisements

ನಾರಾಯಣಪುರ ಜಲಾಶಯದಿಂದ ವಿಜಯಪುರ ಜಿಲ್ಲೆಯ ಇಂಡಿ ಶಾಖಾ ಕಾಲುವೆ ಹಾಗೂ ಇಂಡಿ ಏತ ನೀರಾವರಿ ಕಾಲುವೆಗಳ ಮೂಲಕ ಕೆರೆ ಅವಲಂಬಿತ ಜನ-ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಹೆಚ್ಚುವರಿಯಾಗಿ 0.50 ಟಿಎಂಸಿ ನೀರನ್ನು ಬಿಡುಗಡೆಗೊಳಿಸಲಾಗಿದ್ದು, ನೀರು ನಿಗದಿತ ಅಂತರವನ್ನು ತಲುಪುವಂತೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ನಾರಾಯಣಪುರ ಜಲಾಶಯದಿಂದ ಪ್ರಸ್ತುತ ಹರಿಬಿಟ್ಟಿರುವ 1.50 ಟಿಎಂಸಿ ನೀರಿನೊಂದಿಗೆ ಹೆಚ್ಚುವರಿಯಾಗಿ 0.50 ಟಿಎಂಸಿ ನೀರನ್ನು ಬಿಡುಗಡೆಗೊಳಿಸಲಾಗಿದ್ದು, ನೀರು ಪೋಲಾಗದಂತೆ ಮಿತವಾಗಿ ಬಳಸುವ ಕುರಿತು ಮತ್ತು ನೀರು ನಿಗದಿತ ಅಂತರವನ್ನು ತಲುಪುವಂತೆ ನಿಗಾ ವಹಿಸುವಂತೆ ಕಂದಾಯ, ಪೊಲೀಸ್, ನೀರಾವರಿ ಸ್ಥಳೀಯ ಸಂಸ್ಥೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳನ್ನು ನಿಯೋಜಿಸಿ ಆದೇಶಿಸಿದ್ದಾರೆ.

ವಾಚ್ ಅಂಡ್ ವಾರ್ಡ್ ಕೈಗೊಳ್ಳಲು ನಿಯೋಜಿತ ಅಧಿಕಾರಿ-ಸಿಬ್ಬಂದಿ ಕುಡಿಯುವ ಉದ್ದೇಶಕ್ಕಾಗಿ ಬಿಡುಗಡೆ ಮಾಡಲಾದ ನೀರನ್ನು ಬೇರೆ ಉದ್ದೇಶಕ್ಕೆ ಬಳಸದಂತೆ ನಿಗಾ ವಹಿಸಬೇಕು. ಅನಧಿಕೃತ ಪಂಪ್‌ಸೆಟ್ ಕಂಡುಬಂದಲ್ಲಿ ಕರ್ನಾಟಕ ನೀರಾವರಿ ಕಾಯ್ದೆ-1965ರಂತೆ ಕ್ರಮಕೈಗೊಳ್ಳಬೇಕು. ಉಪವಿಭಾಗಾಧಿಕಾರಿಗಳು ದೈನಂದಿನ ವರದಿ ಪಡೆದು, ನೀರಿನ ಸದ್ಬಳಕೆ ಕುರಿತು ಸಾಕ್ಷ್ಯಚಿತ್ರಗಳನ್ನು ಸಲ್ಲಿಸುವಂತೆ ಡಿಸಿ ಸೂಚಿಸಿದ್ದಾರೆ.

Advertisements

ಇದನ್ನೂ ಓದಿ: ವಿಜಯಪುರ | ತೊಗರಿ ಇಳುವರಿಯಿಲ್ಲದೆ ರೈತರು ಸಂಕಷ್ಟದಲ್ಲಿ; ಪರಿಹಾರ ಕೋರಿ ಸರ್ಕಾರಕ್ಕೆ ಮನವಿ

ನೀರು ಬಿಡುವ ದಿನಗಳಲ್ಲಿ ಕಾಲುವೆಗೆ ಎಡ-ಬಲ ಭಾಗಕ್ಕೆ ತಾಗಿದಂತೆ ಅಳವಡಿಸಿರುವ ರೈತರ ವಿದ್ಯುತ್ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕವನ್ನು ಹೆಸ್ಕಾಂ ಅಧಿಕಾರಿಗಳು ಕಡ್ಡಾಯವಾಗಿ ಕಡಿತಗೊಳಿಸಬೇಕು. ಸೋಲಾರ್ ಆಧಾರಿತ ಮೋಟಾರ್, ಜನರೇಟರ್‌ಗಳ ಸಂಪರ್ಕ ಸಹ ಕಡಿತಗೊಳಿಸಬೇಕು. ಕಾಲುವೆಗಳ ಮೇಲುಸ್ತುವಾರಿಗೆ ನೇಮಿಸಿದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X