ವಿಜಯಪುರ | ಮಹಿಳಾ ದಿನಾಚರಣೆ; ಅಕ್ಕಮಹಾದೇವಿ ವಿವಿಯಲ್ಲಿ ಸಾಂಸ್ಕೃತಿಕ ಹಬ್ಬ

Date:

Advertisements

ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂಗಳದಲ್ಲಿ ಸಾಂಸ್ಕೃತಿಕ ಮೆರುಗು ಹೆಚ್ಚಿದ್ದು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಸಾಂಸ್ಕೃತಿಕ ಹಬ್ಬ ಎಲ್ಲರ ತನು-ಮನಸೆಳೆಯಿತು.

ವಿವಿಯಿಂದ ಹಮ್ಮಿಕೊಂಡ ಮಹಿಳಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದ ವಿದ್ಯಾರ್ಥಿನಿಯರು ಜಾನಪದ, ದೇಶಭಕ್ತ ಸೇರಿದಂತೆ ಹಲವಾರು ನೃತ್ಯಗಳನ್ನು ಪ್ರದರ್ಶಿಸಿದರು. ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಸಾರುವ ಭರತನಾಟ್ಯ, ಯೋಗನೃತ್ಯ, ಲವಣೆ, ಹಾಸ್ಯನೃತ್ಯಗಳು ವಿವಿಧ ಬಗೆಯ ನೃತ್ಯಗಳಲ್ಲಿ ಹಲವಾರು ವಿಭಾಗಗಳ ವಿದ್ಯಾರ್ಥಿನಿಯರು ಭಾಗಿಯಾಗಿ ಸಾಂಸ್ಕೃತಿಕ ಪಟ್ಟಕ್ಕೆ ಮೆರಗು ತಂದರು.

ಪ್ರತಿ ಸಾರಿಯಂತೆ ಈ ಬಾರಿಯೂ ಮಹಿಳಾ ದಿನಾಚರಣೆ ಪ್ರಯುಕ್ತ ವಿವಿಯ ಅಂಗಳದಲ್ಲಿ ಆಹಾರ ಮೇಳಕ್ಕೆ ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಚಾಲನೆ ನೀಡಿದರು. ಈ ಆಹಾರ ಮೇಳದಲ್ಲಿ ವಿವಿಧ ವಿಭಾಗದ ವಿದ್ಯಾರ್ಥಿನಿಯರು ತಮ್ಮ ಮಳಿಗೆಗಳನ್ನು ಹಾಕಿಕೊಂಡು ಬಿಸಿಲಿನ ಬೇಗೆ ತಣಿಸುವ ತಂಪು ಲಿಂಬು ಪಾನೀಯ, ಮಸಾಲಾ ಮಜ್ಜಿಗೆ, ರಾಗಿ ಅಂಬಲಿ, ಫ್ರೂಟ್ ಸಲಾಡ್ ಸೇರಿದಂತೆ ವಿವಿಧ ಬಗೆಯ ಖ್ಯಾ‌ದ್ಯಗಳನ್ನು ಮಾರಾಟಕ್ಕೆ ಇಟ್ಟಿದ್ದರು. ಹಲವಾರು ಜನರ ಆಹಾರ ಮಾಳಿಗೆಗಳಿಗೆ ಭೇಟಿ ನೀಡಿ ವಿವಿಧ ಬಗೆಯ ತಿಂಡಿ ಸವಿದು ಆನಂದಸಿದರು. ವಿಶೇಷವಾಗಿ ಆಹಾರ ಮೇಳದಲ್ಲಿ ಹಲವು ಬಗೆಯ ಖಾದ್ಯಗಳನ್ನು ತಯಾರಿಸಿ ಮಾರಾಟ ಮಾಡಿ ಭೋಜನ ಪ್ರಿಯರನ್ನು ತಮ್ಮತ್ತ ಸೆಳೆಯುತ್ತಿದ್ದರು.

Advertisements
WhatsApp Image 2025 03 07 at 5.29.11 PM 1

ಪುಸ್ತಕ ಮಳಿಗೆ, ಬಟ್ಟೆ ಮಳಿಗೆ ಮತ್ತು ಮಹಿಳೆಯರ ಅಂದವನ್ನು ಹೆಚ್ಚಿಸುವ ವಿವಿಧ ಬಗೆಯ ಆಭರಣ, ಬಟ್ಟೆಗಳು ಮಹಿಳೆಯರ ಕಣ್ಮನ ಸೆಳೆಯುವಂತಿದ್ದವು. ಮನೆಯ ಅಂದವನ್ನು ಹೆಚ್ಚಿಸುವುದರ ಜೊತೆಗೆ ನಮ್ಮ ಆರೋಗ್ಯವನ್ನು ವೃದ್ಧಿಸುವಲ್ಲಿ ಸಹಾಯಕಾರಿಯಾಗುವಂತಹ ಸಸಿಗಳನ್ನು ಕೂಡ ಈ ಮೇಳದಲ್ಲಿ ಇಡಲಾಗಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ: ವಿಜಯಪುರ | ಆಲಮಟ್ಟಿ ಚಂದ್ರಮ್ಮದೇವಿ ಜಾತ್ರೆ ಆರಂಭ

ಮಹಿಳಾ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಸಂಘಟಿಸುತ್ತಿರುವ ಸಮಿತಿಯ ಸದಸ್ಯೆ ಸಂಚಾಲಕಿ ಪ್ರೊ. ಲಕ್ಷ್ಮೀದೇವಿ ವೈ. ಮತ್ತು ಮಹಿಳಾ ಅಧ್ಯಯನ ವಿಭಾಗದ ತಂಡ ಹಾಗೂ ವಿವಿಧ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರನ್ನು, ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಕಾಂತಾದೇವಿ ಟಿ, ಕುಲಸಚಿವ ಶಂಕರಗೌಡ ಸೋಮನಾಳ ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಮ್. ಚಂದ್ರಶೇಖರ ಅವರು ಅಭಿನಂದಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X