ವಿಜಯಪುರ | ಇಂದಿರಾ ಕ್ಯಾಂಟೀನ ಕಾಮಗಾರಿ ಕುಂಠಿತ; ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಡಿಸಿ ಸೂಚನೆ

Date:

ಇಂದಿರಾ ಕ್ಯಾಂಟೀನ ಕಾಮಗಾರಿ ಕುಂಠಿತವಾಗಿ ನಡೆಯುತ್ತಿರುವುದನ್ನು ಗಮನಿಸಿ ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಜಿಲ್ಲೆಯ ತಾಳಿಕೋಟಿಗೆ ಇತ್ತೀಚೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪಟ್ಟಣದ ಹುಣಸಗಿ ರಸ್ತೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ ಕಟ್ಟಡದ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಕಟ್ಟಡವು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ನಿಗದಿತ ಕಾಲಮಿತಿಗಳಿಗೆ ಕಟ್ಟಡವನ್ನು ಪೂರ್ಣಗೊಳಿಸಬೇಕು. ಕ್ಯಾಂಟೀನ್‌ ಸುತ್ತ ಕಾಂಪೌಂಡ್ ನಿರ್ಮಿಸಿ, ಫ್ಲೋರಿಂಗ್ ಮಾಡಬೇಕು” ಎಂದು ತಾಳಿಕೋಟಿಯ ಮುಖ್ಯಾಧಿಕಾರಿಗಳಿಗೆ ತಿಳಿಸಿದರು.

ಹಳೆಯ ಪುರಸಭೆ ಆವರಣದಲ್ಲಿನ ಗ್ರಂಥಾಲಯ ಕಟ್ಟಡವನ್ನು ಪರಿಶೀಲನೆ ನಡೆಸಿದ ಅವರು, “ಈಗಿರುವ ಗ್ರಂಥಾಲಯದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಆಧುನಿಕ ಸೌಲಭ್ಯವುಳ್ಳ ಅತ್ಯುತ್ತಮ ಸ್ಮಾರ್ಟ್‌ ಗ್ರಂಥಾಲಯ ನಿರ್ಮಾಣಕ್ಕಾಗಿ ನೀಲನಕ್ಷೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಿ” ಎಂದು ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಈಸುದ್ದಿ ಓದಿದ್ದೀರಾ? ಧಾರವಾಡ | ಅಂಜುಮನ್ ಸಂಸ್ಥೆಯ ಹೆಸರು ಹೇಳಲು ವಿದ್ಯಾರ್ಥಿಗಳು ಮುಜುಗರಪಡುತ್ತಾರೆ: ಇಸ್ಮಾಯಿಲ್ ತಮಟಗಾರ್ ಬೇಸರ

ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಕೌಶಲ್ಯಾಭಿವೃದ್ಧಿಕಾರಿ ಸಿ ಬಿ ಕುಂಬಾರ, ತಾಳಿಕೋಟಿ ತಹಶೀಲ್ದಾರ್‌ ಪ್ರೇಮಸಿಂಗ್ ಪವಾರ, ಮುಖ್ಯಾಧಿಕಾರಿ ಮೋಹನ ಜಾಧವ,
ಆರೋಗ್ಯ ನಿರೀಕ್ಷಕ ಶಿವಾನಂದ ಜುಮನಾಳ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...

ಉಡುಪಿ | ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿ

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಹಾಗೂ ಪಂಚಾಯತ್ ಆಡಳಿತಕ್ಕೆ ಸಂಬಂಧಿಸಿದ ವಿವಿಧ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...