5 ವರ್ಷ ಕಷ್ಟ ಪಟ್ಟಿದ್ದು ನಾನು, 4 ತಿಂಗಳ ಹಿಂದೆ ಬಂದವರು ಸಿಎಂ ಆದರು: ಹುದ್ದೆ ಕೈತಪ್ಪಿದ ಬಗ್ಗೆ ಖರ್ಗೆ ಮಾತು

Date:

Advertisements

ರಾಜ್ಯದಲ್ಲಿ 1999ರಲ್ಲಿ ವಿರೋಧ ಪಕ್ಷದ ನಾಯಕನಾಗಿ 5 ವರ್ಷ ಹೋರಾಟ ಮಾಡಿದೆ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದೆ. ಆದರೆ, ಚುನಾವಣೆಗೂ ಮುನ್ನ ನಾಲ್ಕು ತಿಂಗಳ ಹಿಂದೆ ಕೆಪಿಸಿಸಿ ಅಧ್ಯಕ್ಷರಾದ ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾದರು. ರಾಜಕೀಯವಾಗಿ ಅವಕಾಶ ತಪ್ಪಿರುವ ಬಗ್ಗೆ ಬೇಸರವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ವಿಜಯಪುರ ನಗರದ ಬಿಎಲ್‌ಡಿಇ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಫ.ಗು.ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಬಿ.ಎಂ.ಪಾಟೀಲ ಮತ್ತು ಬಂಗಾರಮ್ಮ ಸಜ್ಜನ ಸ್ಮರಣೆ ಕಾರ್ಯಕ್ರಮದಲ್ಲಿ ಭಾನುವಾರ ಅವರು ಮಾತನಾಡಿದರು.

ಎಲ್ಲ ಪ್ರಯತ್ನಗಳು ವ್ಯರ್ಥವಾದಂತೆ ಭಾಸವಾಯಿತು. ನಾನು ಐದು ವರ್ಷಗಳ ಕಾಲ ಅವಿಶ್ರಾಂತವಾಗಿ ಕೆಲಸ ಮಾಡಿದ್ದೆ. ಅವರು (ಕೃಷ್ಣ) ಕೇವಲ ನಾಲ್ಕು ತಿಂಗಳ ಮೊದಲು ಅಧ್ಯಕ್ಷರಾಗಿ ಬಂದು ಮುಖ್ಯಮಂತ್ರಿಯಾದರು. ಇಂತಹ ಹಲವು ನಿದರ್ಶನಗಳಿದ್ದು, ಅವುಗಳೆಲ್ಲದರ ಬಗ್ಗೆ ಒಮ್ಮೆಲೇ ಮಾತನಾಡುವುದು ಸೂಕ್ತವಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಹೇಳಿದರು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣು ಮಕ್ಕಳ ಸುರಕ್ಷತೆಗೆ ‘ಶಕ್ತಿಶ್ರೀ’ ಸಾಕೇ?

‘ನಾನು ಎಂದೂ ಅಧಿಕಾರದ ಹಿಂದೆ ಹೋಗಿಲ್ಲ, ನನ್ನ ಪ್ರಯತ್ನಗಳ ಫಲವಾಗಿ ಅಧಿಕಾರ ಪಡೆದುಕೊಂಡಿದ್ದೇನೆ. ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಿಂದ ಎಐಸಿಸಿ ಹುದ್ದೆವರೆಗೂ ಬಂದಿರುವೆ. ಮನಸ್ಸಿನಲ್ಲಿ ದುರಾಸೆ ಇಟ್ಟುಕೊಂಡು ಮಾಡುವ ಕೆಲಸಗಳಿಂದ ಏನೂ ಮಾಡಲು ಸಾಧ್ಯವಿಲ್ಲ’ ಎಂದರು.

‘ಆರು ವರ್ಷದ ಬಾಲಕನಾಗಿದ್ದಾಗ ರಜಾಕರ ಹಾವಳಿಯಲ್ಲಿ ನನ್ನ ತಾಯಿ, ಸಹೋದರಿಯನ್ನು ಕಳೆದುಕೊಂಡೆ, ತಂದೆಯ ಆಸರೆಯಲ್ಲಿ ಬೆಳೆದೆ’ ಎಂದು ಖರ್ಗೆ ಅವರು ತಮ್ಮ ಜೀವನದ ಅನೇಕ ಘಟನೆಗಳನ್ನು ನೆನಪಿಸಿಕೊಂಡು ಕ್ಷಣಹೊತ್ತು ಭಾವುಕರಾದರು.

1999ರ ಕರ್ನಾಟಕ ವಿಧಾನಸಭಾ ಚುನಾವಣೆ. ಆಗ ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕರಾಗಿದ್ದರು. ರಾಜ್ಯದ ಮೂಲೆಮೂಲೆ ಸುತ್ತಿ, ಪಕ್ಷವನ್ನು ಅಧಿಕಾರಕ್ಕೆ ತರಲು ಐದು ವರ್ಷಗಳ ಕಾಲ ಅವಿಶ್ರಾಂತ ದುಡಿದಿದ್ದರು. ಅವರ ಪರಿಶ್ರಮಕ್ಕೆ ಫಲವೂ ಸಿಕ್ಕಿತ್ತು. ಕಾಂಗ್ರೆಸ್ 224 ಸ್ಥಾನಗಳ ಪೈಕಿ 132 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಏರಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಗವಿಸಿದ್ದಪ್ಪ ಕೊಲೆ ಪ್ರಕರಣ; ಕೋಮುದ್ವೇಷ ಹೇಳಿಕೆ ಆರೋಪ, ಶಾಸಕ ಯತ್ನಾಳ್ ವಿರುದ್ಧ ದೂರು

ಇದೇ ತಿಂಗಳು ಕೋಲಾರ ನಗರದಲ್ಲಿ ಪ್ರೀತಿ ವಿಚಾರಕ್ಕೆ ಕೊಲೆಯಾದ ಗವಿಸಿದ್ದಪ್ಪ ನಾಯಕರ...

₹56 ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಪಡೆದರೂ ಅಭಿವೃದ್ಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ರಾಜ್ಯದ ಜನರಿಂದ ಹೆಚ್ಚುವರಿಯಾಗಿ 56 ಸಾವಿರ ಕೋಟಿ ತೆರಿಗೆ ವಸೂಲಿ ಮಾಡುತ್ತಿದ್ದರೂ,...

ದಾವಣಗೆರೆ | ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬಳು ಗೃಹಿಣಿ ಬಲಿ

ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ...

ಅರಸು ಜನ್ಮದಿನದಂದೇ ಅಧಿವೇಶನದಲ್ಲಿ ಒಳಮೀಸಲಾತಿ ಘೋಷಿಸಿದ ಸಿದ್ದರಾಮಯ್ಯ

ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗ ರಚಿಸಲು ತೀರ್ಮಾನ ಒಳಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆ...

Download Eedina App Android / iOS

X