ಇಂಡಿ | ಅಧಿಕಾರಕ್ಕಿಂತ ಜನರ ವಿಶ್ವಾಸವೇ ಮುಖ್ಯ: ಯಶವಂತರಾಯಗೌಡ ಪಾಟೀಲ

Date:

ಅಧಿಕಾರಕ್ಕಿಂತ ಜನರ ವಿಶ್ವಾಸವೇ ನನಗೆ ಮುಖ್ಯ. ನಿಮ್ಮ ಪ್ರೀತಿ ಮತ್ತು ಬೆಂಬಲವೇ ನನ್ನ ದೊಡ್ಡ ಶಕ್ತಿ ಎಂದು ಹೇಳಿರುವ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆ ಹಿಂಪಡೆಯುವುದಾಗಿ ಘೋಷಿಸಿದರು.

- Advertisement -

ಇಂಡಿ ನಗರದ ಪ್ರವಾಸಿ ಮಂದಿರದ ಎದುರು ಸಾವಿರಾರು ಕಾರ್ಯಕರ್ತರು ಸೇರಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, “ಪಕ್ಷದ ವರಿಷ್ಠರು ನನ್ನನ್ನು ಸಚಿವರನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಅದರಿಂದ ಮನಸ್ಸಿಗೆ ನೋವಾಗಿ ರಾಜೀನಾಮೆ ನೀಡುವಂತಹ ದಿಟ್ಟ ನಿರ್ಧಾರ ಕೈಗೊಂಡಿದ್ದೆ. ಆದರೆ ನನ್ನ ನಿರ್ಧಾರದಿಂದ ಕಾರ್ಯಕರ್ತರು ಮತ್ತು ಜನರಿಗೆ ನೋವಾಗುತ್ತದೆ ಎಂದು ತಿಳಿದ ಬಳಿಕ ನಿಮ್ಮೆಲ್ಲರ ಮನವಿಗೆ ಮಣಿದು ರಾಜೀನಾಮೆಯನ್ನು ಹಿಂಪಡೆಯುತ್ತಿದ್ದೇನೆ,” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಮಂತ್ರಿ ಸ್ಥಾನಕ್ಕಿಂತ ಜನರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ನನಗೆ ಮುಖ್ಯ. ನಿಮ್ಮ ಪ್ರೀತಿಗೆ ತಲೆಬಾಗುತ್ತೇನೆ. ಇನ್ನು ಮುಂದೆ ಸಚಿವ ಸ್ಥಾನಕ್ಕಾಗಿ ಯಾರ ಬಳಿಯೂ ನಾನು ಹೋಗುವುದಿಲ್ಲ. ನನ್ನ ಸಂಪೂರ್ಣ ಗಮನ ಮತಕ್ಷೇತ್ರದ ಅಭಿವೃದ್ಧಿಯ ಮೇಲೆಯೇ ಇರುತ್ತದೆ. ನಿಮ್ಮೆಲ್ಲರ ಮಧ್ಯೆಯೇ ಇದ್ದು ಜನಸೇವೆಯನ್ನು ಮುಂದುವರಿಸುತ್ತೇನೆ,” ಎಂದು ತಿಳಿಸಿದರು.

ತಮ್ಮ ರಾಜಕೀಯ ಪಯಣವನ್ನು ನೆನಪಿಸಿಕೊಂಡ ಅವರು, “ನಾನು ಮೂರು ಬಾರಿ ಶಾಸಕನಾಗಿ, ಎರಡು ಬಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಪಕ್ಷದ ವರಿಷ್ಠರು ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರಿಂದ ಸಹಜವಾಗಿಯೇ ಆಕಾಂಕ್ಷಿಯಾಗಿದ್ದೆ. ಆದರೆ ಅವಕಾಶ ದೊರೆಯದಿರುವುದು ಬೇಸರ ತಂದಿದೆ. ಆದರೂ 2028ರಲ್ಲಿಯೂ ಸಚಿವ ಸ್ಥಾನಕ್ಕಾಗಿ ಯಾರನ್ನೂ ಕೇಳುವುದಿಲ್ಲ,” ಎಂದು ಸ್ಪಷ್ಟಪಡಿಸಿದರು.

ತಮ್ಮ ಬೆಳವಣಿಗೆಯನ್ನು ಕೆಲವರು ಸಹಿಸಿಕೊಳ್ಳಲಿಲ್ಲ ಎಂಬ ಅಸಮಾಧಾನವನ್ನೂ ವ್ಯಕ್ತಪಡಿಸಿದ ಅವರು, “ನಾನು ಸಚಿವನಾದರೆ ವಿಜಯಪುರ ರಾಜಕಾರಣದಲ್ಲಿ ಶಕ್ತಿ ಕೇಂದ್ರವಾಗುತ್ತೇನೆ ಎಂಬ ಆತಂಕದಿಂದ ಕೆಲವರು ಸಚಿವ ಸ್ಥಾನ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಅಸಮಾಧಾನ ಹೊರಹಾಕಿದರು.

ಕಾರ್ಯಕ್ರಮದಲ್ಲಿ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪ್ರಶಾಂತ್ ಕಾಳೆ, ಜಾವೀದ್ ಮೋಮಿನ್, ಇಲಿಯಾಸ್ ಬೋರಾಮಣಿ, ನೀಲಕಂಠಗೌಡ ಪಾಟೀಲ, ಈರಣ್ಣ ವಾಲಿ, ರಾಹುಲ್ ಮಸಳಿ, ಅಜೀತ ಧನಶೆಟ್ಟಿ, ಶಿವಯೋಗೆಪ್ಪ ಚನಗೊಂಡ, ಬಿ.ಸಿ. ಸಾಹುಕಾರ, ರುಕ್ಕುದ್ದೀನ್ ತಳವಾರ, ಸಣ್ಣಪ್ಪ ತಳವಾರ, ಜೆಟ್ಟೆಪ್ಪ ರವಳಿ, ಸತೀಶ ಕುಂಬಾರ, ಗಡ್ಡೆಪ್ಪ ನಾವಿ ಸೇರಿದಂತೆ ಸಾವಿರಾರು ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...

ಬೀದರ್‌ | ವರ್ಷ ಕಳೆದರೂ ಸಿಗದ ರೈತ ಆತ್ಮಹತ್ಯೆ ಪರಿಹಾರ: ಸಂಕಷ್ಟದಲ್ಲಿ ಸಂತ್ರಸ್ತ ಕುಟುಂಬಗಳು!

ಬೆಳೆನಷ್ಟ, ಸಾಲದ ಶೂಲದಂತಹ ಸಂಕಷ್ಟಗಳಿಂದ ಕಂಗೆಟ್ಟು ರೈತ ಆತ್ಮಹತ್ಯೆಗೆ ಶರಣಾದರೆ, ಅವರ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...