ಇಂಡಿ | ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಸಬ್ಸಿಡಿ ಸ್ಥಗಿತ; ಸಂಕಷ್ಟದಲ್ಲಿ ಕೃಷಿಕರು

Date:

ಮಳೆನೀರಿನ ಸಂರಕ್ಷಣೆ, ತೋಟಗಾರಿಕೆ ಬೆಳೆಗಳ ಅಭಿವೃದ್ಧಿ ಹಾಗೂ ನೀರಾವರಿ ಸೌಕರ್ಯ ಹೆಚ್ಚಿಸುವ ಉದ್ದೇಶದಿಂದ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ (ಆರ್‌ಕೆವಿವೈ) ರೈತರಿಗೆ ನೀಡಲಾಗುತ್ತಿದ್ದ ಕೃಷಿ ಹೊಂಡ ನಿರ್ಮಾಣದ ಸಹಾಯಧನವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದ್ದು, ರೈತರ ಅಸಮಾಧಾನಕ್ಕೆ ಕಾರಣವಾಗಿದೆ. ಇದರಿಂದ ಸಬ್ಸಿಡಿ ನಿರೀಕ್ಷೆಯಲ್ಲಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಈಗಾಗಲೇ ಸ್ವಂತ ಹಣದಲ್ಲಿ ಕೃಷಿ ಹೊಂಡ ನಿರ್ಮಿಸಿರುವ ಕೃಷಿಕರು ಬಿಲ್ ಪಾವತಿಗಾಗಿ ತೋಟಗಾರಿಕಾ ಇಲಾಖೆ ಕಚೇರಿಗೆ ಅಲೆದಾಡುವಂತಾಗಿದೆ.

- Advertisement -

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಪ್ರತಿ ವರ್ಷ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 10ರಿಂದ 15 ರೈತರು ಕೃಷಿ ಹೊಂಡ ನಿರ್ಮಾಣದ ಸೌಲಭ್ಯ ಪಡೆಯುತ್ತಿದ್ದರು. ಕಳೆದ ವರ್ಷವೂ ಐದಕ್ಕೂ ಹೆಚ್ಚು ಕೃಷಿ ಹೊಂಡಗಳು ಇದೇ ಯೋಜನೆಯಡಿ ನಿರ್ಮಾಣಗೊಂಡಿದ್ದವು. ಒಂದು ಕೃಷಿ ಹೊಂಡ ನಿರ್ಮಾಣಕ್ಕೆ ಸುಮಾರು ₹4 ಲಕ್ಷದವರೆಗೆ ವೆಚ್ಚವಾಗುತ್ತಿದ್ದು, ಸರ್ಕಾರದ ಸಹಾಯಧನ ರೈತರಿಗೆ ನೆರವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ತಾಲೂಕು ಮಟ್ಟದಲ್ಲಿ ವರ್ಷಕ್ಕೆ ಸುಮಾರು ₹1 ಕೋಟಿ ಅನುದಾನ ಕೃಷಿ ಹೊಂಡ ನಿರ್ಮಾಣಕ್ಕೆ ಮೀಸಲಾಗುತ್ತಿತ್ತು. ಆದರೆ ಈ ಬಾರಿ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾಗದೇ ಇರುವುದರಿಂದ ಯೋಜನೆಯ ಅನುಷ್ಠಾನವೇ ಸ್ಥಗಿತಗೊಂಡಿದೆ.

ಸಬ್ಸಿಡಿ ಭರವಸೆಗೆ ಹೊಂಡ ನಿರ್ಮಿಸಿ ಸಂಕಷ್ಟಕ್ಕೆ ಸಿಲುಕಿದ ರೈತರು

ಸಹಾಯಧನ ದೊರೆಯುತ್ತದೆ ಎಂಬ ನಿರೀಕ್ಷೆಯಿಂದ ಅನೇಕ ರೈತರು ಸಾಲ ಮಾಡಿ ಅಥವಾ ಸ್ವಂತ ಹಣದಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿದ್ದಾರೆ. ಆದರೆ ಇದೀಗ ಯೋಜನೆಯ ಮಾರ್ಗಸೂಚಿಗಳಲ್ಲೇ ಕೃಷಿ ಹೊಂಡ ನಿರ್ಮಾಣದ ಅಂಶವನ್ನು ಕೈಬಿಡಲಾಗಿರುವುದರಿಂದ, ಅಧಿಕಾರಿಗಳೂ ಸಹ ಅನುದಾನ ನೀಡಲು ಸಾಧ್ಯವಾಗದೆ ಅಡಚಣೆಯಲ್ಲಿ ಸಿಲುಕಿದ್ದಾರೆ.

ರೈತರು ಬಿಲ್ ಸಲ್ಲಿಸಿ ತಿಂಗಳುಗಳಾದರೂ ಹಣ ಬಿಡುಗಡೆಯಾಗದ ಕಾರಣ ತೋಟಗಾರಿಕೆ ಇಲಾಖೆ ಕಚೇರಿಗಳಿಗೆ ನಿರಂತರವಾಗಿ ಅಲೆದಾಡುತ್ತಿದ್ದಾರೆ. ಅನುದಾನ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ದೊರೆಯದಿರುವುದು ರೈತರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ರಾಜ್ಯದಿಂದ ಪ್ರಸ್ತಾವನೆ, ಕೇಂದ್ರದ ಅನುಮೋದನೆ ಇನ್ನೂ ಬಾಕಿ ಇದೆ. ಕೃಷಿ ಹೊಂಡ ನಿರ್ಮಾಣದ ಸಹಾಯಧನವನ್ನು ಮುಂದುವರಿಸುವಂತೆ ರಾಜ್ಯ ತೋಟಗಾರಿಕೆ ಇಲಾಖೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ ಈವರೆಗೆ ಯಾವುದೇ ಅನುಮೋದನೆ ದೊರೆತಿಲ್ಲ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಹೀಗಾಗಿ ಹೊಸ ಫಲಾನುಭವಿಗಳ ಆಯ್ಕೆಯೂ ಸ್ಥಗಿತಗೊಂಡಿದೆ.

ಹಿಂದೆ ಎಷ್ಟು ಸಬ್ಸಿಡಿ ದೊರೆಯುತ್ತಿತ್ತು?

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೃಷಿ ಹೊಂಡದ ಸಾಮರ್ಥ್ಯವನ್ನು ಆಧರಿಸಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿತ್ತು. ಯೋಜನೆಯಡಿ ₹2 ಲಕ್ಷದಿಂದ ₹6 ಲಕ್ಷದವರೆಗೆ ಸಬ್ಸಿಡಿ ದೊರೆಯುತ್ತಿತ್ತು. ಈ ನೆರವಿನಿಂದ ಮಳೆನೀರನ್ನು ಸಂಗ್ರಹಿಸಿ ತೋಟಗಾರಿಕೆ ಬೆಳೆಗಳಿಗೆ ವರ್ಷಪೂರ್ತಿ ನೀರು ಒದಗಿಸುವ ಅವಕಾಶ ರೈತರಿಗೆ ಸಿಗುತ್ತಿತ್ತು. ಆದರೆ ಪ್ರಸಕ್ತ ಸಾಲಿನ ಮಾರ್ಗಸೂಚಿಯಲ್ಲಿ ಕೃಷಿ ಹೊಂಡ ನಿರ್ಮಾಣದ ಅಂಶವನ್ನೇ ಕೈಬಿಟ್ಟಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತಾಗಿ ಈದಿನ.ಕಾಮ್‌ ಜೊತೆ ಮಾತನಾಡಿದ ರೈತ ವಿಠ್ಠಲ್ ಬಿರಾದಾರ, “ಸಬ್ಸಿಡಿ ದೊರೆಯುತ್ತದೆ ಎಂಬ ನಂಬಿಕೆಯಿಂದ ಸುಮಾರು ₹4 ಲಕ್ಷ ಖರ್ಚು ಮಾಡಿ ಕೃಷಿ ಹೊಂಡ ನಿರ್ಮಿಸಿದ್ದೇನೆ. ಈಗ ಅಧಿಕಾರಿಗಳು ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ ಎನ್ನುತ್ತಿದ್ದಾರೆ. ಬಿಲ್‌ಗಾಗಿ ಇಲಾಖೆಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರನ್ನು ಈ ರೀತಿ ಮಧ್ಯದಲ್ಲೇ ಕೈಬಿಡುವುದು ಸರಿಯಲ್ಲ,” ಎಂದು ಬೇಸರ ವ್ಯಕ್ತಪಡಿಸಿದರು.

ಇಂಡಿ ತೋಟಗಾರಿಕೆ ಇಲಾಖೆ ಸಹಾಯಕ ಅಧಿಕಾರಿ ಸತೀಶ್ ಬಡಿಗೇರ ಮಾತನಾಡಿ, “ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಈವರೆಗೆ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ. ಅನುದಾನ ಬಂದ ತಕ್ಷಣ ಅರ್ಹ ರೈತರಿಗೆ ನಿಯಮಾನುಸಾರ ಸಹಾಯಧನ ನೀಡಲಾಗುವುದು,” ಎಂದು ತಿಳಿಸಿದ್ದಾರೆ.

ರೈತರ ಆಗ್ರಹ

“ಮಳೆ ಆಧಾರಿತ ಕೃಷಿ ಪ್ರದೇಶಗಳಲ್ಲಿ ಕೃಷಿ ಹೊಂಡಗಳು ನೀರಿನ ಸಂರಕ್ಷಣೆ ಹಾಗೂ ತೋಟಗಾರಿಕೆ ಬೆಳೆಗಳ ಉಳಿವಿಗೆ ಅತ್ಯಂತ ಅಗತ್ಯವಾಗಿವೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಬಾಕಿ ಅನುದಾನ ಬಿಡುಗಡೆ ಮಾಡಿ, ಕೃಷಿ ಹೊಂಡ ನಿರ್ಮಾಣ ಸಹಾಯಧನ ಯೋಜನೆಯನ್ನು ಪುನಃ ಕ್ರಿಯಾರೂಪಕ್ಕೆ ತರಬೇಕು,” ಎಂದು ರೈತರು ಆಗ್ರಹಿಸಿದ್ದಾರೆ.

ರಮೇಶ್ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
+ posts

ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ರಮೇಶ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಉಡುಪಿ | ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ: ‘ಹಿಂದೂ ಹುಲಿಗಳು’ ಈಗ ಎಲ್ಲಿದ್ದಾರೆ? : ಸುಂದರ ಮಾಸ್ತರ್

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ದೇವರ ಪೂಜೆಗೆ...

ಬೀದರ್‌ | ಬಿರುಸಿನ ಮಳೆ; ಬಾಡುವ ಬೆಳೆಗಳಿಗೆ ಜೀವಕಳೆ

ಮಳೆಗಾಲದಲ್ಲಿಯೂ ಬೇಸಿಗೆಯ ಧಗೆಗೆ ತತ್ತರಿಸಿದ್ದ ಜನರಿಗೆ ಗುರುವಾರ ಸಂಜೆ ಜಿಲ್ಲೆಯ ವಿವಿಧೆಡೆ...

ಮಂಗಳೂರಿನಲ್ಲಿ ಸಚಿವ ಸಂಪುಟ; ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿಕೆಶಿ

ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ...