ಸಿಂದಗಿ | ಯರಗಲ್ ಬಿ.ಕೆ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಬಿ.ಕೆ ಗ್ರಾಮದಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ, ಸಿಂದಗಿ ಹಾಗೂ ಸರ್ಕಾರಿ ತಾಲೂಕು ಆಸ್ಪತ್ರೆ, ಸಿಂದಗಿ ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಬುಧವಾರ ಆಯೋಜಿಸಲಾಯಿತು.

- Advertisement -

ಶಿಬಿರದಲ್ಲಿ ಸಾರ್ವಜನಿಕರಿಗೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ಆಸ್ಪತ್ರೆಯ ಆಪ್ತ ಸಮಾಲೋಚಕಿ ಶ್ರೀಮತಿ ರೂಬಿನಾ ನಧಾಪ್, “ಇತ್ತೀಚಿನ ದಿನಗಳಲ್ಲಿ ಯುವಕರು ಮದ್ಯಪಾನ, ಧೂಮಪಾನ, ಮೊಬೈಲ್ ಹಾಗೂ ಡ್ರಗ್ಸ್‌ನಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ರೈತರು ಹಾಗೂ ಕೂಲಿ ಕಾರ್ಮಿಕರು ಕೆಲಸದ ಒತ್ತಡದಿಂದ ಮಾನಸಿಕ ಆರೋಗ್ಯವನ್ನು ನಿರ್ಲಕ್ಷಿಸುತ್ತಿದ್ದಾರೆ. ಪ್ರತಿ ತಿಂಗಳ ಮೊದಲ ಮಂಗಳವಾರ ವಿಜಯಪುರ ಜಿಲ್ಲಾ ಆಸ್ಪತ್ರೆಯಿಂದ ಮನೋವೈದ್ಯರು ಸಿಂದಗಿಗೆ ಆಗಮಿಸುತ್ತಿದ್ದು, ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆ ಇರುವವರು ಈ ವೈದ್ಯಕೀಯ ಸೇವೆಯ ಪ್ರಯೋಜನ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.

ತಾಲೂಕು ಆಸ್ಪತ್ರೆಯ ಸ್ಟಾಫ್ ನರ್ಸ್ ರಫೀಕ್ ಮುಲ್ಲಾ ಮಾತನಾಡಿ, “ಗ್ರಾಮೀಣ ಭಾಗದ ರೈತರು ಹಾಗೂ ಕೂಲಿ ಕಾರ್ಮಿಕರು ಆರೋಗ್ಯಕ್ಕಿಂತ ಕೆಲಸಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ವರ್ಷದಲ್ಲಿ ಕನಿಷ್ಠ ಎರಡು ಬಾರಿ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯವಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿದರೆ ಅನೇಕ ಕಾಯಿಲೆಗಳನ್ನು ತಡೆಗಟ್ಟಬಹುದು” ಎಂದು ಸಲಹೆ ನೀಡಿದರು.

ಸಂಗಮ ಸಂಸ್ಥೆಯ ನಿರ್ದೇಶಕ ಪಾ. ಸಂತೋಷ್ ಮಾತನಾಡಿ, “ರೈತರು ಗುಂಪುಗಳನ್ನು ರಚಿಸಿಕೊಂಡು ಸಾವಯವ ಹಾಗೂ ನೈಸರ್ಗಿಕ ಕೃಷಿಗೆ ಒತ್ತು ನೀಡಬೇಕು. ಇದರಿಂದ ಮಣ್ಣಿನ ಫಲವತ್ತತೆ ಹೆಚ್ಚುವುದರ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ” ಎಂದು ಹೇಳಿದರು.

ಶಿಬಿರದಲ್ಲಿ ತಾಲೂಕು ಆಸ್ಪತ್ರೆಯ ಪ್ರಕಾಶ ರಾಠೋಡ (ಲ್ಯಾಬ್ ಟೆಕ್ನಿಷಿಯನ್), ಮಡಿವಾಳಮ್ಮ ಹೀರೆಮಠ, ಸಂಗಮ ಸಂಸ್ಥೆಯ ಸಹನಿರ್ದೇಶಕಿ ಪ್ರಿಯಾಂಕ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...

ಬೀದರ್‌ | ವರ್ಷ ಕಳೆದರೂ ಸಿಗದ ರೈತ ಆತ್ಮಹತ್ಯೆ ಪರಿಹಾರ: ಸಂಕಷ್ಟದಲ್ಲಿ ಸಂತ್ರಸ್ತ ಕುಟುಂಬಗಳು!

ಬೆಳೆನಷ್ಟ, ಸಾಲದ ಶೂಲದಂತಹ ಸಂಕಷ್ಟಗಳಿಂದ ಕಂಗೆಟ್ಟು ರೈತ ಆತ್ಮಹತ್ಯೆಗೆ ಶರಣಾದರೆ, ಅವರ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...