ವಿಜಯಪುರ | ಸರ್ಕಾರಿ ವಿದ್ಯಾಲಯದಲ್ಲಿ ಕವಿಗೋಷ್ಠಿ ಕಾರ್ಯಕ್ರಮ

Date:

Advertisements

ಪ್ರಸ್ತುತ ದಿನಗಳಲ್ಲಿ ಸಮಾಜಮುಖಿ ಕವನ ರಚನೆ ಬಹಳ ಅವಶ್ಯಕ. ಕನ್ನಡ ಸಾಹಿತ್ಯ ಉಗಮವಾಗಿದ್ದೇ ಕವಿತೆಗಳಿಂದ ಎಂದು ಸಿಂದಗಿಯ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯ ಅಧ್ಯಾಪಕ ಶಿವಪ್ಪಗೌಡ ಬಿರಾದಾರ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರ್ಕಾರಿ ಆದರ್ಶ ವಿದ್ಯಾಲಯ ಆಯೋಜಿಸಿದ್ದ ‘ಕನಾ೯ಟಕ ಸಂಭ್ರಮ 50’ ಹಾಗೂ ‘ಮಕ್ಕಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಕವಿಗೋಷ್ಠಿಯನ್ನು ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, “ಕವನ ಸುಮ್ಮನೆ ಹುಟ್ಟುವುದಿಲ್ಲ. ಸಮಾಜದಲ್ಲಿ ಆಗಿಹೋದ ಘಟನೆಗಳ ಅನುಭವದ ಸಾರ ಕವನದಲ್ಲಿರುತ್ತದೆ. ಕಾವ್ಯ ರಚನೆಯಲ್ಲಿ ಕೇವಲ ಕಲ್ಪನೆಗಳಿದ್ದರೆ ಸಾಲದು, ಸಾಮಾಜಿಕ ಪ್ರಜ್ಞೆ, ವೈಜ್ಞಾನಿಕ ಮನೋಭಾವ ಇರಬೇಕು. ಜೊತೆಗೆ ಕವನ ಆಲಿಸಿದಾಗ ಮನಸ್ಸಿಗೆ ನೆಮ್ಮದಿ ಉಂಟುಮಾಡಲು ಆಧ್ಯಾತ್ಮಿಕ ಚಿಂತನೆಗಳು ಇರಬೇಕು” ಎಂದರು.

Advertisements

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅಶೋಕ ತೆಲ್ಲೂರ ಮಾತನಾಡಿ, “ಸರ್ಕಾರಿ ನೌಕರರು ಕನ್ನಡ ಸಾರಸ್ವತ ಲೋಕಕ್ಕೆ ನೌಕರರ ಕೊಡುಗೆ ಅನನ್ಯವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನಗಳಿಗೆ ಸರಕಾರಿ ನೌಕರರ ಸಂಘದ ವತಿಯಿಂದ ಸಹಾಯ ಸಹಕಾರ ನೀಡಲಾಗುವುದು” ಎಂದರು.

ಕಾರ್ಯಕ್ರಮದಲ್ಲಿ ಅಶೋಕ ಶುಲ್ಪಿ ಶಾಂತಪ್ಪ, ರಾಣಾಗೋಳ ಭೀಮಣ್ಣ ಹೇರೂರ, ರಾಮಪ್ಪ ಹಡಪದ, ರಮೇಶ ಪವಾರ, ರಮೇಶ ಚಟ್ಟರಕಿ, ಅಮರ ಗಾಯಕವಾಡ, ಮಲ್ಲು ಘತ್ತರಗಿ, ಅಂಬಿಕಾ ಪಾಟೀಲ, ಮಲ್ಲಮ್ಮ ಬಿರಾದಾರ, ನಟರಾಜ ಕುಂಬಾರ, ಸಿ ಎಮ್ ಪಾಟೀಲ, ಮಲ್ಲನಗೌಡ ಪಾಟೀಲ, ಗಾಯತ್ರಿ ಪಾಟೀಲ, ರಾಜಶೇಖರ ಕಂಬಾರ, ಶಾರದಾ ಮಂಗಳೂರಿನ ಮುಂತಾದವರು ಉಪಸ್ಥಿತರಿದ್ದರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X