ವಿಜಯಪುರ ಜಿಲ್ಲೆಯಲ್ಲಿ 2026-27ನೇ ಸಾಲಿನ ಮೆಟ್ರಿಕ್ ನಂತರದ ವಿವಿಧ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ವಿದ್ಯಾರ್ಥಿ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಆಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದಾರ್ಥಿಗಳಿಗೆ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಹ ವಿದ್ಯಾರ್ಥಿಗಳು ಆಗಸ್ಟ್ 31ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ರಾಜ್ಯ ಅರ್ಜಿ ಸಲ್ಲಿಸಲು ವಿದ್ಯಾರ್ಥಿವೇತನ ತಂತ್ರಾಂಶದ https://ssp.postmatric.karnataka.gov.in/D.2 ವೆಬ್ಸೈಟ್ ಮಾನದಂಡಗಳು, ಅಗತ್ಯ ದಾಖಲೆಗಳಿಗಾಗಿ https://bowd.karnataka.gov.in/ ವೆಬ್ ಸೈಟ್ ಹಾಗೂ ಸಹಾಯವಾಣಿ ಸಂಖ್ಯೆ 8050770004, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಮೂಲಕವೂ ಮಾಹಿತಿ ಪಡೆಯಬಹುದಾಗಿದೆ. ವಿದ್ಯಾರ್ಥಿವೇತನ ಸಂಬಂಧಿತ ತಾಂತ್ರಿಕ ಸಹಾಯಕ್ಕಾಗಿ 1902 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.




