ವಿಜಯಪುರ | ಎಸ್‌ಸಿ/ಎಸ್‌ಟಿ ವಸತಿ ಶಾಲೆಗಳಲ್ಲಿ ಇತರರ ವಾಸ್ತವ್ಯಕ್ಕೆ ನಿಷೇಧ: ಡಾ. ಮೂರ್ತಿ ಎಲ್ ಸೂಚನೆ

Date:

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಸತಿ ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಇತರೆ ವರ್ಗದವರು ವಾಸವಿರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಂಬಂಧಿಸಿದ ವರ್ಗದ ವಿದ್ಯಾರ್ಥಿಗಳ ಹೊರತು ಇತರರು ಉಳಿದುಕೊಳ್ಳದಂತೆ ಕ್ರಮವಹಿಸಲು ಜಂಟಿ ಸಮಿತಿಗೆ ಸೂಚಿಸಲಾಗಿದೆ ಎಂದು ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ. ಮೂರ್ತಿ ಎಲ್ ಹೇಳಿದರು.

- Advertisement -

ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತಾನಾಡಿದ ಅವರು, ತೋಟಗಾರಿಕ ಇಲಾಖೆ, ಪಶುಸಂಗೋಪನೆ, ಮೀನುಗಾರಿಕೆ, ಅರಣ್ಯ ಹಾಗೂ ಸಹಕಾರ ಇಲಾಖೆಗಳ ಪ್ರಗತಿಯ ಕುರಿತು ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

“ಬಗರ್ ಹುಂಕುಂ, ಗೋಮಾಳ ಜಮೀನು ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಸ್ಮಶಾನ ಭೂಮಿ ಜಾಗ ಗುರುತಿಸಿ ಆದ್ಯತೆ ಮೇರೆಗೆ ಸ್ಥಳ ಒದಗಿಸಬೇಕು. ಪಾಲಿಕೆಯ ಒಟ್ಟು ಅನುದಾನದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ ಅನುದಾನ, ಪೌರಕಾರ್ಮಿಕರ ವೇತನ, ಸರ್ಕಾರಿ ಯೋಜನೆಗಳ ಫಲಾನುಭವಿಗಳ ಆಯ್ಕೆ ಕುರಿತು ಮಾಹಿತಿ ನೀಡಬೇಕು” ಎಂದು ಸೂಚಿಸಿದರು.

ಇದನ್ನೂ ಓದಿ> ವಿಜಯಪುರ | ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾವಂತ ಮಹಿಳೆಯರ ಪಾತ್ರ ದೊಡ್ಡದು: ಕುಲಪತಿ ಉಜ್ವಲ ಚಕ್ರದೇವ್

“ಕಾನೂನಿನ ವ್ಯಾಪ್ತಿಗೆ ಒಳಪಡುವ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ನಕಲಿ ಜಾತಿ ಪ್ರಮಾಣಪತ್ರ ಪಡೆಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

“ವಿಜಯಪುರದಲ್ಲಿ ಕುಂದು-ಕೊರತೆಗಳನ್ನು ಆಲಿಸಲಾಗಿದ್ದು, ಲಿಖಿತ ದೂರುಗಳನ್ನು ಸ್ವೀಕರಿಸಿದ್ದೇನೆ. ಗಮನಕ್ಕೆ ತಂದಿರುವ ಎಲ್ಲ ಸಮಸ್ಯೆಗಳಿಗೂ ಪರಿಹಾರ ಒದಗಿಸಲಾಗುವುದು. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯದವರಿಗೆ ಸ್ಮಶಾನ ಭೂಮಿ ಸಿಗದಿರುವ ಬಗ್ಗೆ ದೂರುಗಳು ಬಂದಿವೆ. ಶೀಘ್ರವಾಗಿ ಸ್ಮಶಾನ ಭೂಮಿ ಮಂಜೂರು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.

“ಏಜೆನ್ಸಿ ಮೂಲಕ ಸೇವೆ ಸಲ್ಲಿಸುವ ಹೊರಗುತ್ತಿಗೆ ಸಿಬ್ಬಂದಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಲೋಪ ಎಸಗುವ ಎನ್‌ಜಿಒಗಳನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಪೌರಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಿ, ನಿಗದಿತ ಅನುದಾನವನ್ನು ಅದೇ ಉದ್ದೇಶಕ್ಕೆ ವಿನಿಯೋಗಿಸಬೇಕು. ಎಸ್‌ಸಿಪಿ-ಟಿಎಸ್‌ಪಿ ಅನುದಾನ ಬಳಕೆ ಬಗ್ಗೆ ನಾಮಫಲಕ ಅಳವಡಿಸಬೇಕು. ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗುಣಮಟ್ಟದ ಆಹಾರ ಪೂರೈಕೆ, ಮಕ್ಕಳ ಆರೋಗ್ಯ ತಪಾಸಣೆಗೆ ಸೂಕ್ತ ಕ್ರಮ ವಹಿಸಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಆಯೋಗದ ಸದಸ್ಯರಾದ ಎನ್ ದಿವಾಕರ, ಸುನಿಲ್ ಉಕ್ಕಲಿ, ಗೀತಾ ಥಾವಂಶಿ, ಜಿಲ್ಲಾಧಿಕಾರಿ ಡಾ. ಆನಂದ್ ಕೆ‌, ಜಿಲ್ಲಾ ಪಂಚಾಯತ್ ಸಿಇಒ ರಿಷಿ ಆನಂದ್‌, ಎಸ್‌ಪಿ ಲಕ್ಷ್ಮಣ ನಿಂಬರಗಿ, ಆಯೋಗದ ಕಾರ್ಯದರ್ಶಿ ಎಚ್‌ ಎಂ ಶಿವರಾಂ, ಸಂಶೋಧನಾಧಿಕಾರಿ ಸಿಂಧೂ, ಗುರುನಾಥ ದಡ್ಡೆ, ಚಿದಾನಂದ ಗುರುಸ್ವಾಮಿ, ಮಹೇಶ ಪೋತದಾರ, ರಾಜಶೇಖರ ದೈವಾಡಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ...

ಸೌದಿ ಅರಾಮ್ಕೋ ತೈಲ ಘಟಕ, ವಾಯುನೆಲೆ ಮೇಲೆ ಕ್ಷಿಪಣಿ ದಾಳಿ: ಹೌತಿಗಳ ಪ್ರತಿಪಾದನೆ

ಸೌದಿ ಅರೇಬಿಯಾದ ಪ್ರಮುಖ ತೈಲ ಸಂಸ್ಥೆ ಸೌದಿ ಅರಾಮ್ಕೋ (Saudi Aramco)...

ಛತ್ತೀಸ್‌ಗಢ | 29 ಜನರ ಹತ್ಯೆಗೆ ಕಾರಣವಾದ 2013ರ ದಾಳಿ; 13 ವರ್ಷಗಳ ನಂತರ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಘೋಷಣೆ!

ದೇಶವನ್ನೇ ಬೆಚ್ಚಿಬೀಳಿಸಿದ್ದ ಛತ್ತೀಸ್‌ಗಢದ 2013ರ ಝೀರಂ ಕಣಿವೆ ನಕ್ಸಲ್‌ ದಾಳಿ ಪ್ರಕರಣಕ್ಕೆ...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...