ವಿಜಯಪುರ | ಬಸವಣ್ಣನ ತತ್ವಗಳೇ ಸಂವಿಧಾನದ ಉನ್ನತ ಮೌಲ್ಯಗಳು: ಶಂಕರ ಎಂ ಬಿದರಿ

Date:

ಬಸವಣ್ಣ ಪ್ರಪಂಚದ ಸಾಂಸ್ಕೃತಿಕ ನಾಯಕ, ಅವರು ಬೋಧಿಸಿದ ತತ್ವಗಳು ಭಾರತೀಯ ಸಂವಿಧಾನದ ಉನ್ನತ ಮೌಲ್ಯಗಳಾಗಿ ರೂಪುಗೊಂಡಿವೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯ ಘಟಕದ ಅಧ್ಯಕ್ಷ ಶಂಕರ ಎಂ ಬಿದರಿ ಅಭಿಪ್ರಾಯಪಟ್ಟರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕನ್ನಡ ಭವನದಲ್ಲಿ ಬಸವೇಶ್ವರ ಅಧ್ಯಯನ ಪೀಠದಿಂದ ಹಮ್ಮಿಕೊಂಡಿದ್ದ ʼವಿಶ್ವಗುರು ಮತ್ತು ಸಾಂಸ್ಕೃತಿಕ ನಾಯಕ ಬಸವೇಶ್ವರರ 893ನೇ ಜಯಂತಿʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಸಮಾನತೆ, ಭ್ರಾತೃತ್ವ, ಸಾಮಾಜಿಕ ನ್ಯಾಯ ಮತ್ತು ಮಾನವೀಯತೆ ಎಂಬ ಮೂಲಭೂತ ತತ್ವಗಳನ್ನು ಅವರು 12ನೇ ಶತಮಾನದಲ್ಲಿಯೇ ಪ್ರತಿಪಾದಿಸಿದ್ದರು. ಇವು ಇಂದಿನ ಪ್ರಜಾಪ್ರಭುತ್ವದ ಮೂಲಾಧಾರಗಳಾಗಿವೆ. ಬಸವಣ್ಣನವರ ವಚನಗಳು ಕೇವಲ ಧಾರ್ಮಿಕ ಉಪದೇಶಗಳಲ್ಲ; ಅವು ಜೀವನಪಾಠಗಳಾಗಿವೆ. ‘ಕಾಯಕವೇ ಕೈಲಾಸ’ ಎಂಬ ಅವರ ಸಂದೇಶವು ಕೆಲಸದ ಗೌರವವನ್ನು ಎತ್ತಿಹಿಡಿಯುತ್ತದೆ. ಪ್ರತಿಯೊಬ್ಬರೂ ತಮ್ಮ ಪರಿಶ್ರಮದಿಂದ ಜೀವನ ನಡೆಸಬೇಕು ಮತ್ತು ಯಾವುದೇ ಕೆಲಸವನ್ನು ಹೀನ-ಶ್ರೇಷ್ಠತೆಗಳ ಅಳತೆಯಲ್ಲಿ ನೋಡುವುದನ್ನು ತೊರೆದು ಗೌರವದಿಂದ ಕಾಣಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಶಿಕ್ಷಣವೆಂಬುದು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗಿರದೆ ವ್ಯಕ್ತಿತ್ವ ನಿರ್ಮಾಣಕ್ಕೆ ಕಾರಣವಾಗಬೇಕು. ಆತ್ಮವಿಶ್ವಾಸ, ಶಿಸ್ತಿನ ಜೀವನ, ಪರಿಶ್ರಮ ಮತ್ತು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡರೆ ಜೀವನದಲ್ಲಿ ಯಾವುದೇ ಗುರಿಯನ್ನು ಸಾಧಿಸಲು ಸಾಧ್ಯ. ಈ ಗುರಿ ಸಾಧನೆಗೆ ಮಹಿಳಾ ವಿವಿಯಲ್ಲಿ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿರುವುದು ಸಂತಸದ ಸಂಗತಿ” ಎಂದು ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ> ವಿಜಯಪುರ | ಮಹಿಳಾ ವಿವಿಯಲ್ಲಿ ಬಸವ ಅಧ್ಯಯನ ಪೀಠ ಇಲ್ಲದಿರುವುದು ದುಃಖಕರ: ಡಾ. ಶಶಿಕಾಂತ ಪಟ್ಟಣ

ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ವಿ ಸಿ ನಾಗಠಾಣ ಮಾತನಾಡಿ, “ವಿದ್ಯಾರ್ಥಿನಿಯರು ಬಸವಣ್ಣರ ಆಚಾರ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದ ಸೇವೆ ಮಾಡುವುದರ ಜತೆಗೆ ಅಕ್ಕಮಹಾದೇವಿಯ ವಿಚಾರಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಮಾತನಾಡಿ, “12ನೇ ಶತಮಾನದಲ್ಲಿ ಬಸವಣ್ಣನವರು ಬೋಧಿಸಿದ ತತ್ವಗಳು ಕಾಲಾತೀತವಾಗಿದ್ದು, ಇಂದಿನ ಸಮಾಜಕ್ಕೂ ದಿಕ್ಕು ತೋರಿಸುತ್ತಿವೆ. ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸಲು ಅವರ ಚಿಂತನೆಗಳು ಮಾರ್ಗದರ್ಶಕವಾಗಿವೆ” ಎಂದು ಹೇಳಿದರು.

“ಮಹಿಳಾ ಸಬಲೀಕರಣದ ದೃಷ್ಟಿಯಿಂದ ಬಸವಣ್ಣ ಮತ್ತು ಅಕ್ಕಮಹಾದೇವಿಯವರ ಚಿಂತನೆಗಳು ಅತ್ಯಂತ ಮಹತ್ವದ್ದಾಗಿವೆ. ಅಕ್ಕಮಹಾದೇವಿಯವರು ಧಾರ್ಮಿಕ ಹಾಗೂ ಸಾಮಾಜಿಕ ಕಟ್ಟಳೆಗಳನ್ನು ಪ್ರಶ್ನಿಸಿ ಮಹಿಳೆಯರಿಗೆ ಸ್ವಾತಂತ್ರ‍್ಯ ಮತ್ತು ಆತ್ಮಗೌರವದ ಹಕ್ಕುಗಳನ್ನು ಒತ್ತಿ ಹೇಳಿದ್ದಾರೆ. ಇಂತಹ ಮಹಾನ್ ಚಿಂತನೆಗಳನ್ನು ಇಂದಿನ ವಿದ್ಯಾರ್ಥಿನಿಯರು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ಬದಲಾವಣೆ ಸಾಧ್ಯ” ಎಂದು ಅಭಿಪ್ರಾಯಪಟ್ಟರು.

ಕುಲಸಚಿವ ಶಂಕರಗೌಡ ಎಸ್ ಸೋಮನಾಳ ಅವರು, ಬಸವಣ್ಣನವರ ಕುರಿತು ರಸಪ್ರಶ್ನೆ, ಚರ್ಚಾ ಸ್ಪರ್ಧೆ ಹಾಗೂ ವಚನ ವಾಚನ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಾದ ವಿದ್ಯಾರ್ಥಿನಿಯರಿಗೆ ನಗದು ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ ಎಲ್ ಲಕ್ಕಣ್ಣವರ, ಸಾಹಿತಿಗಳಾದ ಎಂ ಜಿ ಯಾದವಾಡ, ಕಾಶೀನಾಥ ಅಣ್ಣೇಪನ್ನವರ ಸೇರಿದಂತೆ ವಿಶ್ವವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...