ವಿಜಯಪುರ | ಕೇಂದ್ರದ UPI ಶುಲ್ಕ ನೀತಿ ಮರುಪರಿಶೀಲನೆಗೆ ಭೋಗೇಶ್ ಸೋಲಾಪುರ ಆಗ್ರಹ

Date:

ರೂ. 2,000ಕ್ಕಿಂತ ಹೆಚ್ಚಿನ ಕೆಲವು UPI ವ್ಯಾಪಾರಿ ವಹಿವಾಟುಗಳಿಗೆ Merchant Discount Rate (MDR) ವಿಧಿಸುವ ಕುರಿತು ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮವನ್ನು ಮರುಪರಿಶೀಲಿಸಬೇಕು. ಈ ಶುಲ್ಕದ ಅಂತಿಮ ಹೊರೆ ಸಣ್ಣ ವ್ಯಾಪಾರಿಗಳು, ಸಾಮಾನ್ಯ ಗ್ರಾಹಕರ ಮೇಲೆ ಬೀಳದಂತೆ ಸ್ಪಷ್ಟ ನಿಯಮಗಳನ್ನು ರೂಪಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಮತ್ತು ರಾಷ್ಟ್ರೀಯ ಮಂಡಳಿ ಸದಸ್ಯ ಭೋಗೇಶ್ ಸೋಲಾಪುರ ಆಗ್ರಹಿಸಿದ್ದಾರೆ.

- Advertisement -

UPI ದೇಶದ ಡಿಜಿಟಲ್ ಪಾವತಿ ವ್ಯವಸ್ಥೆಯ ಪ್ರಮುಖ ಆಧಾರವಾಗಿದೆ. NPCI ಅಧಿಕೃತ ಅಂಕಿ-ಅಂಶಗಳ ಪ್ರಕಾರ ಆಗಸ್ಟ್ 2026ರಲ್ಲಿ UPI ಮೂಲಕ 24,508.96 ಮಿಲಿಯನ್ ವಹಿವಾಟುಗಳು ನಡೆದಿದ್ದು, ಒಟ್ಟು ₹29,82,355.95 ಕೋಟಿ ಮೌಲ್ಯದ ವಹಿವಾಟು ದಾಖಲಾಗಿದೆ. ಇಂತಹ ವ್ಯಾಪಕ ಬಳಕೆಯ ವ್ಯವಸ್ಥೆಯಲ್ಲಿ ಹೆಚ್ಚುವರಿ ಶುಲ್ಕದ ಪರಿಣಾಮ ಸಣ್ಣ ವ್ಯಾಪಾರಿಗಳು ಮತ್ತು ಗ್ರಾಹಕರ ಮೇಲೆ ಹೇಗೆ ಬೀಳಲಿದೆ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಜನರನ್ನು ಡಿಜಿಟಲ್ ಹಾಗೂ ನಗದುರಹಿತ ವ್ಯವಹಾರಗಳತ್ತ ಉತ್ತೇಜಿಸಿದ ಬಳಿಕ UPI ಬಳಕೆಗೆ ಸಂಬಂಧಿಸಿದಂತೆ ಹೆಚ್ಚುವರಿ ಶುಲ್ಕದ ವ್ಯವಸ್ಥೆ ಏಕೆ ಅಗತ್ಯವಿದೆ ಎಂಬುದನ್ನು ಸರ್ಕಾರ ವಿವರಿಸಬೇಕು. MDRನ ಹೊರೆ ವ್ಯಾಪಾರಿಗಳಿಗಷ್ಟೇ ಸೀಮಿತವಾಗುತ್ತದೆಯೇ ಅಥವಾ ವಸ್ತು-ಸೇವೆಗಳ ಬೆಲೆಗಳ ಮೂಲಕ ಗ್ರಾಹಕರಿಗೂ ವರ್ಗಾವಣೆಯಾಗುತ್ತದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಸೋಲಾಪುರ ಒತ್ತಾಯಿಸಿದ್ದಾರೆ.

UPI ವ್ಯವಸ್ಥೆಯ ನಿರ್ವಹಣೆ, ತಾಂತ್ರಿಕ ಮೂಲಸೌಕರ್ಯ ಮತ್ತು ಸೈಬರ್ ಭದ್ರತೆಗೆ ವಾರ್ಷಿಕವಾಗಿ ಆಗುವ ವೆಚ್ಚ, ಸರ್ಕಾರ ನೀಡುತ್ತಿರುವ ಹಣಕಾಸು ನೆರವು ಹಾಗೂ ಪ್ರಸ್ತಾಪಿತ MDR ಮೂಲಕ ಸಂಗ್ರಹವಾಗುವ ಮೊತ್ತ ಮತ್ತು ಅದರ ಬಳಕೆಯ ಕುರಿತು ಸಂಪೂರ್ಣ ಪಾರದರ್ಶಕತೆ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಆಮ್ ಆದ್ಮಿ ಪಾರ್ಟಿಯ ಪ್ರಮುಖ ಆಗ್ರಹಗಳು:

  • ₹2,000ಕ್ಕಿಂತ ಹೆಚ್ಚಿನ ಅರ್ಹ P2M UPI ವಹಿವಾಟುಗಳ ಮೇಲಿನ MDR ವ್ಯವಸ್ಥೆಯನ್ನು ಮರುಪರಿಶೀಲಿಸಬೇಕು.
  • MDRನ ಪರಿಣಾಮ ಗ್ರಾಹಕರ ಮೇಲೆ ಪರೋಕ್ಷ ಹೊರೆಯಾಗದಂತೆ ಸ್ಪಷ್ಟ ನಿಯಮಗಳನ್ನು ರೂಪಿಸಬೇಕು.
  • MDR ದರ, ಮಿತಿ ಹಾಗೂ ಅನ್ವಯವಾಗುವ ವಹಿವಾಟುಗಳ ವಿವರಗಳನ್ನು ಸಾರ್ವಜನಿಕರಿಗೆ ಸರಳವಾಗಿ ಪ್ರಕಟಿಸಬೇಕು.
  • UPI ನಿರ್ವಹಣೆ, ತಾಂತ್ರಿಕ ಮೂಲಸೌಕರ್ಯ ಮತ್ತು ಸೈಬರ್ ಭದ್ರತೆಯ ವಾರ್ಷಿಕ ವೆಚ್ಚ ಹಾಗೂ ಸರ್ಕಾರದ ಹಣಕಾಸು ನೆರವಿನ ವಿವರಗಳನ್ನು ಬಹಿರಂಗಪಡಿಸಬೇಕು.
  • ಸಣ್ಣ ವ್ಯಾಪಾರಿಗಳು, ಬೀದಿ ವ್ಯಾಪಾರಿಗಳು ಮತ್ತು ಕಡಿಮೆ ವಹಿವಾಟು ನಡೆಸುವ ಉದ್ಯಮಿಗಳಿಗೆ ರಕ್ಷಣೆ ನೀಡಬೇಕು.

UPI ಭಾರತದ ಡಿಜಿಟಲ್ ಆರ್ಥಿಕತೆಯ ಪ್ರಮುಖ ಮೂಲಸೌಕರ್ಯವಾಗಿದೆ. ಅದರ ಆರ್ಥಿಕ ಸುಸ್ಥಿರತೆಗಾಗಿ ಜನಸಾಮಾನ್ಯರು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ನೇರ ಅಥವಾ ಪರೋಕ್ಷ ಹೊರೆ ಹಾಕುವ ಬದಲು ಪರ್ಯಾಯ ಹಣಕಾಸು ಮಾದರಿಗಳ ಕುರಿತು ಸಾರ್ವಜನಿಕ ಚರ್ಚೆ ನಡೆಸಬೇಕು. UPI ಶುಲ್ಕದ ಪರಿಣಾಮ, MDRನ ಅನ್ವಯ ಮತ್ತು ಅದರ ಅಂತಿಮ ಹೊರೆ ಯಾರ ಮೇಲೆ ಬೀಳಲಿದೆ ಎಂಬುದರ ಕುರಿತು ಕೇಂದ್ರ ಸರ್ಕಾರ ದೇಶದ ಜನರಿಗೆ ಸ್ಪಷ್ಟ ಉತ್ತರ ನೀಡಬೇಕು ಎಂದು ಭೋಗೇಶ್ ಸೋಲಾಪುರ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಉಡುಪಿ | ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ: ‘ಹಿಂದೂ ಹುಲಿಗಳು’ ಈಗ ಎಲ್ಲಿದ್ದಾರೆ? : ಸುಂದರ ಮಾಸ್ತರ್

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ದೇವರ ಪೂಜೆಗೆ...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...