ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಕರೆತರಲು ಹೋದಾಗ ಆ್ಯಂಬುಲೆನ್ಸ್ನಲ್ಲಿಯೇ ಹೆರಿಗೆ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿ ನಡೆದಿದೆ. ಆ್ಯಂಬುಲೆನ್ಸ್ ವಾಹನದಲ್ಲೇ ಹೆರಿಗೆ ಮಾಡಿಸಿದ್ದಾರೆ.
ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ಆ್ಯಂಬುಲೆನ್ಸ್ಗೆ ಕರೆ ಮಾಡಿದ್ದಾರೆ. ಗ್ರಾಮಕ್ಕೆ ಬಂದ ಆ್ಯಂಬುಲೆನ್ಸ್, ಗರ್ಭಿಣಿಯನ್ನು ಆಸ್ಪತ್ರಗೆ ಕರೆದೊಯ್ಯವಾಗ ಮಾರ್ಗ ಮಧ್ಯೆಯೇ ಹೆರಿಗೆಯಾಗಿದೆ.
ಆ್ಯಂಬುಲೆನ್ಸ್ನಲ್ಲಿದ್ದ ಟೆಕ್ನಿಷಿಯನ್ ವೆಂಕಟೇಶ್ ಹೆರಿಗೆ ಮಾಡಿದ್ದಾರೆ. ಬಾಣಂತಿ ಹಾಗೂ ಮಗು ಆರೋಗ್ಯವಾಗಿದ್ದಾರೆ. ವೆಂಕಟೇಶ್ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮಂಡ್ಯ | ರೈಲಿನಲ್ಲಿ ಮೂರ್ಛೆ ರೋಗಿ ಸಾವು; ರೈಲ್ವೆ ಸಿಬ್ಬಂದಿ ನಿರ್ಲಕ್ಷ್ಯ ಆರೋಪ
ಟೆಕ್ನಿಷಿಯನ್ ವೆಂಕಟೇಶ್ ಮಾತನಾಡಿ, “ಗರ್ಭಿಣಿಯನ್ನು ಕರೆತರಲು ಆ್ಯಂಬುಲೆನ್ಸ್ ಪೈಲೆಟ್ (ಚಾಲಕ) ಸಮಯಕ್ಕೆ ಸರಿಯಾಗಿ ತಲುಪಿ ಸಾಹಾಯ ಮಾಡಿದ್ದಾರೆ. ಗರ್ಭಿಣಿಯನ್ನು ಕರೆದುಕೊಂಡು ವಾಪಾಸಾಗುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಹೆರಿಗೆಯಾಯಿತು. 108 ವಾಹದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ, ಬಾಣಂತಿ ಹಾಗೂ ಮಗುವನ್ನು ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ತಾಯಿ, ಮಗು ಆರೋಗ್ಯವಾಗಿದ್ದಾರೆ” ಎಂದು ತಿಳಿಸಿದ್ದಾರೆ.