ವಿಜಯಪುರ | ಸಮರ್ಪಕ ವಿದ್ಯುತ್ ಪೂರೈಸುವಂತೆ ರೈತಸಂಘ ಒತ್ತಾಯ

Date:

Advertisements

ಪ್ರತಿನಿತ್ಯ ಸಮಯಕ್ಕೆ ಸರಿಯಾಗಿ ವಿದ್ಯುತ್ ಬಾರದೇ ರೈತರು ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ರಾತ್ರಿ ವೇಳೆಯೂ ಜಮೀನಿನಲ್ಲಿ ನೀರು ಹಾಯಿಸಲು ಹೋಗುವುದರಿಂದ, ಹಾವು-ಚೇಳುಗಳ ಭಯವೂ ಕಾಡುತ್ತಿದೆ. ಹೀಗಾಗಿ, ಬೆಳಗಿನ ವೇಳೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ರೈತಸಂಘ ಒತ್ತಾಯಿಸಿದೆ.

ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ ಕುಬಕಡ್ಡಿ ಹಾಗೂ ಕಾರ್ಯಕರ್ತರು ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹಕ್ಕೊತ್ತಾಯ ಸಲ್ಲಿಸಿದ್ದಾರೆ. “ಪ್ರತಿದಿನ 7 ಗಂಟೆಗಳ ಕಾಲ 3 ಫೆಸ್ ಹಾಗೂ ತೋಟದ ಮನೆಗಳಿಗೆ ರಾತ್ರಿ 1 ಪೇಸ್ ವಿದ್ಯುತ್‌ ಪೂರೈಸಬೇಕು” ಎಂದು ಒತ್ತಾಯಿಸಿದರು.

ಕೋಲಾರ ತಾಲೂಕು ಅಧ್ಯಕ್ಷ ಸೋಮು ಬಿರಾದಾರ ಮಾತನಾಡಿ, “ವಿಜಯಪುರ ಜಿಲ್ಲೆಯಲ್ಲಿ ಸಮಯಕ್ಕೆ ಸರಿಯಾಗಿ ವಿದ್ಯುತ್ ಕೊಡದೇ ಮನಸಿಗೆ ಬಂದ ಹಾಗೆ ಮಾಡುತ್ತಿದ್ದಾರೆ. ಅನ್ನದಾತರ ಜೀವನದ ಜೊತೆ ಚಲ್ಲಾಟ ಆಡುತ್ತಿದ್ದಾರೆ. ವಿದ್ಯುತ್ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಕೊಳ್ಳಬೇಕು” ಎಂದು ಆಗ್ರಹಿಸಿದರು.

Advertisements

ಪ್ರತಿಭಟನೆಯಲ್ಲಿ ರೇಖಾ ಪಾಟೀಲ, ವಿಜಯಲಕ್ಷ್ಮಿ ಗಾಯಕವಾಡ, ಶಶಿಕಾಂತ ಬಿರಾದಾರ, ಸಿದ್ದು ನ್ಯಾಮಗೊಂಡ, ಕಲ್ಲಪ್ಪ ಪಾರಶೆಟ್ಟಿ, ರಾಮನಗೌಡ ಪಾಟೀಲ, ಶಾನೂರ ನಂದರಗಿ, ಮಹಾದೇವಪ್ಪ ತೇಲಿ, ಅರುಣಗೌಡ ತೇರದಾಳ, ನಜೀರ ನಂದರಗಿ, ಸಂಗು ಹುಣಸಗಿ, ಹಣಮಂತ ಬ್ಯಾಡಗಿ, ಸತ್ಯಪ್ಪ ಕುಳ್ಳೊಳ್ಳಿ, ಸುಭಾಸ ಸಜ್ಜನ, ಸಂಗಪ್ಪ ಠಕ್ಕೆ ಹಾಗೂ ರೈತರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಜಿಲ್ಲಾದ್ಯಂತ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಸೆ.13ರಂದು ರಾಷ್ಟ್ರೀಯ ಲೋಕ್ ಅದಾಲತ್

"ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲಾದ್ಯಂತ ಎಲ್ಲ ಇರುವ ಅಧೀನ ನ್ಯಾಯಾಲಯಗಳಲ್ಲಿ ಸೆ.13ರಂದು...

ವಿಜಯಪುರ | ವಿವಿಧ ಬೇಡಿಕೆ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಮನೆ, ಮಕ್ಕಳು, ಸಂಸಾರ ಜವಾಬ್ದಾರಿಯನ್ನು ಬದುಗೊತ್ತಿ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಆಶಾ...

ಮುದ್ದೇಬಿಹಾಳ | ಒಳಮೀಸಲಾತಿ ವರದಿ ತಿರಸ್ಕರಿಸಲು ಆಗ್ರಹಿಸಿ ಛಲವಾದಿ ಮಹಾಸಭಾ ಪ್ರತಿಭಟನೆ

ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಸರ್ಕಾರಕ್ಕೆ ನೀಡಿರುವ ಒಳ ಮೀಸಲಾತಿ ವರದಿಯನ್ನು ಸಂಪೂರ್ಣವಾಗಿ...

ವಿಜಯಪುರ | ಸರ್ಕಾರಿ ಯೋಜನೆಗಳ ಲಾಭ ಅರ್ಹರಿಗೆ ತಲುಪುವಂತೆ ಕಾರ್ಯ ನಿರ್ವಹಿಸಬೇಕು: ಅಪರ ಜಿಲ್ಲಾಧಿಕಾರಿ

ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿ, ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಗಳ ಲಾಭ ಅರ್ಹರಿಗೆ...

Download Eedina App Android / iOS

X