ವಿಜಯಪುರ | ಶಿಖಾರ ಖಾನೆ ಸ್ಲಂ ನಿವಾಸಿಗಳ ಹಕ್ಕುಪತ್ರ ಹೋರಾಟಕ್ಕೆ ಮಣಿದ ಅಧಿಕಾರಿಗಳು: 15 ದಿನಗಳಲ್ಲಿ ವಿತರಣೆ ಭರವಸೆ

Date:

ಶಿಖಾರ ಖಾನೆ ಸ್ಲಂ ಭಾಗ-3ರಲ್ಲಿ 150ಕ್ಕೂ ಅಧಿಕ ಕುಟುಂಬಗಳು ವಾಸಿಸುತ್ತಿದ್ದು, ಈ ಪ್ರದೇಶವನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾಯ್ದೆಯಡಿ ಘೋಷಿಸಲಾಗಿದೆ. ಹಕ್ಕುಪತ್ರ ವಿತರಣೆಗಾಗಿ ಈಗಾಗಲೇ ಸರ್ವೇ ನಡೆದಿದ್ದು, ಕೆಲವು ನಿವಾಸಿಗಳು ಶುಲ್ಕವನ್ನೂ ಪಾವತಿಸಿದ್ದಾರೆ. ಆದರೆ ಅಧಿಕಾರಿಗಳು ಹಕ್ಕುಪತ್ರ ನೀಡುವುದಾಗಿ ಕಳೆದೊಂದು ವರ್ಷದಿಂದ ಹೇಳುತ್ತ ಕಾಲಹರಣ ಮಾಡುತ್ತಿದ್ದಾರೆಂದು ಆರೋಪಿಸಿ ಪ್ರತಿಭಟನೆಗಳನ್ನು ನಡೆಸಲಾಗುತ್ತಿತ್ತು. ಈ ಹೋರಾಟಕ್ಕೆ ಮಣಿದ ಅಧಿಕಾರಿಗಳು ಇದೀಗ 15 ದಿನಗಳಲ್ಲಿ ಹಕ್ಕುಪತ್ರಗಳನ್ನು ವಿತರಿಸುವುದಾಗಿ ಭರವಸೆ ನೀಡಿದ್ದಾರೆ.

- Advertisement -

ಶಿಖಾರ ಖಾನೆ ಭಾಗ-3ರ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಬೇಕೆಂದು ಆಗ್ರಹಿಸಿ ಅನೌಪಚಾರಿಕ ಶಿಕ್ಷಣ ಸಂಸ್ಥೆ, ವಿಜಯಪುರ ಜನವೇದಿಕೆ(ಸಿಸಿಎಫ್‌ಎಫ್) ಹಾಗೂ ಬಿಜಾಪುರ ನಗರ ಸ್ಲಂ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ 3ನೇ ಉಪವಿಭಾಗ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಸಮಿತಿ ಅಧ್ಯಕ್ಷ ಮುತ್ತು ಭೋವಿ ಮಾತನಾಡಿ, “ಹಕ್ಕುಪತ್ರ ಸಿಗುತ್ತದೆಂಬ ನಿರೀಕ್ಷೆಯಲ್ಲಿ ಜನರು ಕಾಯುತ್ತಿದ್ದು, ಅಧಿಕಾರಿಗಳ ಸುಳ್ಳು ಭರವಸೆಗಳಿಂದ ಬೇಸತ್ತಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಧರಣಿ ಸ್ಥಳಕ್ಕೆ ಭೇಟಿ ನೀಡಿದ ಮಂಡಳಿಯ ಅಧಿಕಾರಿಗಳಾದ ಮೀನಾಕ್ಷಿ ಚೋರಿ ಹಾಗೂ ಪಗಲ್ಲಾದರ ಅವರು, “ಈಗಾಗಲೇ ಸರ್ವೇ ಪೂರ್ಣಗೊಂಡಿದ್ದು, ಸ್ಲಂ ಗಡಿ ಗುರುತಿಸುವ ಕಾರ್ಯ ನಡೆಯಬೇಕಿದೆ. 15 ದಿನಗಳೊಳಗೆ ಈ ಎಲ್ಲ ಕಾರ್ಯ ಪೂರ್ಣಗೊಳಿಸಿ ಹಕ್ಕುಪತ್ರ ವಿತರಿಸಲಾಗುವುದು” ಎಂದು ಭರವಸೆ ನೀಡಿದರು. ಬಳಿಕ ಧರಣಿ ಹಿಂಪಡೆಯಲಾಯಿತು.

ಇದನ್ನೂ ಓದಿದ್ದೀರಾ? ಬಳ್ಳಾರಿ | ಕುಡಿತಿನಿ ಭೂ ಸಂತ್ರಸ್ತರ ಹೋರಾಟದ ಜ್ವಾಲೆ: ಸರ್ಕಾರಕ್ಕೆ ಎಚ್ಚರಿಕೆ

ಸಮಿತಿಯ ಮಿನಾಕ್ಷಿ ಕಾಲೇಭಾಗ, ಪಂಡಿತ ಖಂಡಗಳೆ, ಪುಪ್ಪಾ ನೇಗಿನಾಳ, ಕೃಷ್ಣಾ ಜಾಧವ, ಅಕ್ರಂ ಮಾಶ್ಯಾಳಕರ, ದೇವೆಂದ್ರ ಸಕ್ರಿ, ರೇಖಾ ಹಲಸಂಗಿ, ರೇಣುಕಾ ಬೈಚಬಾಳ, ಕೈರುನಾ ಸುತರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...

ಬೀದರ್‌ | ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21ರಂದು ನಡೆಯಲಿರುವ ಧಮ್ಮ ಚಕ್ರ ಪ್ರವರ್ತನ...

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...