ವಿಜಯಪುರ ನಗರದ ಶಿವಾಜಿ ಮಹಾರಾಜ ಕೋ-ಆಪ್ ಕ್ರೆಡಿಟ್ ಸೊಸೈಟಿಯಿಂದ ಸಂಘದ ಸದಸ್ಯರು, ಅವರ ಪ್ರತಿಭಾವಂತ ಮಕ್ಕಳು ಸೇರಿದಂತೆ ಜಿಲ್ಲೆಯ ಮರಾಠಾ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಿದ್ದಾರೆ.
2025–26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.85 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ, ದ್ವಿತೀಯ ಪಿಯುಸಿಯಲ್ಲಿ ಶೇ.80 ಮತ್ತು ಅದಕ್ಕಿಂತ ಹೆಚ್ಚು, ಪದವಿ ಹಾಗೂ ಸ್ನಾತಕೋತ್ತರ ಪದವಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇ.75 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಜತೆಗೆ ಸಂಘದ ಸದಸ್ಯರು, ಅವರ ಮಕ್ಕಳು ಹಾಗೂ ಜಿಲ್ಲೆಯ ಮರಾಠಾ ಸಮುದಾಯದ ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಗರ, ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ, ದ್ವಿತೀಯ ಅಥವಾ ತೃತೀಯ ಸ್ಥಾನ ಪಡೆದಿದ್ದರೆ, ಅಂತಹ ಸಾಧಕರನ್ನೂ ಪ್ರಶಸ್ತಿ ಪತ್ರ ಮತ್ತು ಪ್ರೋತ್ಸಾಹ ಧನ ನೀಡಿ ಸನ್ಮಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಕೊಡಗಿನಲ್ಲಿ ಕಳೆದ 24 ಗಂಟೆ 8.90 ಮಿ.ಮೀ. ಮಳೆ; ಹಾರಂಗಿಗೆ 7,147 ಕ್ಯುಸೆಕ್ ಒಳಹರಿವು
ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 31ರೊಳಗೆ ಶಿವಾಜಿ ಮಹಾರಾಜ ಕೋ-ಆಪ್ ಕ್ರೆಡಿಟ್ ಸೊಸೈಟಿ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರಧಾನ ವ್ಯವಸ್ಥಾಪಕ ಸಂಜಯ ಜಾಧವ(ಮೊ. 9448218192) ಹಾಗೂ ಸಹಾಯಕ ವ್ಯವಸ್ಥಾಪಕ ಅಂಬಾದಾಸ ಚೌಹಾಣ್(ಮೊ. 9449792326) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.




