ವಿಜಯಪುರ | ಏ.10ರಿಂದ ರಾಜ್ಯಮಟ್ಟದ ಪುಸ್ತಕ ಮೇಳ

Date:

ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಜ್ಯೋತಿಬಾ ಫುಲೆ ಜಯಂತಿಯ ಅಂಗವಾಗಿ ಪ್ರಗತಿಪರ, ದಲಿತ ಸೇರಿದಂತೆ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ವಿಜಯಪುರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಏಪ್ರಿಲ್ 10 ರಿಂದ 14ರ ವರೆಗೆ ಐದು ದಿನಗಳ ರಾಜ್ಯಮಟ್ಟದ ಪುಸ್ತಕ ಮೇಳ ನಡೆಯಲಿದೆ ಎಂದು ಲಡಾಯಿ ಪ್ರಕಾಶನದ ಮುಖಂಡ ಬಸವರಾಜ ಸೂಳಿಭಾವಿ ತಿಳಿಸಿದರು.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ತಾತ್ವಿಕ ನೆಲಗಟ್ಟಿನಲ್ಲಿ ನಡೆಯುತ್ತಿರುವ ರಾಜ್ಯದ ಮೊದಲ ಪುಸ್ತಕ ಮೇಳ ಇದಾಗಿದೆ. ವಿಜಯಪುರದಲ್ಲಿ ಇಂತಹ ವಿಶೇಷವಾದ ಮೇಳ ಆಯೋಜಿಸಿರುವುದರಿಂದ ಬಿಜಾಪುರ, ಬುದ್ಧ, ಬಸವ, ಬಾಬಾ ಸಾಹೇಬ್ ಅಂಬೇಡ್ಕರ (ಬಿ -ಫೋರ್) ಪುಸ್ತಕ ಮೇಳ ಎಂದು ಹೆಸರಿಸಲಾಗಿದೆ. ರಾಜ್ಯದ ಪ್ರಖ್ಯಾತ ಪ್ರಕಾಶನ ಸಂಸ್ಥೆಗಳು ಭಾಗವಹಿಸಿದ್ದು 50 ಮಳಿಗೆಗಳು ಸ್ಥಾಪನೆಯಾಗಲಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಬುದ್ಧ, ಬಸವ, ಅಂಬೇಡ್ಕರ್ ಸೇರಿ ಅನೇಕ ದಾರ್ಶನಿಕರು ಸಮಾಜವನ್ನು ತಿದ್ದುವ ವಿಚಾರಗಳನ್ನು ನೀಡಿದ್ದಾರೆ. ಆದರೆ, ಇಂದಿನ ದಿನಮಾನಗಳಲ್ಲಿ ಇಂತಹ ಧಾರ್ಮಿಕರ ವಿಚಾರಗಳನ್ನು ತಿರುಚುವ ಕೆಲಸವಾಗುತ್ತಿದೆ. ಹೀಗಾಗಿ ಅವರ ವಿಚಾರಗಳನ್ನು ಜನರಿಗೆ ತಲುಪಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಮನುಷ್ಯ, ಜೀವ ಪರ ಪುಸ್ತಕಗಳಿಗೆ ಮಾತ್ರ ಮೇಳದಲ್ಲಿ ಅವಕಾಶ ನೀಡಲಾಗಿದೆ. ಯುವಕರನ್ನು ಪುಸ್ತಕಗಳ ಹಾಗೂ ಓದಿನೆಡೆಗೆ ಸೆಳೆಯುವ ಉದ್ದೇಶ ಸಹ ಹೊಂದಲಾಗಿದೆ ಎಂದು ಹೇಳಿದರು.

ಏ.10 ರಂದು ಮೊದಲ ದಿನ ಮೇಳದ ಉದ್ಘಾಟನೆ ನಡೆಯಲಿದೆ. ಅಂದು ಡಾ. ಬಿ ಆರ್ ಅಂಬೇಡ್ಕರ್ ವೃತ್ತದಿಂದ ಪುಸ್ತಕಗಳ ಜೊತೆ ಲೇಖಕರ ಮೆರವಣಿಗೆ ಜರುಗಲಿದೆ. ಏ.11ರಂದು ಬಸವೇಶ್ವರ ವೃತ್ತದಿಂದ ಬಸವಾದಿ ಶರಣರ ವಚನಗಳ ಕಟ್ಟುಗಳೊಂದಿಗೆ ಬಸವ ಅನುಯಾಯಿಗಳ ಮೆರವಣಿಗೆ ನಡೆಯಲಿದೆ ಎಂದರು.

ಇದನ್ನೂ ಓದಿ: ವಿಜಯಪುರ | ಏ.11ರಿಂದ ಅಂಬೇಡ್ಕರ್ ಹಬ್ಬ

ಮೇಳದಲ್ಲಿ ಪ್ರತಿದಿನ ಸಂಜೆ 4 ರಿಂದ 9 ಗಂಟೆಯವರೆಗೆ ಕವಿಗೋಷ್ಠಿ, ವಿದ್ಯಾರ್ಥಿಗಳಿಂದ ಪುಸ್ತಕ ಕುರಿತು ಮಾತು, ಲೇಖಕರೊಂದಿಗೆ ಸಂವಾದ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಅನಿಲ ಹೊಸಮನಿ, ಚನ್ನು ಕಟ್ಟಿಮನಿ, ಸಂಜೀವ ಕಂಬಾಗಿ, ಸುಖದೇವ ಕಟ್ಟಿಮನಿ, ಶಿವಪುತ್ರ ಅಜಮನೆ, ಭೋಗೇಶ ಸೋಲಾಪುರ, ಯಮುನಪ್ಪ ಗುಣಕಿ, ಪ್ರಭುಗೌಡ ಪಾಟೀಲ, ಸಂಗೀತ ಪೂಜಾರಿ, ಮಹಾದೇವ ಬನಸೋಡೆ ಹಾಗೂ ಫಯಾಜ್ ಕಲಾದಗಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿಳಂಬವಾಗದಂತೆ ಹೋರಾಟ ಸಮಿತಿ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಬಹುದಿನಗಳ ಬೇಡಿಕೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಯಾವುದೇ ವಿಳಂಬವಿಲ್ಲದೆ...

ವಿಜಯಪುರ | ಕುಟುಂಬ ರಾಜಕಾರಣದಿಂದ ಕಾರ್ಯಕರ್ತರಿಗೆ ಅವಕಾಶ ಇಲ್ಲದಂತಾಗುತ್ತಿದೆಯೇ?: ಪ್ರದೀಪ್ ಪಾಟೀಲ

ಎಂಎಲ್‌ಎ ಹಾಗೂ ಎಂಪಿಗಳು ತಮ್ಮ ಮಕ್ಕಳನ್ನು ಮುಂದಿನ ಶಾಸಕರು, ಸಂಸದರನ್ನಾಗಿ ಮಾಡುವ...

ವಿಜಯಪುರ | ಬೆಲೆ ಏರಿಕೆ: ಲಾಭದ ನಿರೀಕ್ಷೆಯಲ್ಲಿ ರೈತ, ನೀರಾವರಿ ಪ್ರದೇಶದಲ್ಲಿ ಈರುಳ್ಳಿ ನಾಟಿ

ವಿಜಯಪುರ ಜಿಲ್ಲಾದ್ಯಂತ ಕಾಲುವೆ ನೀರು ಹರಿದು ಜಮೀನುಗಳಲ್ಲಿ ಕೃಷಿ ಚಟುವಟಿಕೆ ಗರಿಗೆದರಿರುವ...