ವಿಜಯಪುರ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸುನೀಲಗೌಡ ಪಾಟೀಲ

Date:

ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು ನಿಯಂತ್ರಿಸಿ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಬಹುದು ಎಂದು ವಿಜಯಪುರದ ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಹೇಳಿದರು.

- Advertisement -

ವಿಜಯಪುರ ನಗರದ ಬಿ.ಎಲ್.ಡಿ.ಇ ವಿಶ್ವವಿದ್ಯಾಲಯದ ಯೋಗ ಶಿಕ್ಷಕ ಮಡಿವಾಳಪ್ಪ ಪರಸಪ್ಪ ದೊಡಮನಿ ಅವರಿಗೆ ಏಷ್ಯನ್ ಪೆಸಿಫಿಕ್ ಐಕಾನ್ ಅವಾರ್ಡ್ ಲಭಿಸಿದ ಹಿನ್ನೆಲೆಯಲ್ಲಿ ಗುರುವಾರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

“ವಿದ್ಯಾರ್ಥಿ ದೆಸೆಯಿಂದಲೇ ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳುವುದರಿಂದ ಒತ್ತಡ ನಿಯಂತ್ರಿಸುವ ಕೌಶಲ ಬೆಳೆಸಿಕೊಳ್ಳಬಹುದು. ಇದರಿಂದ ಏಕಾಗ್ರತೆ ಹೆಚ್ಚುವುದರ ಜೊತೆಗೆ ದೈಹಿಕ ಆರೋಗ್ಯವೂ ಸುಧಾರಿಸುತ್ತದೆ. ದೊಡಮನಿ ಅವರು ಯೋಗ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ದೇಶದಲ್ಲಷ್ಟೇ ಅಲ್ಲದೆ ವಿದೇಶಗಳಲ್ಲಿಯೂ ಭಾರತದ ಕೀರ್ತಿ ಪತಾಕೆಯನ್ನು ಎತ್ತಿಹಿಡಿದು ಬಸವನಾಡಿಗೆ ಹೆಮ್ಮೆ ತಂದಿದ್ದಾರೆ” ಎಂದು ಹೇಳಿದರು.

ದೊಡಮನಿ ಅವರ ಯೋಗ ಚಟುವಟಿಕೆಗಳಿಗೆ ಸಂಸ್ಥೆಯಿಂದ ಅಗತ್ಯ ಪ್ರೋತ್ಸಾಹ ನೀಡಲಾಗುವುದು. ಅವರು ಕೈಗೊಳ್ಳಲಿರುವ ಭವಿಷ್ಯದ ಯೋಜನೆಗಳು ಯಶಸ್ವಿಯಾಗಲಿ ಎಂದು ಸುನೀಲಗೌಡ ಪಾಟೀಲ ಶುಭ ಹಾರೈಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಮಡಿವಾಳಪ್ಪ ಪರಸಪ್ಪ ದೊಡಮನಿ, ಕಳೆದ 16 ವರ್ಷಗಳಿಂದ ಯೋಗಾಭ್ಯಾಸದಲ್ಲಿ ನಿರತನಾಗಿದ್ದು, ಕಳೆದ ಆರು ವರ್ಷಗಳಿಂದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಯೋಗ ಶಿಕ್ಷಕರಾಗಿ ತರಬೇತಿ ನೀಡುತ್ತಿರುವುದಾಗಿ ತಿಳಿಸಿದರು.

ಬಿ.ಎ ಪದವಿ, ಪಿಜಿ ಡಿಪ್ಲೋಮಾ ಇನ್ ಯೋಗ, ಸರ್ಟಿಫಿಕೇಟ್ ಯೋಗಾ ಸ್ಟಡೀಸ್ (CYS) ಹಾಗೂ ಯೋಗ ಇನ್‌ಸ್ಟ್ರಕ್ಟರ್ ಕೋರ್ಸ್ (YIC) ಪೂರ್ಣಗೊಳಿಸಿರುವುದಾಗಿ ಹೇಳಿದರು.

ಕೂಲಿ ಕಾರ್ಮಿಕರ ಕುಟುಂಬದಿಂದ ಬಂದಿರುವ ತಮಗೆ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಹಾಗೂ ಅಮೃತಾನಂದ ಸ್ವಾಮೀಜಿಗಳ ಮಾರ್ಗದರ್ಶನ ದೊರೆತಿದೆ. ತಂದೆಯನ್ನು ಕಳೆದುಕೊಂಡಿದ್ದು, ತಾಯಿ ಲಕ್ಷ್ಮಿಬಾಯಿ, ನಾಲ್ವರು ಸಹೋದರಿಯರು ಹಾಗೂ ಇಬ್ಬರು ಸಹೋದರರನ್ನು ಹೊಂದಿರುವುದಾಗಿ ತಮ್ಮ ವೈಯಕ್ತಿಕ ಹಿನ್ನೆಲೆಯನ್ನು ಹಂಚಿಕೊಂಡರು.

“ನೇಪಾಳದಲ್ಲಿ ಯೋಗದಲ್ಲಿ ಗೌರವ ಪದವಿ ಪಡೆದಿದ್ದು, ವಿಯಟ್ನಾಂನಲ್ಲಿ ಯೋಗ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದೇನೆ. 2023ರಲ್ಲಿ ಥೈಲ್ಯಾಂಡ್ ಹಾಗೂ 2024ರಲ್ಲಿ ದುಬೈನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದೇನೆ. 2025ರಲ್ಲಿ ಮಲೇಶಿಯಾದಲ್ಲಿ ನಡೆದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡಿದ್ದೇನೆ” ಎಂದು ತಿಳಿಸಿದರು.

2018ರಲ್ಲಿ ರಾಮದೇವ ಬಾಬಾ ನಗದು ಪುರಸ್ಕಾರ ಲಭಿಸಿದ್ದು, ಸೆಪ್ಟೆಂಬರ್ 7ರಂದು ಥೈಲ್ಯಾಂಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಏಷ್ಯನ್ ಪೆಸಿಫಿಕ್ ಐಕಾನ್ ಅವಾರ್ಡ್ ದೊರೆತಿದೆ. ಈವರೆಗೆ ಸುಮಾರು 20 ಪ್ರಶಸ್ತಿಗಳನ್ನು ಪಡೆದಿದ್ದು, ದೇಶದ ವಿವಿಧ ರಾಜ್ಯಗಳಲ್ಲಿ ಯೋಗ ತರಬೇತುದಾರ ಹಾಗೂ ನಿರ್ಣಾಯಕರಾಗಿ ಸೇವೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ತಮ್ಮ ಯೋಗ ಕ್ಷೇತ್ರದ ಸಾಧನೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬೆನ್ನೆಲುಬಾಗಿ ನಿಂತಿರುವುದು ಸಂತಸ ತಂದಿದೆ ಎಂದು ದೊಡಮನಿ ಹೇಳಿದರು.

ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ಆರ್.ವಿ. ಕುಲಕರ್ಣಿ, ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಎಂ.ಎನ್. ಚೋರಗಸ್ತಿ, ಹಣಕಾಸು ಉಪಅಧಿಕಾರಿ ಯಲ್ಲಾಲಿಂಗ ಜನವಾಡ, ಶ್ರೀ ಬಿ.ಎಂ. ಪಾಟೀಲ ಐಸಿಎಸ್‌ಇ ಶಾಲೆಯ ಪ್ರಾಚಾರ್ಯ ವಿಕ್ರಂ ನಾರ್ವೆಕರ, ಸಿಬಿಎಸ್‌ಇ ಶಾಲೆಯ ಪ್ರಭಾರ ಪ್ರಾಚಾರ್ಯೆ ವಸುದಾ ನಾರ್ವೆಕರ, ಕೋ-ಆರ್ಡಿನೇಟರ್‌ಗಳಾದ ದೀಪಾ ಜಂಬೂರೆ ಹಾಗೂ ಜಯಾ ಗಲಗಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಲಡ್ಡು ಕಲಬೆರಕೆ ಹಗರಣ: ಪಾಮ್ ಆಯಿಲ್ ಪೂರೈಸುತ್ತಿದ್ದ ಉದ್ಯಮಿ ಇ.ಡಿ ವಶಕ್ಕೆ

ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಭಾರಿ ಪ್ರಮಾಣದ ಕಲಬೆರಕೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...

ರಷ್ಯಾ ಮೇಲಿನ ನಿರ್ಬಂಧ ಮಸೂದೆಗೆ ಟ್ರಂಪ್ ಸಹಿ: ಭಾರತಕ್ಕೆ ಶೇ. 100ರಷ್ಟು ಸುಂಕದ ಭೀತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾ ಮೇಲಿನ ನೂತನ ನಿರ್ಬಂಧ...