ಐಸಿಸ್‌ ನಂಟಿನ ಕತೆ | ಯತ್ನಾಳ್‌ – ತನ್ವೀರ್ ಹಾಶ್ಮಿ ಒಂದೇ ಉದ್ಯಮದ ಪಾಲುದಾರರು

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್ ಬಗ್ಗೆ ಸಹಾನುಭೂತಿ ಹೊಂದಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಬಡಬಡಾಯಿಸಿದ್ದರು. ತನಿಖೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಎನ್ಐಎಗೆ ಪತ್ರ ಬರೆದಿದ್ದರು. ಯತ್ನಾಳ್ ಯಾರ ವಿರುದ್ಧ ಐಸಿಸ್‌ ನಂಟಿನ ಆರೋಪ ಮಾಡಿದ್ದರೋ, ಅವರ ಜೊತೆಯೇ ಸ್ವತಃ ಯತ್ನಾಳ್‌ ಅವರೇ ಉದ್ಯಮ ಒಂದರಲ್ಲಿ ಪಾಲುದಾರರಾಗಿದ್ದಾರೆ ಎಂದು ಇದೀಗ ಬಹಿರಂಗವಾಗಿದೆ.

ವಿಜಯಪುರದ ಮೌಲ್ವಿ, ಜಮಾಅತ್‌ ಎ ಅಹ್ಲೇ ಸುನ್ನತ್‌ ರಾಜ್ಯಾಧ್ಯಕ್ಷ ಸೈಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ ಅವರು ಐಸಿಸ್ ಜೊತೆ ನಂಟು ಹೊಂದಿದ್ದಾರೆಂದು ಯತ್ನಾಳ್ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದರು. ಅವರ ಆರೋಪ ಸುಳ್ಳೆಂಬುದು ಈಗಾಗಲೇ ಬಹಿರಂಗವಾಗಿದೆ. ಇದೀಗ, ಅದೇ ತನ್ವೀರ್ ಹಾಶ್ಮಿ ಅವರೊಂದಿಗೆ ಯತ್ನಾಳ್ ಉದ್ಯಮದ ಪಾಲುದಾರರು ಎಂಬುದು ಕೂಡ ಕಂಡುಬಂದಿದೆ.

ವಿಜಯಪುರದ ಗಾಂಧಿ ವೃತ್ತದಲ್ಲಿರುವ ‘ಟೂರಿಸ್ಟ್‌ ಹೋಟೆಲ್‌’ನಲ್ಲಿ ತನ್ವೀರ್ ಹಾಶ್ಮಿ ಮತ್ತು ಯತ್ನಾಳ್ ಪಾಲುದಾರರಾಗಿದ್ದಾರೆ. ಅಲ್ಲದೆ, ಅವರಿಬ್ಬರೂ ಮಹಲ್‌ ಐನಾಪುರ ಗ್ರಾಮದಲ್ಲಿ ನೆರೆಹೊರೆಯ ಮನೆಯಲ್ಲಿಯೇ ವಾಸಿಸುತ್ತಿದ್ದಾರೆ. ವಾಣಿಜ್ಯ ಮಳಿಗೆಗಳನ್ನು ಕೂಡ ಅಕ್ಕ-ಪಕ್ಕದಲ್ಲಿಯೇ ಹೊಂದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಸ್‌.ಎಂ ಪಾಟೀಲ್ ತಿಳಿಸಿದ್ದಾರೆ.

Advertisements

ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟೂರಿಸ್ಟ್‌ ಹೋಟೆಲ್‌ನಲ್ಲಿ ಯತ್ನಾಳ್ ಮತ್ತು ತನ್ವೀರ್‌ ಹಾಶ್ಮಿ ಕುಟುಂಬವು ಪಾಲುದಾರರಾಗಿದ್ದಾರೆ. ಹಾಶ್ಮಿ ಅವರು ಐಸಿಸ್‌ ಜೊತೆ ನಂಟು ಹೊಂದಿದ್ದಾರೆ ಎಂಬುದು ಗೊತ್ತಿದ್ದಿದ್ದರೆ, ಇಷ್ಟು ವರ್ಷ ಏಕೆ ಸುಮ್ಮನಿದ್ದರು? ಒಂದೇ ಉದ್ಯಮದ ಪಾಲುದಾರರಾಗಿ ಅವರಿಗೆ ಆರೋಪ ಮಾಡುವ ನೈತಿಕತೆ ಇದೆಯೇ” ಎಂದು ಪ್ರಶ್ನಿಸಿದ್ದಾರೆ.

“ಯತ್ನಾಳ್ ತಮ್ಮ ಆರೋಪಗಳನ್ನು ಸಾಬೀತು ಮಾಡಬೇಕು. ಇಲ್ಲವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಯತ್ನಾಳ್ ಮತ್ತು ತನ್ವೀರ್ ಹಾಶ್ಮಿ ಅವರು ಹೆಚ್ಚು ಒಡನಾಟ ಹೊಂದಿದ್ದರು. ಈ ಇಬ್ಬರೂ ನಮ್ಮ ಮನೆಯಲ್ಲಿ ಭೇಟಿ ಮಾಡಿ, ಒಟ್ಟಿಗೆ ಊಟ ಮಾಡಿದ್ದರು. ಅಲ್ಲದೆ, ಹಲವು ಕಾರ್ಯಕ್ರಮಗಳಲ್ಲಿ ಒಟ್ಟಿಗೆ ವೇದಿಕೆಯನ್ನೂ ಹಂಚಿಕೊಂಡಿದ್ದಾರೆ” ಎಂದು ಕರವೇ ಮುಖಂಡ ಎಂ.ಸಿ. ಮುಲ್ಲಾ ತಿಳಿಸಿದ್ದಾರೆ.

“ಕಳೆದ ಚುನಾವಣೆಯಲ್ಲಿ ಹಾಶ್ಮಿ ಅವರು ಕಾಂಗ್ರೆಸ್‌ ಪರವಾಗಿ ಕೆಲಸ ಮಾಡಿದ್ದಾರೆ. ಆ ಕಾರಣಕ್ಕಾಗಿ ಯತ್ನಾಳ್ ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ. ದ್ವೇಷದಿಂದ ಇಂತಹ ಆರೋಪ ಮಾಡುವುದು ಖಂಡನೀಯ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X