ವಿಲ್ಲಾ ಮಾದರಿಯ ವಸತಿ ಸಮುಚ್ಚಯ: ಮನೆಗಳ ಹಂಚಿಕೆಗೆ ಸಿದ್ಧತೆ; ಬಿಡಿಎ ಆಯುಕ್ತ ಪರಿಶೀಲನೆ

Date:

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ವು ಯಶವಂತಪುರ ತಾಲೂಕಿನ ದಾಸನಪುರ ಹೋಬಳಿ ಹುಣ್ಣಿಗೆರೆ ಗ್ರಾಮದ ಸರ್ವೆ ನಂ.35 ರಲ್ಲಿ ವಿಲ್ಲಾ ಮಾದರಿಯ ವಸತಿ ಸಮುಚ್ಚಯವನ್ನು ನಿರ್ಮಾಣ ಮಾಡಿದ್ದು, ಒಂದು ಬಿಎಚ್‌ಕೆ ಮನೆಗಳನ್ನು ಹಂಚಿಕೆ ಮಾಡಲು ಸಿದ್ಧತೆ ನಡೆಸಿದೆ.

ಬಿಡಿಎ ಆಯುಕ್ತ ಜಿ. ಕುಮಾರ ನಾಯಕ ಅವರು ವಸತಿ ಸಮುಚ್ಚಯಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. “ಈ ವಸತಿ ಯೋಜನೆಯನ್ನು ಆದಷ್ಟು ಶೀಘ್ರವಾಗಿ ಸಾರ್ವಜನಿಕರಿಗೆ ಹಂಚಿಕೆ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಸತಿ ಯೋಜನೆಯಡಿ ಸಮುಚ್ಚಯಗಳಲ್ಲಿ ಒಂದು ಬಿಎಚ್‌ಕೆಯ 320 ಮನೆಗಳು, ಮೂರು ಬಿಎಚ್‌ಕೆ ಹೊಂದಿರುವ 152 ಮನೆಗಳು ಹಾಗೂ ನಾಲ್ಕು ಬಿಎಚ್‌ಕೆ ಇರುವ 170 ಮನೆಗಳು ಇರುತ್ತವೆ. ಈ ವಸತಿ ಯೋಜನೆಯಲ್ಲಿನ 3 ಮತ್ತು 4 ಬಿಎಚ್‌ಕೆ ಮನೆಗಳು ಆರ್‌ಸಿಸಿ ಫ್ರೇಮ್ ಸ್ಟ್ರಕ್ಚರ್‌ನಲ್ಲಿ ನಿರ್ಮಿಸಿದ್ದು, ಈ ಮನೆಗಳು ಡೂಪ್ಲೆಕ್ಸ್ ಮನೆಗಳಾಗಿರುತ್ತವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಟ್ಟಡ ನಿರ್ಮಾಣಕ್ಕೆ ಸಂಪೂರ್ಣವಾಗಿ ಇಟ್ಟಿಗೆ ಉಪಯೋಗಿಸಲಾಗಿದೆ. ಈ ವಸತಿ ಯೋಜನೆಯನ್ನು ವಾಸ್ತುವಿಗನುಗುಣವಾಗಿ ನಿರ್ಮಿಸಲಾಗಿದೆ. ಪ್ರತಿ ಮನೆಗೆ ಡ್ಯುಯೆಲ್ ಪೈಪಿಂಗ್ ಸಿಸ್ಟಂ, ಸಂಪ್ ಮತ್ತು ಓವರ್ ಹೆಡ್ ಟ್ಯಾಂಕ್‌ ಇರುತ್ತದೆ. ಸೋಲಾರ್ ವಾಟರ್ ಹೀಟರ್ ಅಳವಡಿಸಲಾಗಿರುತ್ತದೆ.

ವಿಲ್ಲಾ ಮಾದರಿ ವಸತಿಗಳ ಪರಿಶೀಲಿಸುತ್ತಿರುವ ಬಿಡಿಎ ಆಯುಕ್ತ ಜಿ ಕುಮಾರ ನಾಯಕ

ಒಂದು ಬಿಎಚ್‌ಕೆ ಮನೆಗಳನ್ನು ಆರ್‌ಸಿಸಿ ಗೋಡೆಗಳನ್ನು ಅಳವಡಿಸಿ ಜಿ+3 ಮಹಡಿಯಲ್ಲಿ ನಿರ್ಮಿಸಲಾಗಿರುತ್ತದೆ. 3 ಮತ್ತು 4 ಬಿಎಚ್‌ಕೆಗಳಿಗೆ ಪ್ರತ್ಯೇಕವಾದ ಗೇಟ್‌ಗಳನ್ನು ಅಳವಡಿಸಿ, ಮುಖ್ಯರಸ್ತೆಯಿಂದ ಪ್ರತ್ಯೇಕವಾಗಿ ಸಂಪರ್ಕ ಕಲ್ಪಿಸಲಾಗಿರುತ್ತದೆ. 3 ಮತ್ತು 4 ಬಿಎಚ್‌ಕೆ ಮನೆಗಳಿಗೆ  ಇ.ವಿ (ಕಾರ್ ಚಾರ್ಜಿಂಗ್) ಚಾರ್ಜಿಂಗ್ ಮಾಡಿಕೊಳ್ಳಲು ಅನುಕೂಲವಾಗುವಂತೆ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ.

ಎಲ್ಲ ಮನೆಗಳಿಗೂ ಮನೆಯಲ್ಲಿಯೇ ಕಾರ್ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ಈ ಯೋಜನೆಯಲ್ಲಿ 100ಕೆವಿ ಸಾಮರ್ಥ್ಯದ ಸೋಲಾರ್ ಪ್ಯಾನಲ್‌ಗಳನ್ನು ಅಳವಡಿಸಲಾಗಿರುತ್ತದೆ. ಮಳೆ ನೀರು ಕುಯ್ಲಿಗೆ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ಈ ಯೋಜನೆಯಲ್ಲಿ ಡಕ್ಟ್‌ಗಳನ್ನು ನಿರ್ಮಿಸಿ, ಅದರಲ್ಲಿ ನೀರಿನ ಹಾಗೂ ವಿದ್ಯುತ್ ಕೇಬಲ್ ಗಳನ್ನು ಅಳವಡಿಸಲಾಗಿರುತ್ತದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಅಂದು-ಇಂದು – 1 | ಬದಲಾಗುತ್ತಿರುವ ಬೆಂದಕಾಳೂರು ಹಿಂದೆ ಹೇಗಿತ್ತು; ಇಲ್ಲಿ ನೋಡಿ!

ಈ ವಸತಿ ಯೋಜನೆಯಲ್ಲಿ 27 ಉದ್ಯಾನವನಗಳಿದ್ದು, ಹಸಿರಿನ ಗಿಡಮರಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಈ ವಸತಿ ಯೋಜನೆಯನ್ನು 26 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣ ಮಾಡಿದ್ದು, ಈ ವಸತಿ ಯೋಜನೆಯ ಸುತ್ತ 2.1 ಮೀ ಎತ್ತರದ ರಕ್ಷಣಾ ಗೋಡೆಯನ್ನು ನಿರ್ಮಿಸಲಾಗಿರುತ್ತದೆ.

ವಸತಿ ಯೋಜನೆಯ ಸುತ್ತ ರಸ್ತೆಯನ್ನು ಮಾಡಲಾಗಿರುತ್ತದೆ. ಹಾಗೂ ಈ ವಸತಿ ಯೋಜನೆಯಲ್ಲಿ ಮನೋರಂಜನಾ ಕೇಂದ್ರವನ್ನು ನಿರ್ಮಿಸಿದ್ದು, ಈ ಕೇಂದ್ರದಲ್ಲಿ ಒಳಾಂಗಣ ಆಟಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಒಳಾಂಗಣ ಸೆಟಲ್ ಕೋರ್ಟ್‌, ರೆಸ್ಟೊರಂಟ್, ಜಿಮ್, ಏರೋಬಿಕ್ಸ್‌, ಪ್ರಾಥಮಿಕ ಆರೋಗ್ಯ ಕೇಂದ್ರ, ಕಮ್ಯೂನಿಟಿ ಹಾಲ್, ಗ್ರಂಥಾಲಯ, ಈಜುಕೊಳ ನಿರ್ಮಿಸಲಾಗಿದೆ ಹಾಗೂ ಸೂಪರ್ ಮಾರ್ಕೆಟ್‌ಗೆ ಸ್ಥಳಾವಕಾಶ ಕಲ್ಪಿಸಲಾಗಿದೆ. ಜೊತೆಗೆ ಅತಿಥಿಗಳಿಗಾಗಿ 4 ಕೊಠಡಿಗಳನ್ನು ಕಲ್ಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ...

ಗದಗ | ತಾಲೂಕು ಆಡಳಿತದಿಂದ ‘ಮೇವು ಬ್ಯಾಂಕ್’ ಆರಂಭ; ಕೆ.ಜಿಗೆ 2 ರೂ. ದರ ನಿಗದಿ

ಕೊಣ್ಣೂರು : ಜಾನುವಾರುಗಳಿಗೆ ಮೇವು ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವು...