ವಿರಾಜಪೇಟೆ | ಉನ್ನತಮಟ್ಟದ ಕ್ರೀಡಾ ತರಬೇತಿ ವಸತಿ ನಿಲಯದ ಸ್ಥಳ ವೀಕ್ಷಿಸಿದ ಅಜಯ್ ಮಾಕನ್

Date:

Advertisements

ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕು, ವಿ ಬಾಡಗದಲ್ಲಿ ಉನ್ನತಮಟ್ಟದ ಕ್ರೀಡಾ ತರಬೇತಿ ವಸತಿ ನಿಲಯ ನಿರ್ಮಾಣ ಸ್ಥಳವನ್ನು ರಾಜ್ಯಸಭಾ ಸದಸ್ಯ ಅಜಯ್ ಮಾಕನ್ ಹಾಗೂ ಶಾಸಕರಾದ ಎ. ಎಸ್. ಪೊನ್ನಣ್ಣ ವೀಕ್ಷಣೆ ಮಾಡಿದರು.

ಶಾಸಕರಾದ ಎ. ಎಸ್. ಪೊನ್ನಣ್ಣ ಮಾತನಾಡಿ, ” ಈ ಹಿಂದೆ ಸಂಸದರೊಂದಿಗೆ ಕೊಡಗು ಜಿಲ್ಲೆಯಲ್ಲಿ ಉತ್ತಮವಾದ ಕ್ರೀಡಾ ತರಬೇತಿ ವಸತಿ ನಿಲಯ ನಿರ್ಮಿಸುವ ಬಗ್ಗೆ ಮಾತನಾಡಿದ್ದೆ. ಅದಕ್ಕೆ ಅವರು ಸ್ಪಂದಿಸಿ ಕೊಡಗಿನ ಕ್ರೀಡೆ ಮತ್ತು ಸೈನ್ಯಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸುತ್ತಾ ಖಂಡಿತವಾಗಿಯೂ ತನ್ನ ಕೈಲಾದ ಅನುದಾನವನ್ನು ಒದಗಿಸುವ ಭರವಸೆ ನೀಡಿದ್ದರು. ಅದೇ ರೀತಿ ಇಂದು ಕೊಡಗಿಗೆ ಆಗಮಿಸಿ ಉನ್ನತ ಕ್ರೀಡಾ ತರಬೇತಿ ವಸತಿ ನಿಲಯಕ್ಕೆ ಮೀಸಲಿಟ್ಟ 11.2 ಎಕರೆ ಜಾಗವನ್ನು ವೀಕ್ಷಿಸಿದರಲ್ಲದೆ, ತಮ್ಮ ಅನುದಾನದಲ್ಲಿ ನೀಡಬಹುದಾದ ಎಲ್ಲಾ ಮೊತ್ತವನ್ನು ಸದರಿ ಕ್ರೀಡಾಂಗಣಕ್ಕೆ ನೀಡುವುದಾಗಿ ಭರವಸೆ ನೀಡಿದರು”.

ಈ ಸುದ್ದಿ ಓದಿದ್ದೀರಾ? ಮೈಸೂರು | ಹಳೇ ಮೈಸೂರು ಅಭಿವೃದ್ಧಿಗೆ ಸರ್. ಎಂ. ವಿಶ್ವೇಶ್ವರಯ್ಯರವರ ಕೊಡುಗೆಯಿದೆ : ಸಂದೇಶ್ ಸ್ವಾಮಿ

ಸ್ಥಳ ಭೇಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಿರಾಜಪೇಟೆ ತಹಶೀಲ್ದಾರ್ ಪ್ರವೀಣ್, ಕಂದಾಯ ಅಧಿಕಾರಿ ಹರೀಶ್, ಅರಣ್ಯ ಅಧಿಕಾರಿ ಗೋಪಾಲ್, ಕಂಜಿತಂಡ ಪೂವಣ್ಣ, ಕೋಲಿರ ಬೊಪ್ಪಣ್ಣ, ಗಿಣಿ ಮೊಣ್ಣಪ್ಪ, ಕಾಶಿ ಕಾರ್ಯಪ್ಪ, ಕೊಳತಂಡ ಮಾಚಯ್ಯ, ಚೆಂದ್ರಿಮಾಡ ನಂಜಪ್ಪ , ಲೋಹಿತ್, ಅಪ್ಪಣ್ಣ , ಸಾಧಾ, ವಿರಾಜಪೇಟೆ ವಿಧಾನ ಸಭೆ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ, ಶಬ್ಬೀರ್, ಕುಂಡಚೀರ ಮಂಜು ದೇವಯ್ಯ, ಮಹಾದೇವ, ಮಂಜುನಾಥ್, ಗಣೇಶ, ಕಾಳಪ್ಪ, ಹ್ಯಾರೀಶ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X