ಮಂಗಳೂರು | ಓಟು ರಾಜಕೀಯದಿಂದ ಅಮಾಯಕರ ಸಾವು ನಿಲ್ಲಲಿ, ಕೋಮುದ್ವೇಷ ಅಳಿಯಲಿ: ನಟ ನವೀನ್ ಪಡೀಲ್

Date:

Advertisements

ನಮಗೆ ರಾಜಕೀಯ ಬೇಕು. ಆದರೆ ಓಟಿಗಾಗಿ ಇನ್ನೊಬ್ಬರಿಗೆ ತೊಂದರೆ ನೀಡಬಾರದು. ಈ ಓಟು ರಾಜಕೀಯದಿಂದ ಅಮಾಯಕರ ಸಾವು ನಿಲ್ಲಬೇಕು. ಮಂಗಳೂರು ಸೌಹಾರ್ದ ನಾಡು, ಇಲ್ಲಿ ಸೌಹಾರ್ದತೆ ಉಳಿಯಬೇಕು. ಕೋಮುದ್ವೇಷ ಅಳಿಯಬೇಕು ಎಂದು ತುಳು ರಂಗಭೂಮಿ, ಸಿನಿಮಾ ನಟ ನವೀನ್ ಡಿ ಪಡೀಲ್ ಹೇಳಿದರು.

ಮಂಗಳವಾರ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ತ್ರಿಕಾ ಭವನದಲ್ಲಿ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ನಟ, “ನಮ್ಮ ಮಂಗಳೂರು ಸೌಹಾರ್ದತೆಯ ಊರು, ಬುದ್ಧಿವಂತರ ಊರು. ಈಗ ಜಾತಿ, ಕೋಮು ಗಲಾಟೆಗಳು ನಡೆಯುತ್ತಿದೆ. ಹೀಗೆ ಮುಂದುವರೆದರೆ ಇಲ್ಲಿ ಬದುಕುವುದು ಕಷ್ಟ. ಯುವ ಜನರ ಭವಿಷ್ಯಕ್ಕೆ ಇದು ಮಾರಕವಾಗಬಹುದು” ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ಯುವಕ ರಹಿಮಾನ್ ಕೊಲೆ ಪ್ರಕರಣ: ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಎಫ್‌ಐಆರ್

Advertisements

“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೌಹಾರ್ದತೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿಯೇ ಸೌಹಾರ್ದತೆಗೆ ಸಂಬಂಧಿಸಿದ ಸಿನಿಮಾ ‘ನೆರೆ ಕೆರೆ’ ಶೀಘ್ರವೇ ತೆರೆಕಾಣಲಿದೆ. ಈ ಸೌಹಾರ್ದತೆಯ ಸಿನಿಮಾಕ್ಕೆ ಶಶಿರಾಜ್ ರಾವ್ ಕಾವೂರು ಕಥೆ, ಸಂಭಾಷಣೆ ಬರೆದಿದ್ಧಾರೆ. ನಾನೇ ನಿರ್ದೇಶನ ಮಾಡುತ್ತಿದ್ದೇನೆ” ಎಂದು ಈ ಸಂದರ್ಭದಲ್ಲೇ ವಿವರಿಸಿದರು.

“ಹಿಂದೂ, ಮುಸ್ಲಿಮರು ಮತ್ತು ಕ್ರೈಸ್ತರು ಹೊಂದಾಣಿಕೆಯಿಂದ ಬದುಕಿದರೆ ಯಾವುದೇ ಸಮಸ್ಯೆಯಾಗುವುದಿಲ್ಲ. ಗಲಾಟೆ ಮಾಡಿ ಮನಸ್ಸಿನ ಶಾಂತಿ ಕದಡುವ ಬದಲಾಗಿ ನಾವೆಲ್ಲರೂ ಜೊತೆಯಾಗಿ ಇರಬಹುದಲ್ಲವೇ? ಈಶ್ವರ, ಅಲ್ಲಾ, ಯೇಸು ದೇವರುಗಳೇನು ಗಟ್ಟಿಯಾಗಿಲ್ಲವೇ? ನಮ್ಮ ಜನರಿಗೆ ಯಾಕೆ ಬುದ್ಧಿ ನೀಡುತ್ತಿಲ್ಲ” ಎಂದರು.

“ಕಲಾವಿದನಿಗೆ ಶಿಕ್ಷಣದ ಜೊತೆ ಸುತ್ತಮುತ್ತಲಿನ ಜನರ ಪ್ರೋತ್ಸಾಹ ಮುಖ್ಯ. ನಾನು ಸೌಹಾರ್ದತೆಯ ಪರಿಸರದಲ್ಲಿ ಬೆಳೆದವನು. ಎಲ್ಲಾ ಜಾತಿ, ಧರ್ಮದವರು ನನ್ನ ಕಲಾ ಪ್ರತಿಭೆ ಬೆಳವಣಿಗೆಗೆ ಸಹಾಯ ಮಾಡಿದ್ದಾರೆ. ನಾಟಕಕಾರರಾದ ಜಿ.ಕೆ.ಪುರುಷೋತ್ತಮ ಮತ್ತು ವಿಠಲ ಶೆಟ್ಟಿ ಕನಕವಾಡಿ ನನ್ನ ಗುರುಗಳು” ಎಂದರು. ಜೊತೆಗೆ ತನ್ನ ಬಾಲ್ಯದ ಸೌಹಾರ್ದ ನೆನಪುಗಳನ್ನು ಮೆಲುಕು ಹಾಕಿದರು.

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ರಾಜಕಾರಣಿಗಳ ಕೋಮು ಧ್ರುವೀಕರಣದ ತಂತ್ರಕ್ಕೆ ಅದೆಷ್ಟೋ ಜೀವಗಳು ಬಲಿಯಾಗಿವೆ. ಕೋಮು ದ್ವೇಷದಿಂದಲೇ ಹಲವು ಕೊಲೆಗಳು ನಡೆದಿವೆ, ಹಾಗೆಯೇ ವೈಯಕ್ತಿಕ ಕಾರಣಗಳಿಂದ ನಡೆದ ಕೊಲೆಗಳಿಗೆ ಶರಣ್‌ ಪಂಪ್ವೆಲ್‌ನಂತಹ ವಿಎಚ್‌ಪಿ ಮುಖಂಡರುಗಳು ಕೋಮು ಬಣ್ಣ ಹಚ್ಚಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ನಿನ್ನೆ ರಾತ್ರಿಯಷ್ಟೇ(ಮೇ 27) ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಎಂಬುವವರ ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆ ಯತ್ನ ನಡೆದಿದೆ. ಈ ಎಲ್ಲಾ ಬೆಳವಣಿಗೆ ನಡುವೆ ಕರಾವಳಿಯ ಜನಪ್ರಿಯ ನಟ ನವೀನ್ ಡಿ ಪಡೀಲ್ ನೀಡಿರುವ ಹೇಳಿಕೆ ಮಹತ್ವ ಪಡೆದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X