ಮೈಸೂರು ನಗರದ ನಜರ್ಬಾದ್ ದಕ್ಷಿಣಪಾಕ ಹೋಟೆಲ್ ನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ‘ವಿಶ್ವ ಜಲ ದಿನಾಚರಣೆ’ ಅಂಗವಾಗಿ ಹೋಟೆಲ್ ಗಳಲ್ಲಿ ನೀರಿನ ಮಿತ ಬಳಕೆ ಜಾಗೃತಿ ಅಭಿಯಾನದ ಮೂಲಕ ಗ್ರಾಹಕರು ನೀರನ್ನು ಹಿತಮಿತವಾಗಿ ಬಳಸುವಂತೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಮನವಿ ಮಾಡಿದರು.
” ನಾಗರೀಕತೆಗಳು ಬೆಳೆದಿದ್ದೇ ನೀರಿನ ದಡದಲ್ಲಿ. ನೀರಿಲ್ಲದೆ ಜೀವವಿಲ್ಲ. ಹಾಗಾಗಿ, ನಾವೆಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಬಳಸಬೇಕು. ನೀರಿನ ಮಹತ್ವ ಮೂಡಿಸಬೇಕಾದದ್ದು ಹೋಟೆಲ್ ಗಳ ಹೊಣೆಗಾರಿಕೆಯೂ ಹೌದು. ದರ ಪಟ್ಟಿಯನ್ನು ಪ್ರಕಟಿಸಿದಂತೆ, ನೀರಿನ ಮಹತ್ವದ ಬಗ್ಗೆ ಅರಿವು ಮೂಡಿಸುವತ್ತ ಹೆಜ್ಜೆ ಇಡಬೇಕಾಗಿದೆ. ಗ್ರಾಹಕರು ಏನಾದರೂ ಅಂದು ಕೊಳ್ಳಲಿ. ಆದರೆ ನೀರನ್ನು ಮಿತವಾಗಿ ಬಳಸಿ ಎಂಬಂತಹ ಜಾಗೃತಿಯ ಬರಹಗಳು ಹೋಟೆಲ್ ಗೋಡೆಗಳಲ್ಲಿ ಕಾಣಿಸು ವಂತೆ ಪ್ರಕಟಿಸುವುದು ಒಳಿತು.
ನೀರಿನ ತೀವ್ರತೆಯ ಬಗ್ಗೆ ಗಮನ ಸೆಳೆಯುವ ನಿಟ್ಟಿನಲ್ಲಿ, ನೀರಿನ ಮಹತ್ವದ ಪೋಸ್ಟರ್ಗಳನ್ನು ಅಂಟಿಸಿ. ಇನ್ನು ಹೆಚ್ಚಿನ ಮಟ್ಟದಲ್ಲಿ ಗ್ರಾಹಕರಿಗೆ ಜಾಗೃತಿ ಮೂಡಿಸಲು ಮುಂದಾಗೋಣ ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಕೊಡಗು | ‘ ಲೈನ್ ಮನೆ ‘ ಜೀತ ಇಂದಿಗೂ ಜೀವಂತ
ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಜತ್ತಿ ಪ್ರಸಾದ್, ಮಹಾನ್ ಶ್ರೇಯಸ್, ಎಸ್ ಎನ್ ರಾಜೇಶ್, ರಾಕೇಶ್ ಹಾಗೂ ಇನ್ನಿತರರು ಇದ್ದರು.