ಜನರ ಜೀವದ ಜೊತೆ ಜಲಸಂಪನ್ಮೂಲ ಸಚಿವರು ಚೆಲ್ಲಾಟವಾಡುತ್ತಿದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

Date:

  • ‘ನಮ್ಮ ಅಧಿಕಾರಿಗಳು ಕಾಟಾಚಾರಕ್ಕೆ ಸಭೆಯಲ್ಲಿ ಭಾಗಿಯಾಗುತ್ತಾರೆ’
  • ‘ದೇವೇಗೌಡರಿಗೆ ನಿಲ್ಲಲು ಆಗದೇ ಇದ್ದರೂ ಈ ಬಗ್ಗೆ ಮಾತನಾಡಿದ್ದಾರೆ’

ತಮಿಳುನಾಡಿಗೆ ಕಾವೇರಿ ನೀರು ಹರಿಸದೇ ಇದ್ದರೆ ಆದೇಶ ಉಲ್ಲಂಘನೆ ಆಗುತ್ತದೆ ಎಂದು ಜಲಸಂಪನ್ಮೂಲ ಸಚಿವರು ಹೇಳಿದ್ದಾರೆ. ಆ ಮೂಲಕ ಜನರ ಜೀವದ ಜೊತೆ ಸಚಿವರು ಚೆಲ್ಲಾಟವಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಿಡಬ್ಲ್ಯೂಎಂಎ ಆದೇಶ ವಿಚಾರ ಸಂಬಂಧ ರಾಮನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಮಳೆಯ ಕೊರತೆಯಿಂದ ನಮ್ಮ ರೈತರ ಬೆಳೆ ನಾಶವಾಗುತ್ತಿದೆ. ಕಾವೇರಿ ನೀರಿನ ಸಂಬಂಧ ನಡೆಯುವ ಸಭೆಗಳಲ್ಲಿ ತಮಿಳುನಾಡಿನ 10-15 ಅಧಿಕಾರಿಗಳು ಭಾಗಿಯಾದರೆ, ನಮ್ಮ ಅಧಿಕಾರಿಗಳು ಒಬ್ಬರೋ ಇಬ್ಬರೂ ಕಾಟಾಚಾರಕ್ಕೆ ಭಾಗಿಯಾಗುತ್ತಾರೆ” ಎಂದು ಕಿಡಿಕಾರಿದರು.

“ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಜನರ ಬದುಕು ಸರಿಪಡಿಸಬೇಕು ಅಂದರೆ ಕಠಿಣ ನಿರ್ಧಾರ ಮಾಡಬೇಕು. ಬ್ರಿಟಿಷರ ಕಾಲದಿಂದಲೂ ತಮಿಳುನಾಡಿನವರು ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನೀರಿನ ಹಂಚಿಕೆ ಕೊರತೆ ಬಗ್ಗೆ ದೇವೇಗೌಡರು ‌ನಿಲ್ಲೋಕಾಗದೇ ಇರುವ ಪರಿಸ್ಥಿತಿಯಲ್ಲೂ ರಾಜ್ಯದ ಬಗ್ಗೆ ಮಾತನಾಡಿದ್ದರು. ಆದರೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಎಲ್ಲಿ ಹೋಗಿದ್ದಾರೆ? ದೇವೇಗೌಡರು ಮಾತನಾಡಬೇಕಾದರೆ, ತಮಿಳುನಾಡು ಸದಸ್ಯರು ಪ್ರತಿಭಟಿಸಿದರು. ಅದನ್ನು ಕಂಡು ದೇವೇಗೌಡರು ಎದ್ದು ನಿಂತು ಮಾತಾನಾಡಿದ್ದು ಅವರ ಕಮಿಟ್ ಮೆಂಟ್ ತೋರಿಸುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಾವೇರಿ ವಿಷಯದಲ್ಲಿ ಸರ್ಕಾರ ತಪ್ಪು ಮಾಡುವ ಮೂಲಕ ಜನರನ್ನು ಇಕ್ಕಟ್ಟಿಗೆ ಸಿಲುಕಿಸಿದೆ: ಬೊಮ್ಮಾಯಿ

“ದೇವೇಗೌಡರು ಕಾವೇರಿ ವಿಚಾರಕ್ಕಲ್ಲ, ಮೈತ್ರಿ ಬಗ್ಗೆ ಡೆಲ್ಲಿಗೆ ಹೋಗಿದ್ದಾರೆ ಅಂತ ಹೇಳಿದ್ದಾರೆ. ನಿನ್ನೆ, ಮೊನ್ನೆ ಬಂದವರು ದೇವೇಗೌಡರ ಬಗ್ಗೆ ಮಾತನಾಡುತ್ತಾರೆ. ದೇವೇಗೌಡರೇ ಏಕಾಂಗಿ ಹೋರಾಟ ಮಾಡಬೇಕು. ಎಮರ್ಜೆನ್ಸಿ ಅರ್ಜಿ ಹಾಕಿ ಮಧ್ಯರಾತ್ರಿ ಕೋರ್ಟ್ ನಡೆದಿಲ್ವಾ? ಅದೇ ತರಹವೇ ಇದು ಎಮರ್ಜನ್ಸಿ ಅಂತ ಒಂದು ಅರ್ಜಿ ಹಾಕಿಸೋಕೆ ಆಗಿಲ್ಲ” ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

“ಪ್ರಾಧಿಕಾರಕ್ಕೆ ಏನಾದ್ರೂ ಪ್ರಶ್ನೆ ಕೇಳದ ಅಧಿಕಾರ ಕೊಟ್ಟಿದ್ದೀವಾ? ವಾಟರ್ ಮ್ಯಾನೇಜ್ ಮೆಂಟ್ ಹೇಳಿದರು ಅಂದ ತಕ್ಷಣ ನೀರು ಬಿಡೋದು. ಸರ್ಕಾರ ಬಂದಾಗಿನಿಂದ ನೋಡುತ್ತಿರುವೆ. ಇವರು ತಮಿಳುನಾಡಿಗೆ ನೀರು ಬಿಡುತ್ತಲೇ ಇದ್ದಾರೆ. ದೇವೇಗೌಡರೇ ಏಕಾಂಗಿ ಹೋರಾಟ ಮಾಡಬೇಕು. ಅದೇನೋ ಪಾದಯಾತ್ರೆ ಮಾಡಿದವರು ಇದ್ದಾರಲ್ಲ. ಅವರು ಯಾಕೆ ಮಾತಾಡೋಕೆ ಆಗಿಲ್ಲ” ಎಂದು ಡಿಕೆ ಶಿವಕುಮಾರ್‌ ವಿರುದ್ಧ ಕಿಡಿಕಾರಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರದಲ್ಲಿ ಶೇ.72 ರಷ್ಟು ಶಾಂತಿಯುತ ಮತದಾನ; ಯಲಹಂಕದಲ್ಲಿ ಡಲ್, ಹೊಸಕೋಟೆಯಲ್ಲಿ ಬಹುತೇಕ ಫುಲ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ಶೇ.72 ರಷ್ಟು ಮಂದಿ ಮತ ಚಲಾವಣೆ...

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾಂಗಲ್ಯ ಧಾರಣೆ ಬಳಿಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ದಂಪತಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ....

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಕೆಲವೇ ಹೊತ್ತಲ್ಲಿ ಎಸ್‌ಐಟಿ ರಚನೆ: ಡಾ. ಜಿ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ...