ಕರಾವಳಿ ಭಾಗದಲ್ಲಿ ನೀರಿನ ಅಭಾವ; ಹಲವು ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ಥನೆ

Date:

ಕರಾವಳಿ ಭಾಗದಲ್ಲಿ ನೀರು ಕೊರತೆ ಉಂಟಾಗಿದ್ದು, ದೇವಸ್ಥಾನಗಳಲ್ಲಿ ಅಭಿಷೇಕಕ್ಕೂ ನೀರಿಲ್ಲದೆ ಜಲಕ್ಷಾಮ ಎದುರಾಗಿದೆ. ಬಹುತೇಕ ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ತನೆ ಮಾಡುತ್ತಿರುವುದೂ ಕಂಡುಬಂದಿದೆ.

ಮಳೆ ಆರಂಭವಾಗಬೇಕಾದ ಹೊತ್ತಲ್ಲಿ ರಣಬಿಸಿಲು ಸುಡುತ್ತಿರುವುದರಿಂದ ಶಾಲೆ, ಕಾಲೇಜುಗಳಿಗೆ ತೆರಳುವ ಮಕ್ಕಳು ಬಿಸಿಲಿಗೆ ಕೊಡೆ ಹಿಡಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಬಳಲಿ ಶಾಲೆಗೆ ತೆರಳಿದರೆ ಕುಡಿಯಲು ನೀರಿಲ್ಲದ ಪರಿಸ್ತಿತಿ ಇದೆ.

“ನಿತ್ಯ ಅನ್ನಪ್ರಸಾದ ನೀಡುವ ದೇವಸ್ಥಾನಗಳು ಪ್ರಯಾಸಪಟ್ಟು ಪ್ರತ್ಯೇಕವಾಗಿ ನೀರಿನ ವ್ಯವಸ್ಥೆ ಮಾಡಿಕೊಂಡಿರುವುದನ್ನು ಹೊರತುಪಡಿಸಿದರೆ, ನದಿಯನ್ನೇ ನಂಬಿಕೊಂಡಿರುವ ಕಟೀಲು ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿ ಸಮಸ್ಯೆ ಉಂಟಾಗಿದೆ” ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬತ್ತಿ ಹೋದ ನಂದಿನಿ

ಮಳೆಗಾಲವಿದ್ದಾಗ ನಂದಿನಿ ಹೊಳೆ ತುಂಬಿ ಹರಿಯುವುದರಿಂದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನವು ದ್ವೀಪದಂತೆ ಕಂಗೊಳಿಸುತ್ತಿತ್ತು. ಆದರೀಗ, ನಂದಿನಿ ಬತ್ತಿ ಹೋಗಿರುವುದರಿಂದ ದೇವಾಲಯದ ಚಿತ್ರಣವೇ ಬೇರೆಯಾಗಿದೆ.

ಕಟೀಲು ದೇವಸ್ಥಾನಕ್ಕೆ ಪ್ರತಿನಿತ್ಯ ಆಗಮಿಸುವ ಭಕ್ತರಿಗಾಗಿ ತೀರ್ಥ, ಅನ್ನಪ್ರಸಾದಕ್ಕೆ ನದಿ ನೀರು ಬಳಕೆಯಾಗುತ್ತದೆ. ಆದರೆ ಈಗ ನದಿಯಲ್ಲಿ ನೀರಿಲ್ಲ. ಈಗಿರುವ ಸಣ್ಣ ಪ್ರಮಾಣದ ನೀರು ಅದ್ಯಾವುದಕ್ಕೂ ಸಾಕಾಗುತ್ತಿಲ್ಲ. ಹೀಗಾಗಿ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಯಾಗಿದೆ.

ಮೂರು ಹೊತ್ತು ದೇವಸ್ಥಾನದಲ್ಲಿ ಅನ್ನಪ್ರಸಾದ ವಿತರಣೆಯಾಗುವ ಕಾರಣ, ಸ್ಟೀಲ್ ಬಟ್ಟಲುಗಳಲ್ಲಿ ಊಟ ವಿತರಿಸಲಾಗುತ್ತಿತ್ತು. ಇದೀಗ ಅದರ ಬದಲಿಗೆ ಅಡಕೆ ಹಾಳೆ ತಟ್ಟೆಯನ್ನು ಉಪಯೋಗಿಸಲಾಗುತ್ತಿದೆ. ಇದರಿಂದ ಎರಡು ಲಾಭವಿದೆ. ಮೊದಲನೆಯದ್ದು ನೀರಿನ ಉಳಿತಾಯ, ಎರಡನೆಯದ್ದು ಪರಿಸರ ಸಂರಕ್ಷಣೆ. ಹಾಳೆ ತಟ್ಟೆಗಳು ಪ್ಲಾಸ್ಟಿಕ್‌ನಂತಲ್ಲ. ಅದನ್ನು ವಿಲೇವಾರಿ ಮಾಡಲು ಸುಲಭ. ಹೀಗಾಗಿ ಊಟ ನೀಡುವ ಸಂದರ್ಭ ನೀರಿನ ಬಳಕೆ ಕಡಿಮೆ ಮಾಡಬಹುದಾದರೂ ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ಅಭಿಷೇಕ, ತೀರ್ಥ ಇತ್ಯಾದಿಗಳಿಗೆ ನೀರು ಬೇಕೇ ಬೇಕು. ಆದರೆ ಅದಕ್ಕೂ ಅದ್ವಾನವಾಗಿದೆ.

ಕರಾವಳಿಯಲ್ಲಿ ಇಂಥ ಬಹುತೇಕ ಸಣ್ಣಪುಟ್ಟ ನದಿ, ಹೊಳೆಯನ್ನು ನಂಬಿ ಇರುವ ದೇವಸ್ಥಾನಗಳಲ್ಲಿ ಇದೇ ಪರಿಸ್ಥಿತಿ ಎದುರಾಗಿದೆ. ಅಲ್ಲಿ ಭಕ್ತರ ಸಂಖ್ಯೆ ವಿರಳವಾಗಿರುವ ಕಾರಣ ದೊಡ್ಡ ಮಟ್ಟಿನ ಸಮಸ್ಯೆ ತಲೆದೋರಿಲ್ಲ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಬಿಪರ್‌ಜಾಯ್ ಚಂಡಮಾರುತ; ಅರಬ್ಬಿ ಸಮುದ್ರ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಕಟೀಲಿನಲ್ಲಿ ಪದವಿ ಕಾಲೇಜು ಹೊರತುಪಡಿಸಿ ಒಂದನೇ ತರಗತಿಯಿಂದ ಪದವಿಪೂರ್ವ ಕಾಲೇಜಿನ ವರೆಗೆ ಮದ್ಯಾಹ್ನದವರೆಗೆ ತರಗತಿಗಳು ನಡೆಸಲಾಗುತ್ತಿದೆ. ದೇವಸ್ಥಾನದಲ್ಲಿ ಮೂರು ಬಾವಿ ಮತ್ತು ಮೂರು ಬೋರ್‌ವೆಲ್‌ಗಳು ಇವೆ. ಆದರೂ ನೀರು ಸಂಪೂರ್ಣವಾಗಿ ಬತ್ತಿದೆ. ಕಳೆದ ಏಪ್ರಿಲ್‌ನಲ್ಲಿ ನಡೆದ ಜಾತ್ರಾಮಹೋತ್ಸವದ ಸಂದರ್ಭದಲ್ಲೂ ನೀರಿನ ಅಭಾವ ಉಂಟಾಗಿತ್ತು.

ಕರಾವಳಿಯಲ್ಲಿ ಪ್ರತಿ ಬಾರಿ ಇಂಥ ಬರಗಾಲ ಬಂದಾಗ ಮಳೆಗಾಗಿ ದೇವರ ಮೊರೆಹೋಗುವುದು ವಾಡಿಕೆ. ಈ ಬಾರಿಯೂ ನಂದಾವರ, ಸಜಿಪ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...

ದಾವಣಗೆರೆ | ಕಾಂಗ್ರೆಸ್‌ಗೆ ಮಡಿವಾಳ ಸಮಾಜ ಬೆಂಬಲ; ಬೇಡಿಕೆಗಳ ಈಡೇರಿಕೆಗೆ ಆಗ್ರಹ

ರಾಜ್ಯದಲ್ಲಿನ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದು, ರಾಜ್ಯದ ಎಲ್ಲ ತಾಲೂಕಿನಲ್ಲಿ...

ಚಿಕ್ಕಮಗಳೂರು | ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ ಕರೆ

ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೇಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ...