ಮಂಗಳೂರಿನಲ್ಲಿ ಮತ್ತೊಂದು ಧ್ವೇಷದ ಕೊಲೆ : ವೆಲ್ಫೇರ್ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಖಂಡನೆ

Date:

ಅಡ್ಡೂರು ಸಮೀಪದ ಕೊಳ್ತಮಜಲು ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ಭೀಕರ ತಲವಾರು ಧಾಳಿ ನಡೆದಿದೆ. ದುಷ್ಕರ್ಮಿಗಳ ಧಾಳಿಗೆ ರಹೀಂ ಎಂಬ ಯುವಕ ಬಲಿಯಾಗಿದ್ದಾನೆ. ಈ ಕೊಲೆಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಖಂಡನೆ ವ್ಯಕ್ತಪಡಿದೆ.

ನಿಜವಾಗಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏನು ನಡೆಯುತ್ತಿದೆ? ಕೊಲೆಯ ಮೇಲೆ ಕೊಲೆ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಮತ್ತೆ ಮತ್ತೆ ಧ್ವೆಷ ಭಾಷಣಗಳ ವೇದಿಕೆಗಳಿಗೆ ಅನುಮತಿ ನೀಡುತ್ತಿದೆ. ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ. ತಕ್ಷಣ ಉಸ್ತುವಾರಿ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲೇಬೇಕು.

ಹೆಣಗಳ ಮೇಲೆ ರಾಜಕೀಯ ಮಾಡುವ ಆ ಮೂಲಕ ಧ್ವೇಷ ಬಿತ್ತುವವವರ ಮೇಲೆ ಕೇಸು ದಾಖಲಿಸಲು ಹಿಂಜರಿಯುವ ಪೊಲೀಸ್ ಇಲಾಖೆಯ ವೈಫಲ್ಯದಿಂದ ಜಿಲ್ಲೆಯಲ್ಲಿ ಬಾಳಿ ಬದುಕಬೇಕಾದ ಅಮಾಯಕ ಯುವಕರು ಬಲಿಯಾಗುತ್ತಿದ್ದಾರೆ. ಇಲಾಖೆಯನ್ನು ನಿಭಾಯಿಸಲು ಸಾಧ್ಯವಿಲ್ಲದ ಅಸಮರ್ಥ ಗೃಹ ಸಚಿವರು ರಾಜೀನಾಮೆ ನೀಡಲಿ.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಧಿಕಾರ ವ್ಯಾಪ್ತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಇಲ್ಲವೇ? ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಎಂ. ದಿವಾಕರ್ ರಾವ್ ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಗಡಿ ಮಳಿಗೆಯಲ್ಲಿ ಅಂಗನವಾಡಿ ಕೇಂದ್ರ : ತ್ಯಾಜ್ಯ-ಘಟಕವಾದ ಮಹಾತ್ಮಗಾಂಧಿ ಶಿಶುವಿಹಾರ

ಅಂಗಡಿಯೋ, ಅಂಗನವಾಡಿಯೋ ? ಒಂದೇ ಕೊಠಡಿಯಲ್ಲಿ ಗ್ಯಾಸ್-ಒಲೆ, ಗ್ಯಾಸ್ ಸಿಲಿಂಡರ್ ಹಾಗೂ ಎಳೆಯ...

ಶಿವಮೊಗ್ಗ | ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ “ಓದುಗಾರಿಕೆಯ ಆಯಾಮಗಳು” ಪುಸ್ತಕ ಬಿಡುಗಡೆ

ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಡಿವಿಎಸ್ ಸಂಸ್ಥೆಯ ಕನ್ನಡ ಉಪನ್ಯಾಸಕರಾದ ಶ್ರೀ ಸಂದೇಶ್...

ದ.ಕ ಜಿಲ್ಲೆಯಲ್ಲಿ ಸರಣಿ ಕೊಲೆ | ಎಸ್‌ಐಟಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಮಂಜುನಾಥ ಭಂಡಾರಿ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷದಂತಹ ಪ್ರಕರಣಗಳು ಮುಂದುವರಿದಿದ್ದು, ಕೇವಲ ಕೆಲವು...

ಧಾರವಾಡ | ಹೆಣ್ಣು ಮಕ್ಕಳು ಬಸವಣ್ಣ, ಅಂಬೇಡ್ಕರ್‌ ತತ್ವಗಳನ್ನು ಅರಿತುಕೊಳ್ಳಬೇಕು: ಸಂತೋಷ್ ಲಾಡ್

ಬಸವಣ್ಣವರ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಹೆಣ್ಣು‌ ಮಕ್ಕಳು ಅರಿತುಕೊಳ್ಳಬೇಕು. ಮತ್ತು...

Download Eedina App Android / iOS

X