ಉಡುಪಿ | ಶೌಚಾಲಯದಲ್ಲಿ ಹಿಡನ್‌ ಕ್ಯಾಮರಾ ಇರಲಿಲ್ಲ, ಇದು ಬ್ರೇಕಿಂಗ್ ನ್ಯೂಸ್ ಅಲ್ಲ: ಖುಷ್ಬೂ ಸುಂದರ್‌ ಸ್ಪಷ್ಟನೆ

Date:

Advertisements
  • ಕೋಮು ಬಣ್ಣಕ್ಕೆ ತಿರುಗಿರುವ ಉಡುಪಿ ಕಾಲೇಜಿನ ವಿಡಿಯೋ ಪ್ರಕರಣ
  • ‘ಇದು ಬ್ರೇಕಿಂಗ್ ನ್ಯೂಸ್ ಅಲ್ಲ’ ಎಂದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ

ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಉಡುಪಿಗೆ ಆಗಮಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಪ್ರತಿನಿಧಿ ಖುಷ್ಬೂ ಸುಂದರ್‌, ಶೌಚಾಲಯದಲ್ಲಿ ಯಾವುದೇ ಹಿಡನ್‌ ಕ್ಯಾಮೆರಾಗಳು ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿ ಪೊಲೀಸರೊಂದಿಗೆ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ ಇದೆ ಎಂಬ ವದಂತಿ ಹರಡಿದೆ. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಸುಳ್ಳು ವೀಡಿಯೋ ಹರಿದಾಡುತ್ತಿದೆ. ಇದೊಂದು ಶೈಕ್ಷಣಿಕ ಸಂಸ್ಥೆ. ಹಾಗಾಗಿ ಹಿಡನ್‌ ಕ್ಯಾಮೆರಾಗಳು ಇರಲು ಸಾಧ್ಯವಿಲ್ಲ ಎಂದರು.

ಯಾರಾದರೂ ಆರೋಪ ಮಾಡಿದ್ದಾರೆ ಎಂಬ ಕಾರಣಕ್ಕೆ ಅದನ್ನು ನಾವು ಪುರಸ್ಕರಿಸಲು ಆಗಲ್ಲ. ನಮಗೆ ದಾಖಲೆಗಳು ಬೇಕು. ಅದಕ್ಕಾಗಿ ತಾಳ್ಮೆಯಿಂದ ಕಾಯಬೇಕು ಎಂದು ಖುಷ್ಬೂ ತಿಳಿಸಿದರು.

Advertisements

‘ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ ಇದೆ ಎಂಬುದು ಕೇವಲ ವದಂತಿಯಷ್ಟೇ. ಮಾಧ್ಯಮದವರೂ ಕೂಡ ಇದೇ ವದಂತಿಯನ್ನು ನಂಬಿಕೊಂಡು ನನ್ನಲ್ಲಿ ಪ್ರಶ್ನೆ ಕೇಳುತ್ತಿದ್ದಾರೆ. ಇದು ಬೇಸರ ತರಿಸುತ್ತಿದೆ. ಈ ಪ್ರಕರಣದ ಕುರಿತು ಈಗಲೇ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.

ಇದನ್ನು ಓದಿದ್ದೀರಾ? ಉಡುಪಿ ವಿವಾದ | ಘಟನೆ ನಡೆದಿಲ್ಲ ಅಂತ ಎಲ್ಲೂ ಹೇಳಿಲ್ಲ: ಎಬಿವಿಪಿ ಕಾರ್ಯಕರ್ತರಿಗೆ ಎಸ್‌ಪಿ ಸ್ಪಷ್ಟನೆ

ಕಾಲೇಜಿನಲ್ಲಿ ನಾಲ್ಕು ಗಂಟೆ ತಪಾಸಣೆ ನಡೆಸಿಯೂ ಏನೂ ಸಿಕ್ಕಿಲ್ಲವೇ ಎಂದು ಕೇಳಿದ ಪತ್ರಕರ್ತನಿಗೆ ಉತ್ತರ ನೀಡಿದ ಖುಷ್ಬೂ ಸುಂದರ್, ‘ಇದು ಬ್ರೇಕಿಂಗ್ ನ್ಯೂಸ್ ಅಲ್ಲ. ಇದು ವಿದ್ಯಾರ್ಥಿಗಳ ಬಗೆಗಿನ ವಿಷಯ. ಮಹಿಳೆಯರ ವಿಚಾರ. ಎಲ್ಲರೂ ತಾಳ್ಮೆಯಿಂದ ವರ್ತಿಸಬೇಕು. ಇದು ಎರಡು ನಿಮಿಷದಲ್ಲಿ ತಯಾರಾಗುವ ನೂಡಲ್ಸ್ ಅಲ್ಲ” ಎಂದು ಖಡಕ್ ಆಗಿಯೇ ಉತ್ತರಿಸಿದರು.

‘ರಾಷ್ಟ್ರೀಯ ಮಹಿಳಾ ಆಯೋಗವು ಪೊಲೀಸರೊಂದಿಗೆ ಸೇರಿ ಕೆಲಸ ಮಾಡುತ್ತಿದೆ. ನಾವೂ ಕೂಡ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಹಾಗಾಗಿ ಯಾವುದೇ ಮಾಹಿತಿಗಳನ್ನು ಈಗಲೇ ಹೇಳಲು ಸಾಧ್ಯವಿಲ್ಲ’ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. This Yashpal suvarna and Sunil Kumar were thrown out of vidhana sabha for their misbehaviour. Now they want the incident to be diverted to video in toilet . Yashpal suvarna is of goonda nature and Sunil Kumar stolen government cement from the dam site. Both are staunch supporter of RSS and Bajrang dal. Their intension is to torch the district in the name of religion. Beware of these hooligans

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X