ಗದಗ | ನಾಲ್ಕು ಕ್ಷೇತ್ರಗಳಲ್ಲಿ ಯಾರಿಗೆ ಹಿನ್ನಡೆ/ಮುನ್ನಡೆ?

Date:

  • ಗದಗ, ನರಗುಂದ, ಶಿರಹಟ್ಟಿ, ರೋಣ ಕ್ಷೇತ್ರಗಳ ಅಂಚೆ ಮತಗಳ ಎಣಿಕೆ ವಿಳಂಬ
  • 2018ರಲ್ಲಿ ಮೂರು ಕ್ಷೇತ್ರಗಳು ಬಿಜೆಪಿ ಪಾಲಾಗಿದ್ದರೆ, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದರು

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನ ಮೇ 13ರಂದು ರಾಜ್ಯದೆಲ್ಲೆಡೆ ಆರಂಭವಾಗಿದ್ದು, 2,615 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ಗೊತ್ತಾಗಲಿದೆ. ಗದಗ ಜಿಲ್ಲೆಯ ಗದಗ, ನರಗುಂದ, ಶಿರಹಟ್ಟಿ, ರೋಣ ಕ್ಷೇತ್ರದಲ್ಲಿ ಅಂಚೆ ಮತಗಳ ಎಣಿಕೆ ವಿಳಂಬವಾಗಿದೆ.

ಅಂಚೆ ಮತ ಎಣಿಕೆಯಲ್ಲಿ ಯಾರಿಗೆ ಮುನ್ನಡೆ?

ಅಂಚೆಮತಗಳಲ್ಲಿ ಗದಗ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಮುನ್ನಡೆ ಪಡೆದಿದ್ದು, ಶಿರಹಟ್ಟಿ ಬಿಜೆಪಿ ಅಭ್ಯರ್ಥಿ ಡಾ. ಚಂದ್ರು ಲಮಾಣಿ ಮುನ್ನಡೆ ಸಾಧಿಸಿದ್ದಾರೆ. ರೋಣ ಮತಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಿ.ಎಸ್ ಪಾಟೀಲ್ ಮುನ್ನಡೆಯಲ್ಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮತ ಎಣಿಕೆ ಕೇಂದ್ರದ ಬಳಿ ತಿಂಡಿ ವ್ಯವಸ್ಥೆ; ಕೋಪಗೊಂಡ ಜಿಲ್ಲಾಧಿಕಾರಿ

ಮೊದಲ ಸುತ್ತಿನಲ್ಲಿ ಕಾಂಗ್ರೆಸ್‌ ಮುನ್ನಡೆ

ಮೊದಲನೇ ಸುತ್ತಿನಲ್ಲಿ ರೋಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ ಎಸ್ ಪಾಟೀಲ್ 4928 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ.

ಗದಗ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಕೆ‌.ಪಾಟೀಲ್ ಕೂಡ ಮುನ್ನಡೆಯಲ್ಲಿದ್ದಾರೆ. ಶಿರಹಟ್ಟಿ ಬಿಜೆಪಿ ಅಭ್ಯರ್ಥಿ ಡಾ ಚಂದ್ರು ಲಮಾಣಿ 2,739 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ನರಗುಂದದಲ್ಲಿ ಮೊದಲನೇ ಸುತ್ತಿನಲ್ಲಿ 5279 ಮತ ಪಡೆದು ಯಾವಗಲ್ ಅವರು ಮುನ್ನಡೆಯಲ್ಲಿದ್ದಾರೆ.

ಎರಡನೇ ಸುತ್ತಿನ ವಿವರ

ಗದಗ, ಶಿರಹಟ್ಟಿ ಮತ್ರು ರೋಣ ಕ್ಷೇತ್ರದ 2ನೇ ಸುತ್ತು ಮುಕ್ತಾಯವಾಗಿದ್ದು, ರೋಣದಲ್ಲಿ 17157 ಮತ ಎಣಿಕೆ ಮುಕ್ತಾಯವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.ಪಾಟೀಲ 8534, ಬಿಜೆಪಿ ಅಭ್ಯರ್ಥಿ ಕಳಕಪ್ಪ ಬಂಡಿಗೆ 7487 ಮತಗಳು ಲಭಿಸಿವೆ.

ಶಿರಹಟ್ಟಿಯಲ್ಲಿ 19155 ಮತಗಳ ಎಣಿಕೆ ಮುಕ್ತಾಯವಾಗಿದೆ. ಬಿಜೆಪಿಯ ಚಂದ್ರು ಲಮಾಣಿ 8335, ಕಾಂಗ್ರೆಸ್ಸಿನ ಸುಜಾತಾ ದೊಡ್ಡಮನಿ 5473, ಪಕ್ಷೇತರ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ 4170 ಮತಗಳನ್ನು ಪಡೆದಿದ್ದಾರೆ.

2018ರಲ್ಲಿ ಮೂರು ಕ್ಷೇತ್ರಗಳು ಬಿಜೆಪಿ ಪಾಲಾಗಿದ್ದರೆ, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬಿಜೆಪಿಯಿಂದ ಸಂವಿಧಾನ ಆಶಯಗಳು ಬುಡಮೇಲು : ಡಿ.ಜಿ.ಸಾಗರ್

ದೇಶದಲ್ಲಿ ಪ್ರತಿ ಆರು ನಿಮಿಷಗಳಿಗೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ...

ಯಾದಗಿರಿ | ಈಜಲು ಹೋಗಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವು

ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ...

ದಾವಣಗೆರೆ | ಹೆಗಡೆ ನಗರಕ್ಕೆ ಪಕ್ಷೇತರ ಅಭ್ಯರ್ಥಿ ವಿನಯ್ ಕುಮಾರ್ ಭೇಟಿ; ಸಮಸ್ಯೆಗಳ ಅನಾವರಣ

ದಾವಣಗೆರೆ ನಗರದ ರಿಂಗ್ ರಸ್ತೆಯಲ್ಲಿ ವಾಸವಿದ್ದ ನೂರಾರು ಕುಟುಂಬಗಳನ್ನು ಒಕ್ಕಲೆಬ್ಬಿಸಿ, ತಾಲೂಕಿನ...

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...