- ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ವಿ
- ಮಂಗಳೂರಿನ ಕದ್ರಿಯಲ್ಲಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿಕೆ
“ಚೈತ್ರಾ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು? ಚೈತ್ರಾ ಕುಂದಾಪುರಳಿಗೂ ನಮಗೂ ಸಂಬಂಧ ಇಲ್ಲ” ಎಂದು ವಿಶ್ವ ಹಿಂದೂ ಪರಿಷತ್ನ ಮುಖಂಡ ಶರಣ್ ಪಂಪ್ವೆಲ್ ಹೇಳಿಕೆ ನೀಡಿದ್ದಾರೆ.
ಮಂಗಳೂರಿನ ಕದ್ರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಚೈತ್ರಾ ಕುಂದಾಪುರ ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ದದ್ದು ಹೌದು. ಈ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ದರೂ ಶಿಕ್ಷೆ ಆಗಲೇಬೇಕು. ಇಂತಹ ಪ್ರಕರಣಗಳಿಗೆ ವಿಶ್ಚಹಿಂದೂ ಪರಿಷತ್, ಭಜರಂಗದಳ ಬೆಂಬಲ ನೀಡಲ್ಲ” ಎಂದರು.
ಚೈತ್ರಾ ಕುಂದಾಪುರ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು..?
— eedina.com (@eedinanews) September 21, 2023
ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಪ್ರಶ್ನೆ
ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ವಿ ಎಂದ ಬಲಪಂಥೀಯ ಸಂಘಟನೆಯ ಮುಖಂಡ@ChekrishnaCk @DEEPUVAJRAMUNI pic.twitter.com/h8IKhvwkXX
“ಹಣಕಾಸಿನ ವ್ಯವಹಾರದ ಕುರಿತು ನನ್ನ ಬಳಿ ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದರು. ಆಗ ನಾನು ನಿಮ್ಮ ತಪ್ಪು ಇಲ್ವಲ್ಲ. ನೀವು ಏನು ಭಯಪಡಬೇಡಿ ಎಂದು ಹೇಳಿದ್ದೆ. ಇಂತಹ ಪ್ರಕರಣ ಎಲ್ಲಿಯೂ ನಡೆಯಬಾರದು” ಎಂದರು.
ಸೆಪ್ಟೆಂಬರ್ 25 ರಿಂದ ರಾಜ್ಯಾದ್ಯಂತ ಶೌರ್ಯ ಜಾಗರಣ ರಥಯಾತ್ರೆ ನಡೆಯಲಿದೆ. ಲವ್ ಜಿಹಾದ್, ಗೋಹತ್ಯೆ ತಡೆಯಲು ರಥಯಾತ್ರೆ ಮಹತ್ವ ಪಡೆಯಲಿದೆ ಎಂದರು.
ಭಜರಂಗದಳ ನಿಷೇಧ ವಿಚಾರ ಪ್ರಸ್ತಾಪಿಸಿದ ಶರಣ್ ಪಂಪ್ವೆಲ್, “ಇನ್ನು ಭಜರಂಗದಳವನ್ನು ನಿಷೇಧ ಮಾಡಲು ಸಾಧ್ಯವೇ ಇಲ್ಲ. ಭಜರಂಗದಳ ಸಮಾಜ ವಿರೋಧಿ ಕೆಲಸ ಮಾಡಿಲ್ಲ. ಒಂದು ವರ್ಷದ ಒಳಗಡೆ ಐದು ಸಾವಿರ ಬಜರಂಗದಳದ ಘಟಕ ನಿರ್ಮಾಣ ಮಾಡುತ್ತೇವೆ” ಎಂದರು.