ಚೈತ್ರಾ ಕುಂದಾಪುರ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು? ಶರಣ್ ಪಂಪ್‌ವೆಲ್ ಹೇಳಿಕೆ

Date:

  • ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ವಿ
  • ಮಂಗಳೂರಿನ ಕದ್ರಿಯಲ್ಲಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿಕೆ

“ಚೈತ್ರಾ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು? ಚೈತ್ರಾ ಕುಂದಾಪುರಳಿಗೂ ನಮಗೂ ಸಂಬಂಧ ಇಲ್ಲ” ಎಂದು ವಿಶ್ವ ಹಿಂದೂ ಪರಿಷತ್‌ನ ಮುಖಂಡ ಶರಣ್ ಪಂಪ್‌ವೆಲ್ ಹೇಳಿಕೆ ನೀಡಿದ್ದಾರೆ.

ಮಂಗಳೂರಿನ ಕದ್ರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಚೈತ್ರಾ ಕುಂದಾಪುರ ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ದದ್ದು ಹೌದು. ಈ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ದರೂ ಶಿಕ್ಷೆ ಆಗಲೇಬೇಕು. ಇಂತಹ ಪ್ರಕರಣಗಳಿಗೆ ವಿಶ್ಚಹಿಂದೂ ಪರಿಷತ್, ಭಜರಂಗದಳ ಬೆಂಬಲ ನೀಡಲ್ಲ” ಎಂದರು.

“ಹಣಕಾಸಿನ ವ್ಯವಹಾರದ ಕುರಿತು ನನ್ನ ಬಳಿ ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದರು. ಆಗ ನಾನು ನಿಮ್ಮ ತಪ್ಪು ಇಲ್ವಲ್ಲ. ನೀವು ಏನು ಭಯಪಡಬೇಡಿ ಎಂದು ಹೇಳಿದ್ದೆ. ಇಂತಹ ಪ್ರಕರಣ ಎಲ್ಲಿಯೂ ನಡೆಯಬಾರದು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸೆಪ್ಟೆಂಬರ್ 25 ರಿಂದ ರಾಜ್ಯಾದ್ಯಂತ ಶೌರ್ಯ ಜಾಗರಣ ರಥಯಾತ್ರೆ ನಡೆಯಲಿದೆ. ಲವ್ ಜಿಹಾದ್, ಗೋಹತ್ಯೆ ತಡೆಯಲು ರಥಯಾತ್ರೆ ಮಹತ್ವ ಪಡೆಯಲಿದೆ ಎಂದರು.

ಭಜರಂಗದಳ ನಿಷೇಧ ವಿಚಾರ ಪ್ರಸ್ತಾಪಿಸಿದ ಶರಣ್ ಪಂಪ್‌ವೆಲ್, “ಇನ್ನು ಭಜರಂಗದಳವನ್ನು ನಿಷೇಧ ಮಾಡಲು ಸಾಧ್ಯವೇ ಇಲ್ಲ. ಭಜರಂಗದಳ ಸಮಾಜ ವಿರೋಧಿ ಕೆಲಸ ಮಾಡಿಲ್ಲ. ಒಂದು ವರ್ಷದ ಒಳಗಡೆ ಐದು ಸಾವಿರ ಬಜರಂಗದಳದ ಘಟಕ ನಿರ್ಮಾಣ ಮಾಡುತ್ತೇವೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾಂಗಲ್ಯ ಧಾರಣೆ ಬಳಿಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ದಂಪತಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ....

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...