- ರಸ್ತೆ ಹದಗೆಟ್ಟ ಕಾರಣಕ್ಕೆ ಕಾಡಂಚಿನ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಇಲ್ಲ
- ಮತಿ ಪತ್ನಿ ನಡೆದುಕೊಂಡು ಹೋಗುತ್ತಿದ್ದಾಗ ದಾಳಿ ನಡೆಸಿದ ಒಂಟಿ ಸಲಗ
ಮತದಾನ ಮಾಡಲು ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿ ವ್ಯಕ್ತಿಯನ್ನು ತುಳಿದು ಸಾಯಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಾದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆ ಮೇ 10ರಂದು ಮತದಾಣ ಮಾಡಲು ಹಳೆ ಮಾಟಳ್ಳಿ ಗ್ರಾಮದಿಂದ ತೋಕೆರೆ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ. ಹನೂರು ತಾಲೂಕಿನ ತೋಕರೆ ಗ್ರಾಮದ ಪುಟ್ಟಸ್ವಾಮಿ (42) ಮೃತ ವ್ಯಕ್ತಿ.
ಹಳೆ ಮಾಟಳ್ಳಿ ಗ್ರಾಮದಿಂದ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಕೆರೆ ಗ್ರಾಮಕ್ಕೆ ಪತಿ ಪತ್ನಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಪತಿಯ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಕಾಡಾನೆ ದಾಳಿಗೆ ಪುಟ್ಟಸ್ವಾಮಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ನಂತರ ಪತ್ನಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಡಂಚಿನ ಗ್ರಾಮಗಳ ರಸ್ತೆ ತೀವ್ರ ಹದಗೆಟ್ಟಿರುವುದರಿಂದ ದ್ವಿಚಕ್ರವಾಹನ ಸೇರಿದಂತೆ ಇನ್ನಿತರ ವಾಹನಗಳ ಸಂಚಾರ ಸಾಧ್ಯವಾಗದೇ ಇರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಇನ್ನು ಮುಂದಾದರೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಕಾಡಂಚಿನ ಗ್ರಾಮಗಳಿಗೆ ಮೂಲ ಸೌಲಭ್ಯ ಕಲ್ಪಿಸುವಂತೆ ನಿವಾಸಿಗಳು ಆಗಮಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮತದಾನಕ್ಕೆ ತೆರಳಿದ್ದಾಗ ಹೆರಿಗೆ; ಮತ ಕೇಂದ್ರದಲ್ಲೇ ಜನಿಸಿದ ಮಗು