ದಾವಣಗೆರೆ | ನರಹಂತಕ ಕಾಡಾನೆ ಸೆರೆಗೆ ಕೂಂಬಿಂಗ್‌ ಕಾರ್ಯಾಚರಣೆ ಆರಂಭ

Date:

Advertisements
  • ಸಕ್ರೆಬೈಲು ಶಿಬಿರದಿಂದ ಮೂರು ಸಾಕಾನೆಗಳಿಂದ ಕಾರ್ಯಾಚರಣೆ
  • ಶನಿವಾರ ಯುವತಿಯನ್ನು ತುಳಿದು ಸಾಯಿಸಿದ್ದ ಕಾಡಾನೆ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಶನಿವಾರ ಯುವತಿಯನ್ನು ತುಳಿದು ಸಾಯಿಸಿದ್ದ ಕಾಡಾನೆಯ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ತೀವ್ರ ಹುಡುಕಾಟ ನಡೆಸಿದ್ದಾರೆ.

ಶನಿವಾರ ಬೆಳಿಗ್ಗೆ ಯುವತಿ ಕವನಾ ಮತ್ತು ಅವರ ತಾಯಿ ಮೇಲೆ ದಾಳಿ ಮಾಡಿದ ನಂತರ ಆನೆಯು ಸೂಳೆಕೆರೆ ಹಿನ್ನೀರಿನಲ್ಲಿ ಗೋಚರಿಸಿತ್ತು. ಸ್ಥಳಕ್ಕೆ ಧಾವಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಅದರ ಚಲನವಲನಗಳ ಮೇಲೆ ನಿಗಾ ಇರಿಸಿದ್ದರು.

ಕಾಡಾನೆ ಸೆರೆಗೆ ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರದಿಂದ ಸಾಗರ, ಬಲಭೀಮ ಹಾಗೂ ಬಹದ್ಧೂರ್‌ ಎಂಬ ಮೂರು ಆನೆಗಳನ್ನು ಸೂಳೆಕೆರೆಗೆ ಕರೆತಂದಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ, ಭಾನುವಾರ ಬೆಳಿಗ್ಗೆಯಿಂದ ಆನೆಗಾಗಿ ಹುಡುಕಾಟ ನಡೆಸಿದ್ದರು. ಸಂಜೆಯ ವೇಳೆಗೆ ಡ್ರೋಣ್‌ ಕ್ಯಾಮೆರಾದಲ್ಲಿ ಆನೆ ಗೋಚರಿಸಿತ್ತು.

Advertisements

ಆನೆಯು ಸೂಳೆಕೆರೆಯಿಂದ, ಅರಿಶಿನ ಘಟ್ಟ, ಗುಡ್ಡದ ಕೊಮಾರನಹಳ್ಳಿ, ಗುಡ್ಡದ ಬೆನಕನಹಳ್ಳಿ, ಮಧುರನಾಯಕನ ಹಳ್ಳಿ, ಯಲೋದಹಳ್ಳಿ ಮೂಲಕ ಶೃಂಗಾರ ಭಾಗ್ ಅರಣ್ಯ ಪ್ರದೇಶಕ್ಕೆ ಬಂದಿರಬಹುದು. ಸಿಬ್ಬಂದಿ, ಪಶುವೈದ್ಯರು, ಅರವಳಿಕ ತಜ್ಞರು ಹಾಗೂ ಮಾವುತರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.

ಸಕ್ರೇಬೈಲು ಆನೆ ಶಿಬಿರದಿಂದ ಕರೆತರಲಾದ ಮೂರು ಆನೆಗಳನ್ನು ಅರಸನಗಟ್ಟ ಮಠದಲ್ಲಿ ಇರಿಸಲಾಗಿದೆ. ಅವುಗಳ ನೆರವಿನೊಂದಿಗೆ  ಸಫಾರಿ ಮೂಲಕ ತೆರಳಿ ಕಾಡಿನಲ್ಲಿ ಓಡಾಡುತ್ತಿರುವ ಆನೆಗೆ ಅರವಳಿಕೆ ಮದ್ದು ನೀಡುವ ಮೂಲಕ ಸೆರೆ ಹಿಡಿಯಲಾಗುವುದು. ಮನೆ ಬಿಟ್ಟು ಹೊರಗೆ ಬಾರದಂತೆ ಸುತ್ತಮುತ್ತಲ ಗ್ರಾಮಗಳ ಜನರಿಗೆ ಧ್ವನಿವರ್ಧಕದ ಮೂಲಕ ಎಚ್ಚರಿಕೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X