ಶಾಂತಿ ಕದಡಿದರೆ ಬಜರಂಗದಳ, ಆರ್‌ಎಸ್‌ಎಸ್‌ ಸಂಘಟನೆಗಳ ನಿಷೇಧ : ಪ್ರಿಯಾಂಕ್‌ ಖರ್ಗೆ

Date:

  • ಯಾವುದೇ ಸಂಘಟನೆಗಳು ಕಾನೂನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ
  • ಹಿಜಾಬ್, ಹಲಾಲ್ ಕಟ್ ಹಾಗೂ ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧ ಹಿಂದಕ್ಕೆ

ರಾಜ್ಯದಲ್ಲಿ ಶಾಂತಿ ಕದಡಿದರೆ ಬಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ. ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, “ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ. ಒಂದು ವೇಳೆ ಶಾಂತಿ ಕದಡಿದರೆ ಅದು ಬಜರಂಗದಳ ಅಥವಾ ಆರ್‌ಎಸ್‌ಎಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

“ಹಿಜಾಬ್, ಹಲಾಲ್ ಕಟ್ ಮತ್ತು ಗೋ ಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ. ಕಳೆದ ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ” ಎಂದಿದ್ದಾರೆ.

“ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಬಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ” ಎಂದು ಹೇಳಿದ್ದಾರೆ.

“ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕುವ ಕಾನೂನು ನಮಗೆ ಬೇಕಾಗಿದೆ. ಯಾರೋ ನಾಗಪುರದವರು ಆದೇಶಿಸುವ ಕಾನೂನು ನಮಗೆ ಬೇಕಾಗಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ‘ಪುಣ್ಯಕೋಟಿ’ ಯೋಜನೆ ಪ್ರಾರಂಭ ಆಯಿತು. ಬಿಜೆಪಿ ಶಾಸಕರು ಯಾರೂ ಒಂದೇ ಒಂದು ಹಸುವನ್ನೂ ದತ್ತು ಪಡೆಯಲಿಲ್ಲ” ಎಂದು ಪ್ರಿಯಾಂಕ್‌ ಖರ್ಗೆ ಟಾಂಗ್‌ ನೀಡಿದರು.

ಈ ಸುದ್ದಿ ಓದಿದ್ದೀರಾ? ಷರತ್ತು ಇಲ್ಲದೆ ಗ್ಯಾರಂಟಿ ಯೋಜನೆ ಜಾರಿ ಮಾಡಿ, ಇಲ್ಲದಿದ್ದರೆ ವಿರೋಧಿ ಅಭಿಯಾನ: ಎಚ್‌ಡಿಕೆ ಎಚ್ಚರಿಕೆ

“ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನರು ಅವರನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರೀಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ” ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ...

ಕರ್ನಾಟಕದ ಜಯವನ್ನು ಮಧ್ಯಪ್ರದೇಶದಲ್ಲಿ ಪುನರಾವರ್ತಿಸಲಿದ್ದೇವೆ: ರಾಹುಲ್ ಗಾಂಧಿ

ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಹಿರಿಯ ನಾಯಕರು...

ನೀತಿ ಆಯೋಗದ ಸಭೆಗೆ ಹಾಜರಾಗದೆ ಕರ್ನಾಟಕಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ : ಬಿಜೆಪಿ

ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ...

ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ 'ಪನಿಶ್ಮೆಂಟ್ ಮಾಡೋದು ದೊಡ್ಡ...