ಬಡವರಿಗೆ ನೀಡಿದ್ರೆ ರಾಜ್ಯ ದಿವಾಳಿ; ಅಂಬಾನಿ, ಅದಾನಿಗೆ ಕೊಟ್ರೆ ಅಭಿವೃದ್ಧಿನಾ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Date:

  • ‘ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವ ಬಗ್ಗೆ ಸರ್ಕಾರದಿಂದ ಪರಿಶೀಲನೆ’
  • ‘ನಮ್ಮ ಸರ್ಕಾರದ ಕ್ಷೀರ ಭಾಗ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ವುಗೆ ಗಳಿಸಿದೆ’

ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು 54 ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಮಕ್ಕಳು‌ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದರೆ ಮಾತ್ರ ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಎಲ್ಲಾ ಜಾತಿಯ ಎಲ್ಲಾ ಧರ್ಮದ ಬಡವರು ಮತ್ತು ಮಧ್ಯಮ ವರ್ಗದವರ ಮಕ್ಕಳ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಹತ್ತು ವರ್ಷಗಳಿಂದ ಪ್ರತೀ ದಿನ ಲಕ್ಷಾಂತರ ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗುವಂತೆ ಮಾಡಿದ್ದೇವೆ. ಹೀಗಾಗಿ ನಮ್ಮ ಹೆಮ್ಮೆಯ ಈ ಯೋಜನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದೆ” ಎಂದರು.

ಮೋದಿಯಿಂದ ಸುಳ್ಳು

“ಬಡವರು, ಮಧ್ಯಮ ವರ್ಗದವರ ಬದುಕಿಗೆ ಅನುಕೂಲ ಆಗುವ ಕಾರ್ಯಕ್ರಮವನ್ನು ನಾವು ರೂಪಿಸಿದರೆ ಬಿಜೆಪಿಯವರು ಅಡ್ಡಗಾಲು ಹಾಕಿ ಕಾರ್ಯಕ್ರಮ‌ ವಿಫಲಗೊಳಿಸಲು ಯತ್ನಿಸಿದರು. ಸ್ವತಃ ಪ್ರಧಾನಿ ಮೋದಿಯವರು ಬಡವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅಪ್ಪಟ ಸುಳ್ಳು ಹೇಳಿದರು” ಎಂದು ಟೀಕಿಸಿದರು.

ಕ್ಷೀರ ಭಾಗ್ಯ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೌರಿ ಲಂಕೇಶ್ ಹಂತಕರಿಗೆ ಶೀಘ್ರವೇ ದೊರೆಯಲಿ ಶಿಕ್ಷೆಯ ಮೋಕ್ಷ!

“ಅಂಬಾನಿ, ಅದಾನಿಗೆ ಕೊಟ್ಟರೆ ದೇಶದ ಆರ್ಥಿಕತೆಗೆ ನಷ್ಟ ಆಗುವುದಿಲ್ಲವೇ ಪ್ರಧಾನಿ ಮೋದಿಯವರೇ, ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು ಬಡವರು ಮಧ್ಯಮ ವರ್ಗದವರು ಸಮಾಧಾನದಿಂದ ಎರಡು ಹೊತ್ತು ಊಟ ಮಾಡಿದರೆ ವಿರೋಧಿಸಬೇಡಿ” ಎಂದರು.

“ಕೆ.ಎನ್.ರಾಜಣ್ಣ ಅವರನ್ನು ರಾಜಕೀಯವಾಗಿ ಕಳೆದುಕೊಂಡರೆ ಅದು ಮಧುಗಿರಿಯ ಜನತೆಗೆ ಬಹಳ ದೊಡ್ಡ ಲಾಸ್ ಆಗುತ್ತದೆ. ರಾಜಣ್ಣ ಬಡವರ ಪರವಾಗಿ ಸಿಕ್ಕಾಪಟ್ಟೆ ಕೆಲಸ ಮಾಡಿದ್ದಾರೆ. ಮಧುಗಿರಿಯನ್ನು ಜಿಲ್ಲೆ ಮಾಡುವ ಕೆ.ಎನ್.ರಾಜಣ್ಣ ಅವರ ಬೇಡಿಕೆಯನ್ನು ನಾನು ಖಂಡಿತ ಪರಿಶೀಲಿಸುತ್ತೇನೆ. ಮಧುಗಿರಿಯಲ್ಲಿರುವ ಏಷ್ಯಾ ಖಂಡದಲ್ಲೇ ಪ್ರಸಿದ್ದವಾಗಿರುವ ಏಕಶಿಲೆ ಬೆಟ್ಟಕ್ಕೆ ರೋಪ್ ವೆ ಹಾಕಿಸುತ್ತೇವೆ” ಎಂದು ಭರವಸೆ ನೀಡಿದರು.

“ಎತ್ತಿನಹೊಳೆ ಯೋಜನೆಗೆ ಸಮರ್ಪಕವಾಗಿ ಹಣ ಕೊಡದೆ ಬಿಜೆಪಿ ಜಿಲ್ಲೆಯ ಜನತೆಗೆ ವಂಚಿಸಿತು. ತುಂಗಾ ಮೇಲ್ದಂಡೆ ಯೋಜನೆಗೆ ಹಿಂದಿನ ಬಿಜೆಪಿ ಸರ್ಕಾರ ನೆರವು ನೀಡಲಿಲ್ಲ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು ಎನ್ನುವ ನಮ್ಮ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪುತ್ತಿಲ್ಲ” ಎಂದು ಹೇಳಿದರು.

ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್, ಶಾಸಕರಾದ ರಂಗನಾಥ್, ಷಡಾಕ್ಷರಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....