ಬಸ್ ನಿಲುಗಡೆಗಾಗಿ ನಿರ್ವಾಹಕ ಮತ್ತು ಚಾಲಕರ ಮೇಲೆ ಮಹಿಳೆಯಿಂದ ಹಲ್ಲೆ, ದೂರು ದಾಖಲು

Date:

  • ಬಸ್‌ನ ನಿರ್ವಾಹಕರಿಗೆ ದಾಬಸ್‌ಪೇಟೆಗೆ ತೆರಳಬೇಕು ಎಂದ ಮಹಿಳೆ
  • ಚಳ್ಳಕೆರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ ನಿಗಮ

ಅಂತರರಾಜ್ಯ ಬಸ್‌ನಲ್ಲಿ ಓರ್ವ ಮಹಿಳೆ ಉಚಿತ ಪ್ರಯಾಣ ಬೆಳೆಸಿ, ಬಸ್‌ನ ನಿರ್ವಾಹಕ ಮತ್ತು ಚಾಲಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮರುದಿನ ತನ್ನ ಕಡೆಯವರನ್ನು ಕರೆದುಕೊಂಡು ಬಂದು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಚಳ್ಳಕೆರೆ ಪೋಲಿಸ್ ಠಾಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದೂರು ದಾಖಲು ಮಾಡಿದೆ.

- Advertisement -

ಏನಿದು ಘಟನೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-6ರ KA 57 F-1065 ನಂಬರ್‌ ಬಸ್‌ ಅನ್ನು ರಾಯದುರ್ಗ-ಬೆಂಗಳೂರು ಅಂತರರಾಜ್ಯ ಮಾರ್ಗಕ್ಕೆ ನಿಯೋಜಿಸಲಾಗಿದೆ. ಈ ಬಸ್‌ ಅಂತರರಾಜ್ಯದ ಏಕ ಮಾರ್ಗ ರಹದಾರಿಯ ವಾಹನವಾಗಿದೆ. ಮಹಿಳಾ ಪ್ರಯಾಣಿಕರು “ಶಕ್ತಿ” ಯೋಜನೆಯಡಿಯಲ್ಲಿ ಈ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶವಿದೆ.

ಜೂನ್‌ 20ರಂದು ಬೆಳಗ್ಗೆ 6:30 ಗಂಟೆಗೆ ಓರ್ವ ಮಹಿಳಾ ಪ್ರಯಾಣಿಕರು ದಾಬಸ್‌ಪೇಟೆಗೆ ತೆರಳಲು ಚಳ್ಳಕೆರೆಯಲ್ಲಿ ಈ ಬಸ್‌ ಹತ್ತಿದ್ದಾರೆ. ಈ ವೇಳೆ, ಬಸ್‌ನ ನಿರ್ವಾಹಕರಿಗೆ ದಾಬಸ್‌ಪೇಟೆಗೆ ತೆರಳಬೇಕು ಎಂದು ಹೇಳಿದ್ದಾರೆ.

ನಿರ್ವಾಹಕರು ಇದು ಅಂತರ ರಾಜ್ಯ ವಾಹನವಾಗಿದ್ದು, ದಾಬಸ್ ಪೇಟೆ ಬಳಿ ನಿಲುಗಡೆ‌ ಇರುವುದಿಲ್ಲ. ನೀವು ತುಮಕೂರಿಗೆ ಬೇಕಾದರೆ ತೆರಳಿ, ಅಲ್ಲಿಂದ ಬೇರೆ ವಾಹನದಲ್ಲಿ ಹೋಗಬಹುದು ಎಂದು ಹೇಳಿದ್ದಾರೆ.

ಇದಕ್ಕೆ ಮಹಿಳೆ ಹಿರಿಯೂರಿಗೆ ಟಿಕೆಟ್‌ ನೀಡಿ ನಾನು ಅಲ್ಲಿಂದ ಬೇರೆ ಬಸ್‌ನಲ್ಲಿ ದಾಬಸ್‌ಪೇಟೆಗೆ ತೆರಳುತ್ತೇನೆ ಎಂದು ಹೇಳಿ ಟಿಕೆಟ್‌ ಪಡೆದುಕೊಂಡಿದ್ದಾರೆ. ಮಹಿಳೆ ಹಿರಿಯೂರಿನಲ್ಲಿಯೂ ಇಳಿಯದೆ, ಮತ್ತೊಮ್ಮೆ ತುಮಕೂರಿಗೆ ಟಿಕೆಟ್‌ ಪಡೆದು ಪ್ರಯಾಣ ಬೆಳೆಸಿದ್ದಾರೆ. ಬಳಿಕ ನಿರ್ವಾಹಕರು ತುಮಕೂರಿನಲ್ಲಿ ಇಳಿಯಲು ತಿಳಿಸಿದ್ದಾರೆ.

ಮಹಿಳೆ ತುಮಕೂರಿನಲ್ಲಿಯೂ ಇಳಿಯದೆ, ಬಸ್‌ನ ಎಲ್ಲ ಪ್ರಯಾಣಿಕರ ಮುಂದೆ ತನ್ನ ಚಪ್ಪಲಿ ತೆಗೆದುಕೊಂಡು ನಾನು ಇಲ್ಲಿ ಇಳಿಯುವುದಿಲ್ಲ ನೀನು ದಾಬಸ್ ಪೇಟೆಗೆ ಹೋಗಬೇಕು ಅಲ್ಲಿಯೇ ನಾನು‌ ಇಳಿಯುವುದು ‌ಎಂದು ನಿರ್ವಾಹಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.

ನಿರ್ವಾಹಕರು ಮಹಿಳೆಯಾಗಿರುವ ಕಾರಣ ಏನೂ ಮಾತನಾಡದೇ, ಅವರ ಹತ್ತಿರಕ್ಕೂ ಹೋಗದೆ, ದಾಬಸಪೇಟೆಗೆ ನಿಲುಗಡೆ ಇಲ್ಲದಿದ್ದರೂ ಸಹ ದಾಬಸ್‌ಪೇಟೆಯ ಫ್ಲೆ ಓವರ್ ಹತ್ತಿರ, ಚಾಲಕರಿಗೆ ತಿಳಿಸಿ ಬಸ್‌ ನಿಲುಗಡೆ ನೀಡಿ ಮಹಿಳೆಯನ್ನು ಇಳಿಸಿದ್ದಾರೆ ಎಂದು ನಿಗಮ ಮಾಹಿತಿ ನೀಡಿದೆ.

ಮರುದಿನ, ಜೂನ್ 22ರಂದು ಬೆಳಗ್ಗೆ 6:30 ಗಂಟೆಗೆ ಅದೇ ಮಾರ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಅದೇ ಚಾಲನಾ ಸಿಬ್ಬಂದಿ ಮೇಲೆ ಚಳ್ಳಕೆರೆ ಸರ್ಕಲ್‌ನಲ್ಲಿ ಬಸ್‌ನ ನಿರ್ವಾಹಕರು ಬಸ್‌ನಿಂದ ಪ್ರಯಾಣಿಕರನ್ನು ಇಳಿಸುತ್ತಿರುವಾಗ ಏಕಾಏಕಿ ಮಹಿಳೆಯ ಕಡೆಯವರು ಮೂರು ಮಂದಿ ಬಂದು ನಿರ್ವಾಹಕನ ಮೇಲೆ ಮನಸೋಇಚ್ಛೆ ಹಲ್ಲೆ‌ ಮಾಡಿದ್ದಾರೆ. ಇದನ್ನು ಗಮನಿಸಿದ ಚಾಲಕರು‌‌ ನಿರ್ವಾಹಕರನ್ನು ಹಲ್ಲೆಯಿಂದ ತಪ್ಪಿಸಲು ಮುಂದಾದಾಗ ಅವರ ಮೇಲೂ ಸಹ ಹಲ್ಲೆ‌ ನಡೆಸಿದ್ದಾರೆ‌ ಎಂದು ಹೇಳಿದೆ.

ಕೂಡಲೇ ಚಾಲಕ ಮತ್ತು ನಿರ್ವಾಹಕರನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ. ಪ್ರಸ್ತುತ ನಿಗಮದ ಸಿಬ್ಬಂದಿ ಆಸ್ಪತ್ರೆಯಲ್ಲಿಯೇ ಇದ್ದಾರೆ. ನಿರ್ವಾಹಕನ ಎದೆ ಮತ್ತು ಕೊರಳಿಗೆ ಪೆಟ್ಟು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಅಥವಾ ದಾವಣಗೆರೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಲಾಗಿದೆ ಎಂದು ನಿಗಮ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಶಾಲಾ ಮಕ್ಕಳಿಗೆ ಬ್ಯಾಗ್ ಭಾರ: ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

ಈ ಸಂಬಂಧ ಹಲ್ಲೆ ಮಾಡಿದ ವ್ಯಕ್ತಿಗಳ ಮೇಲೆ ಚಳ್ಳಕೆರೆ ಪೋಲಿಸ್ ಠಾಣೆಯಲ್ಲಿ ನಿಗಮದ ವತಿಯಿಂದ ದೂರು ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಹೇಳಿದೆ.

ನಿಗಮದ ಚಾಲನಾ ಸಿಬ್ಬಂದಿಗಳಿಗೆ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಲು ಸೂಚನೆ ಹಾಗೂ ತಿಳಿವಳಿಕೆ ನೀಡಲಾಗಿದೆ. ಅದೇ ರೀತಿ ಪ್ರಯಾಣಿಕರು ಸಹ ಚಾಲನಾ ಸಿಬ್ಬಂದಿಗಳೊಂದಿಗೆ ಸಹಕರಿಸಲು ಕೆಎಸ್‌ಆರ್‌ಟಿಸಿ ಕೋರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...