ಮೂರು ದಿನದಲ್ಲೇ ಕಾಮಗಾರಿ – ₹5 ಕೋಟಿ ಹಣ ಮಂಜೂರು; ಎಂಜಿನಿಯರ್ ಕೆಲಸಕ್ಕೆ ಹೈಕೋರ್ಟ್ ಅಚ್ಚರಿ

Date:

ಲಾಕ್‌ಡೌನ್‌ ಸಮಯದಲ್ಲಿ ಎಲ್ಲ ಕಚೇರಿಗಳು ಮುಚ್ಚಿದ್ದಾಗಲೂ ಮೂರು ದಿನಗಳಲ್ಲಿ ಕೆರೆ ಕಾಮಗಾರಿ ಪೂರ್ಣಗೊಳಿಸಿದ್ದಾರೆಂದು ಗುತ್ತಿಗೆದಾರರಿಗೆ ಎಂಜಿನಿಯರ್‌ವೊಬ್ಬರು ಐದು ಕೋಟಿ ರೂ. ಬಿಡುಗಡೆ ಮಾಡಿದ್ದರು. ಕಚೇರಿಗಳು ಮುಚ್ಚಿದ್ದಾಗಲೂ ಸುಳ್ಳು ಹಾಜರಾತಿ ಸೃಷ್ಟಿಸಿ, ಬಿಲ್‌ ಮಂಜೂರು ಮಾಡಿದ ಎಂಜಿನಿಯರ್ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳದೇ ಇರುವುದನ್ನು ಕಂಡು ಕರ್ನಾಟಕ ಹೈಕೋರ್ಟ್‌ ಅಚ್ಚರಿ ಮತ್ತು ಆಘಾತ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ಮಂಡ್ಯ ಜಿಲ್ಲೆಯಲ್ಲಿ 2019ರ ಅಕ್ಟೋಬರ್‌ನಲ್ಲಿ ಭಾರೀ ಮಳೆಯಾಗಿ ಪ್ರವಾಹ ಬಂದಿತ್ತು. ಆ ಸಮಯದಲ್ಲಿ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಹರಳಹಳ್ಳಿ ಮತ್ತು ಹೊಸಹೊಳಲು ಕೆರೆಗಳು ಕೋಡಿ ಬಿದ್ದಿದ್ದವು. ಆ ಕಾರಣಕ್ಕೆ ಕೆರೆಗಳು ಹಾಳಾಗಿವೆ, ಅವುಗಳನ್ನು ಅಭಿವೃದ್ಧಿ ಮಾಡಬೇಕೆಂದು 5 ಕೋಟಿ ರೂ. ಮೊತ್ತದಲ್ಲಿ ಕೆರೆ ಕಾಮಗಾರಿ ಗುತ್ತಿಗೆಯನ್ನು ಪಿ.ಕೆ ಶಿವರಾಮು ಎಂಬಾತನ ಆರ್‌ಕೆಬಿ ಬ್ರದರ್ಸ್‌, ಇನ್‌ಸ್ಟ್ರಪೋಪ್‌ ಪ್ರೊವೆಂಚರ್ ಪ್ರೈವೆಟ್ ಲಿಮಿಟೆಡ್‌ಗೆ ನೀಡಲಾಗಿತ್ತು.

ತುರ್ತು ಕಾಮಗಾರಿಯೆಂದು ಬಿಡ್‌ ಕರೆಯದೇ 2019ರ ಅಕ್ಟೋಬರ್‌ನಲ್ಲಿ ಗುತ್ತಿಗೆ ನೀಡಲಾಗಿತ್ತು. ಆದರೆ, 2020ರ ಜನವರಿಯಲ್ಲಿ ಕಾಮಗಾರಿಗೆ ಅನುಮತಿ ನೀಡಲಾಗಿತ್ತು. ಅದಾದ ಎರಡು ತಿಂಗಳ ನಂತರ, 2020ರ ಮಾರ್ಚ್ 27ರಂದು (ಮಾರ್ಚ್‌ 24ರಿಂದಲೇ ಲಾಕ್‌ಡೌನ್‌ ಜಾರಿಯಾಗಿತ್ತು) ವರ್ಕ್‌ ಆರ್ಡರ್ ಪಡೆದ ಗುತ್ತಿಗೆದಾರ, ಮಾರ್ಚ್‌ 31ರಂದು ಕಾಮಗಾರಿ ಮುಗಿದಿದೆ ಎಂದು ಬಿಲ್‌ ಕ್ಲೈಮ್ ಮಾಡಿದ್ದರು. ಕಾಮಗಾರಿ ನಡೆಸಿದ ಗುತ್ತಿಗೆದಾರನಿಗೆ 5,02,78,000 ರೂ. ಹಣವನ್ನು ಹೇಮಾವತಿ ಎಡದಂಡೆ ನಾಲಾ ವಿಭಾಗದ ಕಾರ್ಯಾನಿರ್ವಾಹಕ ಎಂಜಿನಿಯರ್ ಕೆ ಶ್ರೀನಿವಾಸ್‌ ಮಂಜೂರು ಮಾಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಲಾಕ್‌ಡೌನ್‌ ಸಮಯದಲ್ಲಿ ಎಲ್ಲ ಕಚೇರಿಗಳು ಮುಚ್ಚಿದ್ದಾಗಲೂ ಗುತ್ತಿಗೆದಾರನಿಗೆ ಬಿಲ್‌ ಮಂಜೂರು ಮಾಡಲು ಹೇಗೆ ಸಾಧ್ಯವೆಂದು ಗುತ್ತಿಗೆ ಪ್ರಕರಣದ ಬೆನ್ನುಬಿದ್ದ ರೈತಸಂಘದ ನಾಗೇಗೌಡ ಎಂಬವರು ಕಾಮಗಾರಿ ಸಂಬಂಧ ಹಲವು ಮಾಹಿತಿಗಳನ್ನು ಕಲೆ ಹಾಕಿ, ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಪ್ರಕರಣದಿಂದ ತಮ್ಮನ್ನು ಖುಲಾಸೆಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಶ್ರೀನಿವಾಸ್, “ಕೆಲವು ಕಾಮಗಾರಿಗಳನ್ನು ತುರ್ತಾಗಿ ಕಾರ್ಯಗತಗೊಳಿಸಬೇಕಾದಾಗ ಕರ್ನಾಟಕ ಪಾರದರ್ಶಕತೆ ಕಾಯಿದೆಯ ಸೆಕ್ಷನ್ 4(ಜಿ) ಅಡಿಯಲ್ಲಿ ವಿನಾಯಿತಿ ಪಡೆಯುವಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ” ಎಂದು ವಾದಿಸಿದ್ದರು. ಅವರ ವಾದವನ್ನು ಆಲಿಸಿದ್ದ ಲೋಕಾಯುಕ್ತ ಎಂಜಿನಿಯರ್ ಪ್ರಕರಣದಲ್ಲಿ ಯಾವುದೇ ದೋಷಗಳಿಲ್ಲವೆಂದು ಹೇಳಿತ್ತು.

ಬಳಿಕ, ನಾಗೇಗೌಡರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಆಘಾತ ವ್ಯಕ್ತಪಡಿಸಿದ್ದಾರೆ. “ದಾಖಲೆಗಳು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತವನ್ನುಂಟುಮಾಡುತ್ತವೆ… ಈ ಪ್ರಕರಣದಲ್ಲಿ ಸಕ್ಷಮ ಪ್ರಾಧಿಕಾರವು ಕ್ರಮ ಕೈಗೊಳ್ಳದೇ ಇರುವುದು ಮತ್ತಷ್ಟು ಆಘಾತವನ್ನುಂಟುಮಾಡಿದೆ. ಲೋಕಾಯುಕ್ತದಲ್ಲಿಯೂ ಪ್ರಕರಣದ ವಿಚಾರಣೆ ಈಗಾಗಲೇ ಮುಕ್ತಾಯಗೊಂಡಿದೆ ಎಂಬುದು ಆಶ್ಚರ್ಯಕರವಾಗಿದೆ. ಈಗ ನಿವೃತ್ತರಾಗಿರುವ ಎಂಜಿನಿಯರ್ ಕೆ ಶ್ರೀನಿವಾಸ್ ತಮ್ಮ ಹಣವನ್ನಾಗಲೀ, ಸಕ್ಷಮ ಪ್ರಾಧಿಕಾರವನ್ನಾಗಲಿ ಗುತ್ತಿಗೆದಾರನಿಗೆ ಕೊಟ್ಟಿಲ್ಲ. ಅವ್ಯವಹಾರದಲ್ಲಿ ನಷ್ಟವಾಗಿರುವುದು ಸಾರ್ವಜನಿಕರ ಹಣ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ಸಂಬಂಧ ಸರ್ಕಾರದ ಪ್ರತಿಕ್ರಿಯೆ ಕೇಳಿರುವ ಹೈಕೋರ್ಟ್‌, ವಿಚಾರಣೆಯನ್ನು ಏಪ್ರಿಲ್‌ 5ಕ್ಕೆ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...

ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು...

ಹಾಸನ, ಮಂಡ್ಯದಲ್ಲಿ ಬಿಜೆಪಿ ನಾಯಕರ ಸಹಕಾರ ದೊರೆತಿಲ್ಲ: ಹೆಚ್‌ ಡಿ ದೇವೇಗೌಡ

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರು...