ಭಾಲ್ಕಿ | ಸೆಪ್ಟೆಂಬರ್ ಅಂತ್ಯದೊಳಗೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬರೆಸಿ

Date:

Advertisements

ಬೀದರ್‌ ಜಿಲ್ಲೆಯ ಭಾಲ್ಕಿ ಪಟ್ಟಣದ ಎಲ್ಲ ಅಂಗಡಿ ಮುಗ್ಗಟ್ಟು ನಾಮಫಲಕಗಳ ಮೇಲೆ ಸೆಪ್ಟೆಂಬರ್ ಅಂತ್ಯದೊಳಗೆ ಶೇ.60ರಷ್ಟು ದಪ್ಪ ಅಕ್ಷರದಲ್ಲಿ ಕನ್ನಡ ಭಾಷೆಯಲ್ಲಿ ಬರೆಸಬೇಕು ಇಲ್ಲದಿದ್ದರೆ ಪುರಸಭೆ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಜಿಲ್ಲಾ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಭಾಲ್ಕಿ ಪುರಸಭೆ ಕಚೇರಿಯಲ್ಲಿ ಜಿಲ್ಲಾ ನಮ್ಮ ಕರ್ನಾಟಕ ಸೇನೆಯ ಅಧ್ಯಕ್ಷ ಗಣೇಶ ಪಾಟೀಲ್ ನೇತೃತ್ವದಲ್ಲಿ ಮುಖ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ʼಎಲ್ಲ ನಾಮಫಲಕಗಳ ಮೇಲೆ ಶೇ.60ರಷ್ಟು ಕನ್ನಡ ಭಾಷೆ ಬರೆಸುವ ಸಂಬಂಧ ಕಳೆದ ಫೆಬ್ರವರಿ ತಿಂಗಳಲ್ಲಿ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಪುರಸಭೆ ಕಚೇರಿಯಲ್ಲಿ ಸಭೆ ನಡೆದಿತ್ತು. ಆ ಸಭೆಯಲ್ಲಿ ಕೆಲ ವ್ಯಾಪಾರಸ್ಥರು ನಾಮಫಲಕ ಬದಲಾವಣೆಗೆ ಕೆಲ ದಿನಗಳ ಸಮಯವಕಾಶ ಕೋರಿದ್ದರು.  ಆದರೆ ಸಭೆ ನಡೆದು ಸುಮಾರು ಏಳು ತಿಂಗಳು ಕಳೆದರೂ ಕೂಡ ನಿರೀಕ್ಷಿತ ಮಟ್ಟದಲ್ಲಿ ನಾಮಫಲಕಗಳ ಮೇಲೆ ಕನ್ನಡ ಭಾಷೆ ಬಳಕೆ ಆಗಿಲ್ಲʼ ಎಂದು ಅಸಮಧಾನ ವ್ಯಕ್ತಪಡಿಸಿದರು.

Advertisements

ʼಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಮುಂದಿನ 15 ದಿನದೊಳಗೆಕನ್ನಡಯೇತರ ನಾಮಫಲಕ ಬದಲಾವಣೆಗೆ ಸೂಚಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆʼ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಿಂದೂ ರಾಷ್ಟ್ರದ ಉದ್ದೇಶ ಸಾಕಾರಗೊಳಿಸಲು ಸ್ಥಳೀಯ ಸಂಸ್ಕೃತಿ ನಾಶ ಮಾಡಲು ಹೊರಟಿದ್ದಾರೆ: ಎ ನಾರಾಯಣ

ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ಪ್ರಮುಖರಾದ ಬಸವರಾಜ ಕಾರಬಾರಿ, ಸುದೀಪ ತೂಗಾವೆ, ಜಗದೀಶ ಪಾಟೀಲ್, ರಾಜರತನ ಗಡಿಪಾಟೀಲ್, ನಿಸಾರ ಪಾಶಾ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ನಾಮಫಲಕಗಳಲ್ಲಿ ಏನಿರಬೇಕು ಎನ್ನುವುದೂ ತುಂಬಾ ಮುಖ್ಯ. ಆ ಸಿದ್ದರಾಮಯ್ಯನು ತಲೆ ಇಲ್ಲದೆ ಏನೋ ಒಂದು ಕಾನೂನು ಮಾಡಿದ್ದಾನೆ.

    ನಾಮಫಲಕಗಳಲ್ಲಿ ಕನಿಷ್ಠ ಈ ವಿಷಯಗಳನ್ನು ನಮೂದಿಸರಬೇಕು : ಮಾಲೀಕನ ಹೆಸರು, ಅಂಗಡಿಯ ಪೂರ್ಣ ಪೋಸ್ಟಲ್ ವಿಳಾಸ, ಟೆಲಿಫೋನ್ ಅಥವಾ ಮೊಬೈಲ್ ಸಂಖ್ಯೆ, ವ್ಯವಹಾರದ ಸಮಯ ಮತ್ತು ರಜಾ ದಿನ.

    ಮೇಲಿನ ವಿಷಯಗಳನ್ನು ಒಳಗೊಂಡು ಕಾನೂನು ಮಾಡಿದ್ದರೆ ಅದನ್ನು ಅನುಷ್ಠಾನ ಮಾಡಲು ಸರಿ ಇರುತ್ತಿತ್ತು ಹಾಗೂ ಕೋರ್ಟಿನ ಬೆಂಬಲವೂ ಇರುತ್ತಿತ್ತು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X