ಯಾದಗಿರಿ | ಮಧ್ಯಾಹ್ನದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Date:

Advertisements

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಸರ್ಕಾರಿ ಉರ್ದು ಶಾಲೆ, ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಂಬೇಡ್ಕರ್‌ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮಹಾಂತೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ಶುಕ್ರವಾರ ನಡೆದಿದೆ.

ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕಾಗಿ ಅನ್ನ-ಸಾರು ಮಾಡಲಾಗಿತ್ತು. ಆ ಆಹಾರವನ್ನು ಸೇವಿಸಿದ ಬಳಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವರಿಗೆ ವಾಂತಿಯಾಗಿದ್ದು, ಕೆಲವರಿಗೆ ಹೊಟ್ಟೆ ನೋವು, ತಲೆ ಸುತ್ತು ಕಾಣಿಸಿಕೊಂಡಿದೆ. ಅಸ್ವಸ್ಥ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಗೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು, ಜಿಲ್ಲಾಧಿಕಾರಿ ಡಾ. ಸುಶೀಲಾ, ಜಿಲ್ಲಾ ಪಂಚಾಯತಿ ಸಿಇಒ ಗರೀಮಾ ಪನ್ವಾರ್ ಹಾಗೂ ಎಸ್‌ಪಿ ಸಂಗೀತಾ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದು, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

Advertisements

ಊಟದಲ್ಲಿ ಬಳೆ ಚೂರು: ಮಧ್ಯಾಹ್ನ ಊಟ ಮಾಡುವಾಗ ಕೆಲ ಮಕ್ಕಳ ಊಟದಲ್ಲಿ ಗಾಜಿನ ಬಳೆಗಳ ಚೂರುಗಳು ಬಂದಿವೆ ಎಂದು ಬಿಸಿಯೂಟ ಸೇವಿಸಿದ ಮಕ್ಕಳು ದೂರಿದ್ದಾರೆ. ಶಾಲೆಗಳಿಗೆ ಬಿಸಿಯೂಟ ಪೂರೈಸುತ್ತಿದ್ದ ಏಜೆನ್ಸಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗ್ರಾಮೀಣ ಪ್ರದೇಶದಲ್ಲಿ ಬಡ ಕೂಲಿ ಕಾರ್ಮಿಕರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಾರೆ. ಗುಣಮಟ್ಟವಲ್ಲದ ಅಡುಗೆ ತಯಾರಿಸಿ ಮಕ್ಕಳ ಜೀವದ ಜೊತೆ ಆಟವಾಡುತ್ತಿರುವ ಖಾಸಗಿ ಏನ್‌ಜಿಒ ವಿರುದ್ದ ಕ್ರಮ ಕೈಗೊಂಡು. ನಮ್ಮ ಮಕ್ಕಳು ಓದುತ್ತಿರುವ ಶಾಲೆಗಳಲ್ಲಿಯೇ ಬಿಸಿಊಟ ತಯಾರಿಸಬೇಕು” ಎಂದು ಪೋಷಕರು ಒತ್ತಾಯಿಸಿದ್ದಾರೆ.

“ಶಾಲೆಗಳಿಗೆ ಬಿಸಿಯೂಟ ಪೂರೈಕಿಸುವ ಏಜೆನ್ಸಿಯು ಜಿಲ್ಲಾ ಸಚಿವ ಶರಣ ಬಸಪ್ಪಗೌಡ ದರ್ಶನಾಪು‌ರ್ ಅವರ ಸಂಬಂಧಿಯದ್ದಾಗಿದ್ದು, ಅಧಿಕಾರಿಗಳು ಕ್ರಮ ಕೈಗೊಳ್ಳುವ ಬಗ್ಗೆ ಅನುಮಾನ ಇದೆ. ಪ್ರಾಮಾಣಿಕ ಅಧಿಕಾರಿಯಿಂದ ತನಿಖೆ ನಡೆಸಬೇಕು” ಎಂದು ಸರ್.ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಪ್ರದೀಪ್ ಆಗ್ರಹಿಸಿದ್ದಾರೆ.

ಮಕ್ಕಳ ಆಯೋಗ್ಯ ವಿಚಾರಿಸಿ, ಮಾಧ್ಯಮಗಳೊಂದಿಗೆ ಮಾತನಾಡಿದ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು, “ದೇವರ ದಯದಿಂದ ಯಾವುದೇ ರೀತಿಯ ಹೆಚ್ಚಿನ ಅನಾಹುತ ಆಗಿಲ್ಲ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಘಟನೆ ವಿರುದ್ಧ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆ ಬರುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X