ಯಾದಗಿರಿ | ರಸ್ತೆ ಕಳಪೆ ಕಾಮಗಾರಿ ಆರೋಪ; ‘ಬಿಲ್’ ಪಾವತಿ ತಡೆಗೆ ಆಗ್ರಹ

Date:

Advertisements

ವಡಗೇರಾ ತಾಲೂಕಿನ ಗಡ್ಡೆಸೂಗೂರ ಮತ್ತು ಹುಲಕಲ್(ಜೆ) ಗ್ರಾಮದ ನಡುವೆ ಇರುವ ರಸ್ತೆಯ ಕಳಪೆ ಕಾಮಗಾರಿ ನಡೆದಿದೆ. ಕಳಪೆ ಗುಣಮಟ್ಟದಲ್ಲಿ ಕಾಮಗಾರಿ ನಡೆಸಿ, ಹೆಚ್ಚು ‘ಬಿಲ್‌ ಕ್ಲೈಮ್’ ಮಾಡಲಾಗಿದೆ. ಕಾಮಗಾರಿ ಬಗ್ಗೆ ತನಿಖೆ ನಡೆಸಬೇಕು. ಅಲ್ಲಿಯವರೆಗೆ ಬಿಲ್‌ ಪಾವತಿ ಮಾಡದಂತೆ ತಡೆಯಬೇಕು ಎಂದು ಭೀಮ್‌ ಆರ್ಮಿ ಕರ್ನಾಟಕ ಏಕ್ತಾ ಮಿಷನ್ ಆಗ್ರಹಿಸಿದೆ.

ಯಾದಗಿರಿ ಜಿಲ್ಲೆಯ ಲೋಕೋಪಯೋಗಿ ವಿಭಾಗದ ಕಾರ್ಯಪಾಲಕ ಅಭಿಯಂತರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿರುವ ಕಾರ್ಯಕರ್ತರು, ರಸ್ತೆ ಕಾಮಗಾರಿ ಮತ್ತು ಗುಣಮಟ್ಟದ ಕುರಿತು ತನಿಖೆ ನಡೆಬೇಕೆಂದು ಒತ್ತಾಯಿಸಿದ್ದಾರೆ.

“ಉಭಯ ಗ್ರಾಮಗಳ ನಡುವಿನ ರಸ್ತೆ ಕಾಮಗಾರಿಯನ್ನು ಅಂದಾಜು ಪಟ್ಟಿ ಪ್ರಕಾರ ನಡೆಸಲಾಗಿಲ್ಲ. ಬೇಕಾಬಿಟ್ಟಿಯಾಗಿ ಕಾಮಗಾರಿ ನಡೆಸಲಾಗಿದೆ. ರಸ್ತೆಯ ಲೆವೆಲಿಂಗ್ ಮಾಡಿಲ್ಲ. ಜೆ.ಇ ಅವರಿಂದ ರಸ್ತೆಯ ಎಸ್ಟಿಮೇಟ್ ಹೇಳಿದರೆ, ಒಂದು ತಿಂಗಳಾದರೂ ನೀಡಿಲ್ಲ” ಎಂದು ಆರೋಪಿಸಿದ್ದಾರೆ.

Advertisements

“ಕಾಮಗಾರಿಯ ತನಿಖೆ ಆಗುವವರೆಗೂ ಬಿಲ್ ಪಾವತಿ ಮಾಡಬಾರದು. ಸಂಬಂಧಪಟ್ಟ ಜೆ.ಇ ಮತ್ತು ಗುತ್ತಿಗೆದಾರರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ ಸೈದಪ್ಪ.ಎಂ, ಮರೆಪ್ಪ, ಶಾಂತು ಮ್ಯಾಗೇರಿ, ಹಣಮಂತ ವಡಗೇರಾ, ಚಾಂದು ಹುಲಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X