ಯಾದಗಿರಿ | ಅಂಬೇಡ್ಕರ್‌ ಜಯಂತಿ: ಏ.14ರ ನಂತರ ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸಲು ಆಗ್ರಹ

Date:

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್‌ ಜಯಂತಿಯ (ಏಪ್ರಿಲ್ 14) ನಂತರ ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆಯನ್ನು ಘೋಷಿಸಬೇಕು. ಅಂಬೇಡ್ಕರ್‌ ಜಯಂತಿ ಆಚರಣೆ ಸಮಯದಲ್ಲಿ ಯಾವುದೇ ನಿರ್ಬಂಧಗಳಿರಬಾರದು ಎಂದು ಚುನಾವಣಾ ಆಯೋಗವನ್ನು ಕರ್ನಾಟಕ ಭೀಮ್‌ ಸೇನೆ ಒತ್ತಾಯಿಸಿದೆ.

ಯಾದಗಿರಿಯಲ್ಲಿ ಜಿಲ್ಲೆಯ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರವನ್ನು ಸಂಘಟನೆಯ ಕಾರ್ಯಕರ್ತರು ಸಲ್ಲಿಸಿದ್ದಾರೆ. “2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆಯು ಏಪ್ರಿಲ್‌ 10ರಿಂದ ಜಾರಿಯಾಗಬಹುದೆಂದು ಕೆಲವು ಟಿವಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳಾಗುತ್ತಿವೆ. ಇದು ನಿಜವೇ ಆಗಿದ್ದಲ್ಲಿ, ಏಪ್ರಿಲ್ 14ರಂದು ಅಂಬೇಡ್ಕರ್‌ ಜಯಂತಿಯನ್ನು ಆಚರಿಸಲು ರಾಜ್ಯದ ಜನರಿಗೆ ತೊಡಕಾಗುತ್ತದೆ. ಹಾಗಾಗಿ, ಏಪ್ರಿಲ್‌ 14ರ ನಂತರ ನೀತಿಸಂಹಿತೆಯನ್ನು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಚುನಾವಣಾ ನೀತಿ ಸಂಹಿತೆಯಿಂದ ಅಂಬೇಡ್ಕರ್ ಜಯಂತಿ ಆಚರಣೆಗೆ ಯಾವುದೇ ನಿರ್ಬಂಧ ಅನ್ವಯವಾಗದು ಎಂದು ಘೋಷಿಸಬೇಕು. ಆ ಮೂಲಕ, ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರರಿಗೆ ಗೌರವ ಸಲ್ಲಿಸಬೇಕು. ಅಂಬೇಡ್ಕರ್‌ ಜಯಂತಿಯನ್ನು ಆಚರಣೆ ಮಾಡುವ ಜನರ ಭಾವನೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಕ್ಕೊತ್ತಾಯ ಸಲ್ಲಿಸುವ ವೇಳೆ ಸಂಘಟನೆಯ ಮುಖಂಡ ರಮೇಶಕುಮಾರ, ಮರಿಲಿಂಗಪ್ಪ ಚಟ್ನಳ್ಳಿ, ಮಹೇಶ್ ಖಾನಾಪೂರ, ವಾಸುದೇವ, ವಿಶ್ವರಾಧ್ಯ ಸತ್ಯನೋರ, ಆಂಜನೇಯ ಶಿರವಾಳ, ಭೀಮಾಶಂಕರ್ ಬಡಿಗೇರ, ಮಾಳಪ್ಪ ಖಾನಾಪೂರ, ಶ್ರೀಶೈಲ ಚಟ್ನಳ್ಳಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ...

ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ

ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್,...

ಚಾಮರಾಜನಗರ | ಮತಗಟ್ಟೆ ಧ್ವಂಸ ಮಾಡಿದ ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ...

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....