ಯಾದಗಿರಿ | ಅಂಬೇಡ್ಕರ್ ಧ್ವಜಸ್ತಂಭ ತೆರವುಗೊಳಿಸದಂತೆ ಆಗ್ರಹ

Date:

Advertisements

ವಡಗೇರಾ ಗ್ರಾಮದಲ್ಲಿ ಅಳವಡಿಸಿರುವ ಅಂಬೇಡ್ಕರ್ ಧ್ವಜಸ್ತಂಭಕ್ಕೆ ಕೆಲವರು ತಕರಾರು ತೆಗೆದಿದ್ದಾರೆ. ಇದು ಸರಿಯಲ್ಲ. ಆ ಧ್ವಜಸ್ತಂಭವನ್ನು ತೆರವುಗೊಳಿಸುವುದಾದೆ, ಗ್ರಾಮದಲ್ಲಿ ಹಾಕಿರುವ ಎಲ್ಲ ಸಂಘಟನೆಗಳ ನಾಮಫಲಕ ಮತ್ತು ಧ್ವಜಸ್ತಂಭಗಳನ್ನು ತೆರವುಗೊಳಿಸಬೇಕು ಎಂದು ಭೀರ್ಮ್‌ ಆರ್ಮಿ ಹೇಳಿದೆ.

ಸಂಘಟನೆಯ ಮುಖಂಡರು ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ತಾಲೂಕಿನ ವಡಗೇರಾ ಗ್ರಾಮದಲ್ಲಿ ಕುರಕುಂದಾಕ್ಕೆ ಹೋಗುವ ರಸ್ತೆ ಬದಿಯಲ್ಲಿ ಮಹಾ ಮಾನವಾತವಾದಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಧ್ವಜಸ್ತಂಭವನ್ನು ಭೀಮ್‌ ಆರ್ಮಿ ಅಳವಡಿಸಿದೆ. ಆದರೆ, ಇದಕ್ಕೆ ಕೆಲವು ಕಿಡಿಗೇಡಿಗಳು ವಿನಾಕಾರಣ ತಕರಾರು ತೆಗೆದಿದ್ದಾರೆ. ಗ್ರಾಮದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ನಾವು ಅಳವಡಿಸಿದ ಧ್ವಜಸ್ತಂಭ ತೆರವುಗೊಳಿಸುವುದಾದರೆ, ವಡಗೇರಾದಲ್ಲಿ ಅನಧಿಕೃತವಾಗಿ ಹಾಕಲಾಗಿರುವ ಎಲ್ಲ ಸಂಘಟನೆಗಳ ನಾಮಫಲಕ ಮತ್ತು ಧ್ವಜ ಸ್ತಂಭ ತೆರವುಗೊಳಿಸಬೇಕು. ಸಾಮಾಜಿಕ ನ್ಯಾಯ ಕಲ್ಪಿಸಿ ಕೊಡಬೇಕು. ಕೇವಲ ನಮ್ಮ ಧ್ವಜಸ್ತಂಭ ತೆರವಿಗೆ ಮುಂದಾಗಬಾರದು” ಎಂದು ಆಗ್ರಹಿಸಿದ್ದಾರೆ.

Advertisements

“ಅಂಬೇಡ್ಕರ್ ಧ್ವಜಸ್ತಂಭ ತೆರವುಗೊಳಿಸಲು ಮುಂದಾದರೆ, ತಾಲೂಕು ಕಚೇರಿ ಎದುರು ನಾವು ನಿರಂತರ ಧರಣಿ ಸತ್ಯಾಗ್ರಹ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ ಸೈದಪ್ಪ ಎಮ್ ಕಣಜಕರ್, ಶರಣ್ ಎಸ್ ಗೊಂದನವರ್, ಮೌಲಾಲಿ, ಕಲಪ್ಪ ಇನ್ನಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X