ಯಾದಗಿರಿ | ಗೌರವಧನ ಹೆಚ್ಚಳ ಮತ್ತು ಅನುಷ್ಠಾನಕ್ಕೆ ಆಗ್ರಹಿಸಿ ಬಿಸಿಯೂಟ ನೌಕರರ ಪ್ರತಿಭಟನೆ

Date:

ಹಿಂದಿನ ಸರ್ಕಾರ ಬಿಸಿಯೂಟ ನೌಕರರಿಗೆ 1,000 ರೂ. ಗೌರವಧನ ಹೆಚ್ಚಳ ಮಾಡುವುದಾಗಿ ಘೋಷಿಸಿತ್ತು. ಆದರೆ, ಆ ಬಗ್ಗೆ ಆದೇಶ ಹೊರಡಿಸಿ, ಗೌರವಧನ ಜಾರಿ ಮಾಡಲಿಲ್ಲ. ಹಿಂದಿನ ಸರ್ಕಾರದ ಘೋಷಣೆಯನ್ನು ಹೊಸ ಸರ್ಕಾರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜುಲೈ 11ರಂದು ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಪ್ರಧಾನ ಕಾರ್ಯದರ್ಶಿ ಸುರೇಖಾ ಕುಲಕರ್ಣಿ ತಿಳಿಸಿದ್ದಾರೆ.

- Advertisement -

“ಮಧ್ಯಾಹ್ನದ ಬಿಸಿಯೂಟ ಯೋಜನೆ ಪ್ರಾರಂಭವಾದ ವರ್ಷದಿಂದಲೂ ಮಕ್ಕಳ ಶೈಕ್ಷಣಿಕ ಉನ್ನತಿ, ಮಕ್ಕಳ ಗೈರು ಹಾಜರಿ ತಡೆಗಟ್ಟಲು, ಅಪೌಷ್ಠಿಕತೆ ತಡೆಗಟ್ಟಲು ಶಿಕ್ಷಣ ಇಲಾಖೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಳೆದ 21 ವರ್ಷಗಳಿಂದ 1.17 ಲಕ್ಷ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ಸುಮಾರು 58.30 ಲಕ್ಷ ಬಡ, ರೈತ, ಕೃಷಿಕೂಲಿಕಾರರ, ದೀನ ದಲಿತ ಮಕ್ಕಳಿಗೆ ಬಿಸಿ ಆಹಾರ ತಯಾರಿಸಿ, ಶಾಲೆಯನ್ನು ಸ್ವಚ್ಛಗೊಳಿಸಿ ಮಕ್ಕಳಲ್ಲಿ ಶೈಕ್ಷಣಿಕ ಆಸಕ್ತಿ ಮೂಡಿಸುವಲ್ಲಿ ಈ ಮಹಿಳೆಯರ ಪಾತ್ರ ದೊಡ್ಡದಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

“ದಿನಕ್ಕೆ ಸುಮಾರು 6 ಗಂಟೆಗಿಂತಲೂ ಹೆಚ್ಚು ಸಮಯ ಕೆಲಸ ಮಾಡುತ್ತಿರುವ ಈ ನೌಕರರ ಶ್ರಮವನ್ನು ಗುರುತಿಸಿ, ಅವರಿಗೆ 21,000 ಕನಿಷ್ಠ ವೇತನ ಜಾರಿ ಮಾಡಬೇಕು. ಬಿಸಿಯೂಟ ನೌಕರರನ್ನು ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ತಂದು, ನ್ಯಾಯೋಚಿತ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಗ್ರಹಿಸಿದರು.

“ಹಿಂದಿನ ಸರ್ಕಾರ ಬಿಸಿಯೂಟ ನೌಕರರಿಗೆ 1,000 ರೂಪಾಯಿ ಗೌರವಧನ ಹೆಚ್ಚಳ ಮಾಡುವದಾಗಿ ಘೋಷಿಸಿತ್ತು. ಆದರೆ, ಗೌರವಧನವನ್ನು ಬಿಡುಗಡೆ ಮಾಡಲಿಲ್ಲ. ಹೊಸ ಸರ್ಕಾರ ಆ ಹೆಚ್ಚುವರಿ ಗೌರವಧನವನ್ನು ಜಾರಿಗೊಳಿಸಬೇಕು. ಬಿಸಿಯೂಟ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಜುಲೈ 11ರಂದು ಪ್ರತಿಭಟನೆ ನಡೆಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಪ್ರತಿಭಟನೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ನೀಡಬೇಕೆಂದು ಒತ್ತಾಯಿಸಿ, ಪೊಲೀಸ್ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಮನವಿ ಸಲ್ಲಿಸುವ ವೇಳೆ, ಸಂಘಟನೆಯ ಸೌಭಾಗ್ಯ ಮಾಲಗತ್ತಿ, ಶಹಾಜೀದಿಬೇಗಂ, ಸುರೇಖಾ ಕುಲಕರ್ಣಿ, ಪ್ರಕಾಶ ಆಲ್ದಾಳ, ಗೀತಾ ಜಕರೆಡ್ಡಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...