ಯಾದಗಿರಿ | ರೈತ ಹೋರಾಟಗಾರ ಚನ್ನಪ್ಪ ಆನೇಗುಂದಿ ಮೇಲೆ ದೂರು : ಪ್ರಾಂತ ರೈತ ಸಂಘ ಖಂಡನೆ

Date:

Advertisements

ನಕಲಿ ಹಾಗೂ ಕಳಪೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಕಾಳಸಂತೆಯಲ್ಲಿ ಮಾರಾಟ ದಂಧೆ ಕುರಿತು ಗಮನ ಸೆಳೆದ ಕಾರಣಕ್ಕೆ ರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚನ್ನಪ್ಪ ಆನೇಗುಂದಿ ಅವರ ಮೇಲೆ ಕೃಷಿ ಪರಿಕರಗಳ ಮಾರಾಟಗಾರರು ಸುಳ್ಳು ದೂರು ನೀಡಿದ್ದಾರೆ.

ರೈತರಿಗೆ ರಸೀದಿ ನೀಡದೇ ಕೃಷಿ ಪರಿಕರಗಳ ಖರೀದಿಗೆ ಒತ್ತಾಯಿಸುವುದು, ದಾಸ್ತಾನು ಪಟ್ಟಿ, ದರ ಪಟ್ಟಿ ಪ್ರಕಟಿಸದೇ ಕಾಳಸಂತೆ ದರದಲ್ಲಿ ಮಾರಾಟ ಮಾಡುವುದು, ರೈತರು ಕೇಳಿದ ಬೀಜ ,ಕ್ರಿಮಿನಾಶಕ ಹಾಗೂ ಗೊಬ್ಬರ ನೀಡದೇ ಕಳಪೆ ಹಾಗೂ ನಕಲಿ ಬ್ರಾಂಡ್ ವಿರುದ್ಧ ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಗೆ ಆಗ್ರಹಿಸಿದ್ದರು.

ಇದನ್ನು ನ್ಯಾಯೋಚಿತವಾಗಿ ಪರಿಶೀಲಿಸದೇ ಮಾರಾಟಗಾರರ ಸಂಘ ಚನ್ನಪ್ಪ ಅವರ ವಿರುದ್ಧ ದೂರು ದಾಖಲಿಸಿರುವುದನ್ನು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ಅಧ್ಯಕ್ಷ ಯು.ಬಸವರಾಜ, ಪ್ರಧಾನ ಕಾರ್ಯದರ್ಶಿ ಟಿ. ಯಶವಂತ ಅವರು ತೀವ್ರವಾಗಿ ಖಂಡಿಸಿದ್ದಾರೆ.

Advertisements

ಚನ್ನಪ್ಪ ಆನೇಗುಂದಿ ಅವರ ಆರೋಪದಿಂದ ನಮಗೆ ಅವಮಾನ ಆಗಿದೆ ಎಂದು ಸುಮಾರು 400ಕ್ಕೂ ಹೆಚ್ಚು ಕೃಷಿ ಪರಿಕರಗಳ ಮಾರಾಟಗಾರರು ಮೆರವಣಿಗೆ ಮುಖಾಂತರ ಭೀಮರಾಯಗುಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

1003857231
ರೈತ ಹೋರಾಟಗಾರ ಚನ್ನಪ್ಪ ಆನೇಗುಂದಿ

ಜಿಲ್ಲಾ ಪಂಚಾಯತ್ ಸಿಇಓ, ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಮುಂತಾದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲೇ ಉಸ್ತುವಾರಿ ಸಚಿವರಿಗೆ ಆಹವಾಲು ಹೇಳಿಕೊಳ್ಳುವಾಗ ಸುಮ್ಮನಿದ್ದ ಕೃಷಿ ಪರಿಕರಗಳ ಮಾರಾಟಗಾರರು ಅವರೆಲ್ಲರೂ ಕಾರ್ಯಕ್ರಮ ಮುಗಿಸಿ ತೆರಳಿದ ನಂತರ ಕೃಷಿ ಪರಿಕರಗಳ ಮಾರಾಟ ಸಂಘದ ರಾಜ್ಯಾಧ್ಯಕ್ಷ ಬಸನಗೌಡ ಮಾಲಿಪಾಟೀಲ್ ಹಾಗೂ ಅಶೋಕರೆಡ್ಡಿ ಲಿಂಗದಾಳ ಅವರ ನೇತೃತ್ವದಲ್ಲಿ ದೂರು ಹೇಳಿದ್ದಕ್ಕಾಗಿ ಅವಾಚ್ಯವಾಗಿ ನಿಂದಿಸಿ, ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಇಂತಹ ಬೆದರಿಕೆಗಳಿಂದ ರೈತ ಹೋರಾಟವನ್ನು ಬಗ್ಗು ಬಡಿಯಲು ಸಾಧ್ಯವಿಲ್ಲ. ನಕಲಿ ಹಾಗೂ ಕಳಪೆ ಕೃಷಿ ಪರಿಕರಗಳ ಮಾರಾಟ ಮತ್ತು ಕಾಳಸಂತೆ ಮಾರಾಟದ ವಿರುದ್ಧ ರೈತ ಹೋರಾಟ ನಿಲ್ಲಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಕೆಪಿಆರ್‌ಎಸ್ ಕರ್ನಾಟಕ ರಾಜ್ಯ ಸಮಿತಿ ತಿಳಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಧೈರ್ಯವಾಗಿ ದೂರು ಹೇಳಿದ್ದಕ್ಕೆ ನಿಂದನೆ, ಬೆದರಿಕೆ, ದೌರ್ಜನ್ಯ ಎಸಗಿದ ಬಸನಗೌಡ ಮಾಲಿಪಾಟೀಲ್, ಅಶೋಕ ರೆಡ್ಡಿ ಲಿಂಗದಾಳ ಮುಂತಾದವರ ಮೇಲೆ ಶಹಾಪುರ ತಾಲ್ಲೂಕು ಅಧ್ಯಕ್ಷ ಭೀಮಣ್ಣ ಪಟ್ಟೆದಾರ್ ನೀಡಿದ್ದ ದೂರನ್ನು ದಾಖಲಿಸಿಕೊಳ್ಳದೇ ತಿರಸ್ಕರಿಸಿ ದೂರು ಅರ್ಜಿಯ ಮೇಲೆ ತಿರಸ್ಕರಿಸಲಾಗಿದೆ ಎಂದು ಸಹಿ ಮತ್ತು ಶೀಲು ಹಾಕಿದ್ದಾರೆ. ಮಾರಾಟಗಾರರು ನೀಡಿದ ದೂರನ್ನು ದಾಖಲಿಸಿ ರೈತರು ನೀಡಿದ ದೂರನ್ನು ತಿರಸ್ಕರಿಸಿರುವುದು ಪೊಲೀಸರ ಪಕ್ಷಪಾತವನ್ನು ತೋರುತ್ತದೆ ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ: ಕಾರ್ಮಿಕರ ಸ್ಥಿತಿ: ಎಲ್ಲಿಂದ ಎಲ್ಲಿಗೆ? (ಭಾಗ- 1)

ಕೂಡಲೇ ರೈತರು ನೀಡಿರುವ ದೂರನ್ನು ದಾಖಲಿಸಿ ನಿಂದನೆ, ಬೆದರಿಕೆ ದೌರ್ಜನ್ಯ ಎಸಗಿರುವ ಗುಂಪು ಹಲ್ಲೆಗೆ ಪ್ರಚೋದಿಸಿರುವ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷ ಮತ್ತಿತರರನ್ನು ಬಂಧಿಸಬೇಕು. ಕೂಡಲೇ ನಕಲಿ, ಕಳಪೆ ಬೀಜ, ಗೊಬ್ಬರ, ದಾಖಲಾಗಿರುವ ಸುಳ್ಳು ದೂರನ್ನು ರದ್ದುಪಡಿಸಿ ಅನ್ಯಾಯ, ಅಕ್ರಮದ ವಿರುದ್ಧ ,ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ರೈತ ನಾಯಕರಿಗೆ ಸೂಕ್ತ ರಕ್ಷಣೆ ನೀಡಬೇಕು. ಇಲ್ಲವಾದರೆ ಬೃಹತ್ ಪ್ರತಿಭಟನೆ ಎದುರಿಸಬೇಕಾಗುತ್ತದೆ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X